ಮೇಘಾಲಯ: ಮಾಜಿ ಸಿಎಂ ಸೇರಿದಂತೆ ರಾತ್ರೋರಾತ್ರಿ ತೃಣಮೂಲ ಪಕ್ಷಕ್ಕೆ ಸೇರಿದ 12 ಕಾಂಗ್ರೆಸ್ ಶಾಸಕರು

author img

By

Published : Nov 25, 2021, 5:47 AM IST

ರಾತ್ರೋತಾತ್ರಿ ತೃಣಮೂಲ ಪಕ್ಷಕ್ಕೆ ಸೇರಿದ 12 ಕಾಂಗ್ರೆಸ್ ಶಾಸಕರು

ಮುಕುಲ್ ಸಂಗ್ಮಾ ಸೇರಿದಂತೆ ರಾಜ್ಯದ 17 ಕಾಂಗ್ರೆಸ್ ಶಾಸಕರ ಪೈಕಿ 12 ಶಾಸಕರು ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಇದು ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್​ಗೆ ಭಾರೀ ಪೆಟ್ಟುಕೊಟ್ಟಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​ ಮುಖಂಡೆ ಸೋನಿಯಾ ಗಾಂಧಿ ಬಗ್ಗೆಯೂ ಮಮತಾ ಅವರು ಬೇಸರದ ಮಾತುಗಳನ್ನಾಡಿದ್ದಾರೆ.

ನವದೆಹಲಿ: ಮೇಘಾಲಯದ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಸೇರಿದಂತೆ ರಾಜ್ಯದ 17 ಕಾಂಗ್ರೆಸ್ ಶಾಸಕರ ಪೈಕಿ 12 ಶಾಸಕರು ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು, ಈಶಾನ್ಯದಲ್ಲಿ ಬಂಗಾಳದ ಆಡಳಿತ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಜೊತೆಗೆ ಮಮತಾ ಪಕ್ಷ ವಿರೋಧ ಪಕ್ಷವಾಗಿ ದಿಢೀರನೇ ಹೊರ ಹೊಮ್ಮಿದೆ.

ಈ ಕುರಿತು ಮೇಘಾಲಯ ಶಾಸಕರು ಈಗಾಗಲೇ ವಿಧಾನಸಭಾ ಸ್ಪೀಕರ್ ಮೆತ್ಬಾ ಲಿಂಗ್ಡೋ ಅವರಿಗೆ ಪತ್ರ ಬರೆದಿದ್ದಾರೆ. ಇಲ್ಲಿನ ವಿಧಾನಸಭೆಯು 60 ಸ್ಥಾನಗಳನ್ನು ಹೊಂದಿದೆ. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರೊಂದಿಗೆ ಸೌಹಾರ್ದ ಸಂಬಂಧವನ್ನು ಇಟ್ಟುಕೊಂಡಿರುವ ಬ್ಯಾನರ್ಜಿ ಅವರು ಈ ಬಾರಿ ಅವರನ್ನು ಭೇಟಿ ಮಾಡಿಲ್ಲ. ಆದರೂ ಭೇಟಿ ಮಾಡಲಿದ್ದಾರೆ ಎನ್ನುವ ಚರ್ಚೆ ನಡೆಯುತ್ತಿದೆ.

ಈ ವಿಷಯ ಬ್ಯಾನರ್ಜಿ ಬಳಿ ಕೇಳಿದಾಗ ಬೇಸರ ಹೊರಹಾಕಿದ್ದಾರೆ. ಸೋನಿಯಾ ಗಾಂಧಿಯವರೊಂದಿಗೆ ಯಾವುದೇ ಅಪಾಯಿಂಟ್‌ಮೆಂಟ್ ಕೇಳಿರಲಿಲ್ಲ, ಅವರು ಪಂಜಾಬ್ ಚುನಾವಣೆಯಲ್ಲಿ ನಿರತರಾಗಿದ್ದಾರೆ. ನಾವು ಪ್ರತಿ ಬಾರಿ ಸೋನಿಯಾರನ್ನು ಏಕೆ ಭೇಟಿಯಾಗಬೇಕು? ಇದು ಸಾಂವಿಧಾನಿಕವಾಗಿ ಕಡ್ಡಾಯವಾಗಿಲ್ಲ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.