ETV Bharat / bharat

ಮೆಹಬೂಬಾ ಮುಫ್ತಿಗೆ ಮತ್ತೊಮ್ಮೆ ಗೃಹ ಬಂಧನ.. ಟ್ವೀಟ್​ ಮೂಲಕ ಪಿಡಿಪಿ ಅಧ್ಯಕ್ಷೆ ಕಿಡಿ

author img

By

Published : Aug 21, 2022, 8:20 PM IST

ನನ್ನನ್ನು ಮತ್ತೊಮ್ಮೆ ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಪೀಪಲ್ಸ್​ ಡೆಮಾಕ್ರಟಿಕ್​ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಟ್ವೀಟ್ ಮಾಡಿದ್ದಾರೆ.

ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ

ಶ್ರೀನಗರ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಪೀಪಲ್ಸ್​ ಡೆಮಾಕ್ರಟಿಕ್​ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ. ಶ್ರೀನಗರದಲ್ಲಿರುವ ಅಧಿಕೃತ ನಿವಾಸದಲ್ಲಿ ಅವರಿಗೆ ಗೃಹ ಬಂಧನ ವಿಧಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ನನ್ನನ್ನು ಮತ್ತೊಮ್ಮೆ ಗೃಹ ಬಂಧನದಲ್ಲಿ ಇರಿಸಲಾಗಿದೆ. ಉಗ್ರರಿಂದ ಹತ್ಯೆಗೊಳಗಾದ ಕಾಶ್ಮೀರಿ ಪಂಡಿತ್ ಸುನೀಲ್ ಕುಮಾರ್ ಭಟ್ ಅವರ ಕುಟುಂಬವನ್ನು ನಾನು ಭೇಟಿಯಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ಈ ರೀತಿ ಮಾಡಿದೆ' ಎಂದಿದ್ದಾರೆ.

  • GOI wants to push the plight of Kashmiri pandits under the rug because its their callous policies that’ve led to unfortunate targeted killings of those who chose not to flee. Projecting us mainstream as their enemy is why Ive been placed under house arrest today. pic.twitter.com/GliRJaJX45

    — Mehbooba Mufti (@MehboobaMufti) August 21, 2022 " class="align-text-top noRightClick twitterSection" data=" ">

'ಕೇಂದ್ರದ ಕೆಟ್ಟ ನೀತಿಗಳಿಂದ ಕಾಶ್ಮೀರಿ ಪಂಡಿತರ ಹತ್ಯೆಯಾಗುತ್ತಿದೆ. ಮುಖ್ಯವಾಹಿನಿಯಲ್ಲಿ ನಾವು ಕಾಶ್ಮೀರಿ ಪಂಡಿತರ ವಿರೋಧಿಗಳು ಎಂಬುದಾಗಿ ಬಿಂಬಿಸಲು ನನ್ನನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಕಾಶ್ಮೀರಿ ಪಂಡಿತರ ಸಂಕಷ್ಟಗಳನ್ನು ಮುಚ್ಚಿಡಲು ಕೇಂದ್ರ ಯತ್ನಿಸುತ್ತಿದೆ' ಎಂದು ಅವರು ಆರೋಪಿಸಿದ್ದಾರೆ.

ಕಳೆದ ಆಗಸ್ಟ್​ 16 ರಂದು ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಛೋತಿಗಾಮ್​ ಗ್ರಾಮದಲ್ಲಿ ಭಯೋತ್ಪಾದಕರು ಕಾಶ್ಮೀರಿ ಪಂಡಿತರ ಮೇಲೆ ಗುಂಡಿನ ಸುರಿಮಳೆಗರೆದಿದ್ದರು. ಈ ವೇಳೆ ಸುನೀಲ್ ಕುಮಾರ್ ಎಂಬುವರು ಮೃತಪಟ್ಟರೆ, ಅವರ ಸಹೋದರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಈ ಪ್ರಕರಣ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಮೆಹಬೂಬಾ ಮುಫ್ತಿ ಅವರು ಛೋತಿಗಾಮ್​ಗೆ ಭೇಟಿ ನೀಡಲು ಮುಂದಾಗಿದ್ದ ವೇಳೆ ಅವರನ್ನು ಪೊಲೀಸರು ಗೃಹ ಬಂಧನಕ್ಕೊಳಪಡಿಸಿದ್ದಾರೆ.

ಓದಿ: ರೈತ ಮುಖಂಡ ರಾಕೇಶ್ ಟಿಕಾಯತ್ ವಶಕ್ಕೆ ಪಡೆದ ದೆಹಲಿ ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.