ETV Bharat / bharat

ಉಪರಾಷ್ಟ್ರಪತಿ ಸ್ಥಾನಕ್ಕೆ ವಿಪಕ್ಷದ ಅಭ್ಯರ್ಥಿಯಾಗಿ ಕನ್ನಡತಿ ಮಾರ್ಗರೇಟ್ ಆಳ್ವಾ ಆಯ್ಕೆ

author img

By

Published : Jul 17, 2022, 5:53 PM IST

Updated : Jul 17, 2022, 6:20 PM IST

ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳು ಜುಲೈ 19ರ ವರೆಗೆ ನಾಮಪತ್ರ ಸಲ್ಲಿಸಬಹುದು. ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಉಪರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಮಾರ್ಗರೇಟ್ ಆಳ್ವಾ
ಉಪರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಮಾರ್ಗರೇಟ್ ಆಳ್ವಾ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳು ಅಭ್ಯರ್ಥಿಯನ್ನು ಘೋಷಿಸಿವೆ. ವಿರೋಧ ಪಕ್ಷಗಳು ಉಪರಾಷ್ಟ್ರಪತಿ ಸ್ಥಾನಕ್ಕೆ ಕನ್ನಡತಿ ಮಾರ್ಗರೇಟ್ ಆಳ್ವಾ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿವೆ. ಇವರು ಗೋವಾದ ಮಾಜಿ ರಾಜ್ಯಪಾಲರಾಗಿದ್ದಾರೆ.

ಮಾರ್ಗರೇಟ್ ಆಳ್ವಾ ಯಾರು? ಮಾರ್ಗರೆಟ್ ಆಳ್ವ ಅವರು 14 ಏಪ್ರಿಲ್ 1942 ರಂದು ಕರ್ನಾಟಕದ ಮಂಗಳೂರಿನಲ್ಲಿ ಜನಿಸಿದರು. ಕರ್ನಾಟಕದಲ್ಲಿಯೇ ವಿದ್ಯಾಭ್ಯಾಸ ಮುಗಿಸಿದ ಅವರು ನಂತರ ಕಾಂಗ್ರೆಸ್ ಸೇರಿದರು. ಹಾಗೆ ಕಾಂಗ್ರೆಸ್ ಅವರನ್ನು ರಾಜ್ಯಸಭೆಗೆ ಕಳುಹಿಸಿತ್ತು. ವಿವಿಧ ಸಚಿವಾಲಯಗಳ ಸಮಿತಿಗಳಲ್ಲಿ ಭಾಗಿಯಾಗಿದ್ದ ಅವರು 1975ರಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾದರು. ಆಳ್ವಾ ಒಟ್ಟು ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿದ್ದು, 1999ರಲ್ಲಿ ಲೋಕಸಭೆ ಸದಸ್ಯೆಯಾಗಿಯೂ ಆಯ್ಕೆಯಾಗಿದ್ದರು.

ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಗಳು ಜುಲೈ 19ರ ವರೆಗೆ ನಾಮಪತ್ರ ಸಲ್ಲಿಸಬಹುದು. ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳು ಜುಲೈ 22ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ದೇಶದ ಮುಂದಿನ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಆಗಸ್ಟ್ 6 ರಂದು ಮತದಾನ ನಡೆಯಲಿದೆ.

ಆಗಸ್ಟ್ 6 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ಉಪಾಧ್ಯಕ್ಷರ ಆಯ್ಕೆಗೆ ಮತದಾನ ನಡೆಯಲಿದೆ. ಮತದಾನ ಪ್ರಕ್ರಿಯೆ ಮುಗಿದ ಬಳಿಕ ಮತ ಎಣಿಕೆ ಕೂಡ ಅದೇ ದಿನ ನಡೆಯಲಿದ್ದು, ಚುನಾವಣಾ ಫಲಿತಾಂಶವೂ ಬರಲಿದೆ. ಉಪರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯ ಹೆಸರನ್ನು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಒಪ್ಪಿ ಒಮ್ಮತಕ್ಕೆ ಬಂದರೆ ಮತದಾನದ ಅಗತ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಒಮ್ಮತದ ಮೂಲಕ ಉಪಾಧ್ಯಕ್ಷರನ್ನೂ ಅವಿರೋಧವಾಗಿ ಆಯ್ಕೆ ಮಾಡಬಹುದು. ಆದಾಗ್ಯೂ, ಇದರ ಸಾಧ್ಯತೆಗಳು ಕಡಿಮೆ.

ದೇಶದ ಹಾಲಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತಿದೆ ಎಂಬುದು ಗಮನಿಸಬೇಕಾದ ಸಂಗತಿ. ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಪೂರ್ಣಗೊಳ್ಳುವ ನಾಲ್ಕು ದಿನಗಳ ಮೊದಲು ದೇಶದ ಮುಂದಿನ ಉಪರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬುದು ಸ್ಪಷ್ಟವಾಗಲಿದೆ.

ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಎನ್‌ಡಿಎ ಶನಿವಾರ ಸಂಜೆ ಘೋಷಿಸಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಪ್ರಧಾನಿ ಮೋದಿ ಸಮ್ಮುಖದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಜಗದೀಪ್​ ಧಂಖರ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ 243 ವಾರ್ಡ್‍ಗಳ ಜನತೆಗೆ ಗುಡ್​ ನ್ಯೂಸ್​.. ಶೀಘ್ರದಲ್ಲೇ ‘ನಮ್ಮ ಕ್ಲಿನಿಕ್’ ಸೇವೆ

Last Updated :Jul 17, 2022, 6:20 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.