ETV Bharat / bharat

ಸಿಎಂ ಠಾಕ್ರೆ ಮನೆ ಮುಂದೆ ಹನುಮಾನ್​ ಚಾಲೀಸಾ ಪಠಿಸುವ ಸವಾಲು: ಸಂಸದೆ, ಪತಿ ಬಂಧನ

author img

By

Published : Apr 23, 2022, 6:57 PM IST

Updated : Apr 23, 2022, 7:22 PM IST

Amravati MP Navneet Rana
Amravati MP Navneet Rana

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸದೆದುರು ಹನುಮಾನ್ ಚಾಲೀಸಾ ಪಠಿಸುವುದಾಗಿ ಸಂಸದೆ ನವನೀತ್ ಕೌರ್ ರಾಣಾ ಮತ್ತು ಆಕೆಯ ಪತಿ ಶಾಸಕ ರವಿ ರಾಣಾ ಸವಾಲು ಹಾಕಿದ್ದು, ಇದರ ಬೆನ್ನಲ್ಲೇ ಅವರನ್ನು ಬಂಧನ ಮಾಡಲಾಗಿದೆ.

ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನೆ ಮುಂದೆ ಹನುಮಾನ್​ ಚಾಲೀಸಾ ಪಠಿಸುವ ಸವಾಲು ಹಾಕಿದ್ದ ಶಾಸಕ ರವಿ ರಾಣಾ ಹಾಗೂ ಅವರ ಪತ್ನಿ ಅಮರಾವತಿ ಸಂಸದೆ ನವನೀತ್ ಕೌರ್​​ ಅವರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ನೀವೂ ಹನುಮಾನ್ ಚಾಲೀಸಾ ಪಠಿಸಬೇಕು. ಇಲ್ಲ ನಾವೇ ನಿಮ್ಮ ಮನೆ ಮುಂದೆ ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆಂದು ಕಳೆದ ಕೆಲ ದಿನಗಳ ಹಿಂದೆ ನವನೀತ್​-ರಾಣಾ ದಂಪತಿ ಸಿಎಂಗೆ ಸವಾಲು ಹಾಕಿದ್ದರು. ಇದರ ಬೆನ್ನಲ್ಲೇ ಮುಂಬೈಗೆ ಸಹ ಆಗಮಿಸಿದ್ದರು. ಆದರೆ, ಇಂದು ತಮ್ಮ ನಿರ್ಧಾರ ರದ್ಧು ಮಾಡುತ್ತಿರುವುದಾಗಿ ಅವರು ಕೆಲ ಗಂಟೆಗಳ ಹಿಂದೆ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಅವರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಸಿಎಂ ಠಾಕ್ರೆ ಮನೆ ಮುಂದೆ ಹನುಮಾನ್​ ಚಾಲೀಸಾ ಪಠಿಸುವ ಸವಾಲು: ಸಂಸದೆ, ಪತಿ ಬಂಧನ

ಇದನ್ನೂ ಓದಿ: ನೇಮಕಾತಿ ಆದೇಶ ಕೈ ಸೇರುವ ಮುನ್ನವೇ ಪಿಎಸ್​ಐ ಡ್ರೆಸ್​ನಲ್ಲಿ ವೇದಿಕೆ ಮೇಲೆ ಪ್ರತ್ಯಕ್ಷ!

ಇವರ ವಿರುದ್ಧ ಐಪಿಸಿ ಸೆಕ್ಷನ್​ 153A (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ) ಅಡಿ ಪ್ರಕರಣ ದಾಖಲು ಮಾಡಲಾಗಿದೆ. ನಾಳೆ ಮುಂಬೈಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಕಾರಣ ತಾವು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸದೆ ನವನೀತ್ ಕೌರ್ ಹಾಗೂ ಶಾಸಕ ರಾಣಾ ತಿಳಿಸಿದ್ದರು. ಹನುಮಾನ್ ಚಾಲೀಸಾ ಪಠಣೆ ಮಾಡುವುದಾಗಿ ಘೋಷಣೆ ಮಾಡಿದ್ದರಿಂದ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಶಿವಸೇನಾ ಕಾರ್ಯಕರ್ತರು ಸಿಎಂ ಮಾತೋಶ್ರೀ ನಿವಾಸದ ಎದುರು ಜಮಾವಣೆಗೊಂಡಿದ್ದರು.

Last Updated :Apr 23, 2022, 7:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.