ETV Bharat / bharat

ಟೆಂಪೋ- ಲಾರಿ ಅಪಘಾತ.. ಕರ್ನಾಟಕದ ಮೂವರು ಸ್ಥಳದಲ್ಲೇ ಸಾವು

author img

By ETV Bharat Karnataka Team

Published : Sep 14, 2023, 4:32 PM IST

Tempo truck accident 3 died: ಮಹಾರಾಷ್ಟ್ರದ ಪುಣೆ - ಬೆಂಗಳೂರು ಹೆದ್ದಾರಿಯಲ್ಲಿ ಐಸರ್​​​ ಟೆಂಪೋ ಲಾರಿ ಅಪಘಾತ ಸಂಭವಿಸಿದೆ. ಪರಿಣಾಮ ಕರ್ನಾಟಕದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಟೆಂಪೋ- ಲಾರಿ ಅಪಘಾತ
ಟೆಂಪೋ- ಲಾರಿ ಅಪಘಾತ

ಪುಣೆ( ಮಹಾರಾಷ್ಟ್ರ): ಇಲ್ಲಿನ ಪುಣೆ - ಬೆಂಗಳೂರು ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಐಸರ್​ ಟೆಂಪೋ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಟೆಂಪೋ ಮಾಲೀಕ, ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮೂವರೂ ಬೆಳಗಾವಿ ಜಿಲ್ಲೆಯವರು. ಬುಧವಾರ ರಾತ್ರಿ ಸತಾರಾ - ಖಂಡಾಲಾ ತಾಲೂಕಿನ ಧನಗರವಾಡಿ (ಈಗ ಖಂಡಾಲಾ) ಗ್ರಾಮದ ವ್ಯಾಪ್ತಿಯ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಐಸರ್​ ಟೆಂಪೋ ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತರ ಹೆಸರು ಮಂಜುನಾಥ ಯಲ್ಲಪ್ಪ ಕವಲಿ, ಆನಂದ ಗುರುಸಿದ್ಧ ಗಂಗೈ ( ಇಬ್ಬರೂ ಬೆಳಗಾವಿ ಜಿಲ್ಲೆ ಗೋಕಾಕ್​​ ತಾಲೂಕಿನ ಪಾಮಲ್​ ದಿನಿಯ ನಿವಾಸಿಗಳು ) ನಾಯಿಕಪ್ಪ ಸತ್ಯಪ್ಪ ನಾಯ್ಕರ್ ( ರಾಮದುರ್ಗದ ಉಜ್ಜನಕೋಪ್ಪ ನಿವಾಸಿ) ಎಂಬುದು ತಿಳಿದು ಬಂದಿದೆ.

ನುಜ್ಜುಗುಜ್ಜಾಗಿರುವ ಐಸರ್​ ಟೆಂಪೋ : ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಸರಕು ಸಾಗಣೆ ಲಾರಿಯ ಟೈರ್‌ ಒಡೆದ ಪರಿಣಾಮ ಟ್ರಕ್‌ ಕೊಳೆಗೇರಿಯ ಮುಂಭಾಗದ ಹೆದ್ದಾರಿಯ ಬದಿ ನಿಂತಿತ್ತು. ಟಯರ್ ಬದಲಾಯಿಸಿದ ಬಳಿಕ ಚಾಲಕ ಲಾರಿ ಸ್ಟಾರ್ಟ್ ಮಾಡಿಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಐಸರ್​ ಟೆಂಪೋ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಟೆಂಪೋದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತವು ಎಷ್ಟು ತೀವ್ರವಾಗಿತ್ತು ಎಂದರೆ ಸರಕು ಸಾಗಣೆ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಐಸರ್​ ಟೆಂಪೋ ನಜ್ಜುಗುಜ್ಜಾಗಿದೆ. ಪೊಲೀಸರು ಮತ್ತು ಶಿರವಾಳ ರಕ್ಷಣಾ ತಂಡ ಕ್ರೇನ್ ಮತ್ತು ಜೆಸಿಬಿ ಸಹಾಯದಿಂದ ಟೆಂಪೋವನ್ನು ಹೊರತೆಗೆದಿದ್ದಾರೆ.

ಅಪಘಾತದ ನಂತರ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ: ಟೆಂಪೋ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಿಂದ ಪುಣೆ - ಬೆಂಗಳೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದರು. ಅವರು ಸಹಾಯಕ್ಕಾಗಿ ಶಿರ್ವಾಲ್ ರಕ್ಷಣಾ ತಂಡವನ್ನು ಕರೆದರು. ಬಳಿಕ ಲಾರಿಗೆ ಡಿಕ್ಕಿ ಹೊಡೆದ ಟೆಂಪೋವನ್ನು ಕ್ರೇನ್ ಮತ್ತು ಜೆಸಿಬಿ ತಂದು ಪಕ್ಕಕ್ಕೆ ಎಳೆದಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಬೊಲೆರೋಗೆ ಲಾರಿ ಡಿಕ್ಕಿ: ಐವರು ಸಾವು, ಏಳು ಜನರಿಗೆ ಗಂಭೀರಗಾಯ

ಚಾಲಕ, ಮಾಲೀಕರೊಂದಿಗೆ ಕ್ಲೀನರ್ ಸಾವು : ಕರ್ನಾಟಕದಿಂದ ಪುಣೆಗೆ ತೆರಳುತ್ತಿದ್ದ ಐಸರ್​​​​ನಲ್ಲಿ ಮಾಲೀಕ, ಚಾಲಕ, ಕ್ಲೀನರ್ ಸೇರಿದಂತೆ ಮೂವರು ಇದ್ದರು. ಅಪಘಾತದ ವೇಳೆ ಮಾಲೀಕರೇ ಟೆಂಪೋ ಚಲಾಯಿಸುತ್ತಿದ್ದರು ಎಂದು ಸ್ಥಳದಿಂದ ಮಾಹಿತಿ ಲಭಿಸಿದೆ. ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಐಸರ್​ ಟೆಂಪೋ ರಭಸದಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಅಕ್ಕಪಕ್ಕದ ಜನರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಮೂವರ ದೇಹ ಛಿದ್ರ ಛಿದ್ರವಾಗಿದೆ. ಬೆಳಗ್ಗೆ ಮೃತರ ಕುಟುಂಬಸ್ಥರು ಶಿರವಾಳಕ್ಕೆ ಆಗಮಿಸಿದ್ದು, ಮೃತರ ಗುರುತು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ.

ಇದನ್ನೂ ಓದಿ: ಕರ್ನಾಟಕ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ ರಸ್ತೆ ಅಪಘಾತ; ತಮಿಳುನಾಡಿನ 7 ಮಹಿಳೆಯರು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.