ETV Bharat / bharat

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಮನೀಶ್ ಸಿಸೋಡಿಯಾ

author img

By

Published : Mar 22, 2023, 5:36 PM IST

manish-sisodias-bail-plea-in-delhi-liquor-scam-in-rouse-avenue-court
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಮನೀಶ್ ಸಿಸೋಡಿಯಾ

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ನ್ಯಾಯಾಲಯ ಏಪ್ರಿಲ್ 5 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಕರೆದೊಯ್ದಿದರು. ನಂತರ ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಶೇಷ ಸಿಬಿಐ ನ್ಯಾಯಾಧೀಶ ಎಂ.ಕೆ. ನಾಗಪಾಲ್ ಅವರ ಮುಂದೆ ಸಿಸೋಡಿಯಾರನ್ನು ಹಾಜರುಪಡಿಸಿದ್ದಾರೆ. ನ್ಯಾಯಾಲಯ ಅವರನ್ನು ಏಪ್ರಿಲ್ 5 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಏ. 5 ವರೆಗೆ ತಿಹಾರ್ ಜೈಲಿಗೆ ಸಿಸೋಡಿಯಾ: ಜಾರಿ ನಿರ್ದೇಶನಾಲಯದ ಕೋರಿಕೆಯ ಮೇರೆಗೆ ಮಾರ್ಚ್ 16 ರಂದು ಸಿಸೋಡಿಯಾ ಅವರನ್ನು ನ್ಯಾಯಾಲಯವು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಇದಕ್ಕೂ ಮುನ್ನ ಮಾರ್ಚ್ 10 ರಂದು ಅವರನ್ನು ಏಳು ದಿನಗಳ ಕಾಲ ಇಡಿ ರಿಮಾಂಡ್‌ಗೆ ಕಳುಹಿಸಲಾಗಿತ್ತು. ನಂತರ ಮಾರ್ಚ್ 9 ರಂದು ತಿಹಾರ್ ಜೈಲಿನಿಂದ ಸಿಸೋಡಿಯಾ ಅವರನ್ನು ಇಡಿ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಬುಧವಾರ ನ್ಯಾಯಾಲಯವು ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಿದೆ. ಸಿಸೋಡಿಯಾ ಅವರನ್ನು ಏಪ್ರಿಲ್ 5 ವರೆಗೆ ತಿಹಾರ್ ಜೈಲಿನಲ್ಲಿ ಇರಿಸಲಾಗುತ್ತದೆ.

ಮಾ. 25ಕ್ಕೆ ಮುಂದಿನ ವಿಚಾರಣೆ: ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದಲ್ಲಿ ಉತ್ತರವನ್ನು ಸಲ್ಲಿಸುವಂತೆ ಇಡಿಗೆ ನೋಟಿಸ್ ನೀಡಿದೆ. ಜಾಮೀನು ಅರ್ಜಿಯ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 25 ಕ್ಕೆ ನಿಗದಿಪಡಿಸಿದೆ. ಈ ವೇಳೆ ಸಿಸೋಡಿಯಾ ಪರ ಹಾಜರಾದ ಹಿರಿಯ ವಕೀಲ ದಯಾ ಕೃಷ್ಣನ್ ಜಾಮೀನು ನೀಡುವಂತೆ ಕೋರಿದರು.

ಇದನ್ನೂ ಓದಿ:ಹಗರಣದಲ್ಲಿ ಶಿಕ್ಷಣ ಸಚಿವರು ಜೈಲು ಪಾಲಾಗಿದ್ದು ಇತಿಹಾಸದಲ್ಲೇ ಮೊದಲು: ಗೌತಮ್​ ಗಂಭೀರ್​ ಟೀಕೆ

ತೆಲಂಗಾಣ ಸಿಎಂ ಪುತ್ರಿ ಕವಿತಾಗೆ 10 ತಾಸು ವಿಚಾರಣೆ ನಡೆಸಿದ್ದ ಇಡಿ: ದೆಹಲಿಯ ಅಬಕಾರಿ ನೀತಿ ಸಂಬಂಧಿತ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್​ ರಾವ್ ಅವರ ಪುತ್ರಿ ಹಾಗೂ ಬಿಆರ್‌ಎಸ್ ಪಕ್ಷದ ನಾಯಕಿ ಕೆ.ಕವಿತಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ 10 ಗಂಟೆಗಳಿಗೂ ಹೆಚ್ಚು ಕಾಲ ಪ್ರಶ್ನಿಸಿತ್ತು. ಸೋಮವಾರ ದಿಲ್ಲಿಯಲ್ಲಿನ ಇಡಿ ಕಚೇರಿಗೆ ಬೆಳಗ್ಗೆ 10:30ಕ್ಕೆ ಆಗಮಿಸಿದ್ದ ಕವಿತಾ ಅವರಿಂದ ಅಧಿಕಾರಿಗಳು 11 ಗಂಟೆಯಿಂದಲೇ ಹೇಳಿಕೆ ದಾಖಲಿಸಿಕೊಳ್ಳಲು ಶುರು ಮಾಡಿದ್ದರು. ಪ್ರಕರಣದಲ್ಲಿ ಕವಿತಾ ಆರೋಪಿಯಾಗಿರುವ ಕಾರಣ ಅವರ ಪ್ರತಿಯೊಂದು ಹೇಳಿಕೆಯನ್ನೂ ಅಧಿಕಾರಿಗಳು ಅಚ್ಚುಕಟ್ಟಾಗಿ ದಾಖಲಿಸಿಕೊಂಡಿದ್ದಾರೆ. 10 ಗಂಟೆಗೂ ಅಧಿಕ ಕಾಲ ಪ್ರಶ್ನಿಸಿದ ಇಡಿ ರಾತ್ರಿ 9:15 ರ ಬಳಿಕ ಅವರು ಬಿಟ್ಟಿತ್ತು.

ಭಾರತ್​ ರಾಷ್ಟ್ರ ಸಮಿತಿ(ಬಿಆರ್​ಎಸ್​) ಎಂಎಲ್​ಸಿ ಕವಿತಾ ಅವರು ವಿಚಾರಣೆಯ ಬಳಿಕ ಇಡಿ ಕಚೇರಿಯಿಂದ ಹೊರಬರುತ್ತಿದ್ದಾಗ ವಿಜಯದ ಸಂಕೇತವನ್ನು ಪತ್ರಕರ್ತರತ್ತ ತೋರಿಸುತ್ತಾ ನಗುಮುಖದಿಂದಲೇ ಕಾರಿನ ಕಡೆಗೆ ಹೆಜ್ಜೆ ಹಾಕಿದ್ದರು. ಇದಕ್ಕೂ ಮೊದಲು ಮಾರ್ಚ್ 11 ರಂದು ಸುಮಾರು 9 ಗಂಟೆಗಳ ಕಾಲ ಇವರನ್ನು ಇಡಿ ಮೊದಲ ಬಾರಿಗೆ ಪ್ರಶ್ನಿಸಿತ್ತು. ನಂತರ ಮಾರ್ಚ್ 16 ರಂದು 2ನೇ ಬಾರಿಗೆ ವಿಚಾರಣೆ ನಡೆಸಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.