ಪಿಲಿಭಿತ್(ಉತ್ತರಪ್ರದೇಶ): ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಟೀಕಾಪ್ರಹಾರ ಮುಂದುವರಿಸಿದ್ದಾರೆ.
-
ये बच्चे भी मां भारती के लाल हैं, इनकी बात मानना तो दूर, कोई सुनने को तैयार नहीं है। इस पर भी इनके ऊपर ये बर्बर लाठीचार्ज।
— Varun Gandhi (@varungandhi80) December 5, 2021 " class="align-text-top noRightClick twitterSection" data="
अपने दिल पर हाथ रखकर सोचिए क्या ये आपके बच्चे होते तो इनके साथ यही व्यवहार होता??
आपके पास रिक्तियां भी हैं और योग्य अभ्यर्थी भी, तो भर्तियां क्यों नहीं?? pic.twitter.com/6F67ZDJgzW
">ये बच्चे भी मां भारती के लाल हैं, इनकी बात मानना तो दूर, कोई सुनने को तैयार नहीं है। इस पर भी इनके ऊपर ये बर्बर लाठीचार्ज।
— Varun Gandhi (@varungandhi80) December 5, 2021
अपने दिल पर हाथ रखकर सोचिए क्या ये आपके बच्चे होते तो इनके साथ यही व्यवहार होता??
आपके पास रिक्तियां भी हैं और योग्य अभ्यर्थी भी, तो भर्तियां क्यों नहीं?? pic.twitter.com/6F67ZDJgzWये बच्चे भी मां भारती के लाल हैं, इनकी बात मानना तो दूर, कोई सुनने को तैयार नहीं है। इस पर भी इनके ऊपर ये बर्बर लाठीचार्ज।
— Varun Gandhi (@varungandhi80) December 5, 2021
अपने दिल पर हाथ रखकर सोचिए क्या ये आपके बच्चे होते तो इनके साथ यही व्यवहार होता??
आपके पास रिक्तियां भी हैं और योग्य अभ्यर्थी भी, तो भर्तियां क्यों नहीं?? pic.twitter.com/6F67ZDJgzW
ಯುಪಿಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ನೇಮಕಾತಿಗಾಗಿ ಒತ್ತಾಯಿಸಿ ಮೇಣದಬತ್ತಿ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ವಿಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ವರುಣ್ಗಾಂಧಿ ಪೊಲೀಸರು ಮತ್ತು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಅಲ್ಲದೇ, 'ನಿಮ್ಮ ಮಕ್ಕಳನ್ನು ನೀವು ಇದೇ ರೀತಿ ನಡೆಸಿಕೊಳ್ಳುತ್ತೀರಾ?' ಎಂದು ಪ್ರಶ್ನಿಸಿರುವ ವರುಣ್ ಗಾಂಧಿ, 'ನೀವು ಯಾರ ಮೇಲೆ ಲಾಠಿ ಬೀಸಿದ್ದೀರೋ ಅವರು ಕೂಡ ಈ ದೇಶದ ಭಾರತ ಮಾತೆಯ ಮಕ್ಕಳು ಎಂಬುದನ್ನು ಮರೆಯಬೇಡಿ' ಎಂದು ಕಿಡಿಕಾರಿದ್ದಾರೆ.
ಇದಲ್ಲದೇ, ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅರ್ಹ ಉದ್ಯೋಗಾಂಕ್ಷಿಗಳನ್ನು ಯಾಕೆ ನೇಮಕ ಮಾಡುತ್ತಿಲ್ಲ' ಎಂದು ಯೋಗಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ದೆಹಲಿಯಿಂದ ನ್ಯೂಜೆರ್ಸಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹೃದಯಾಘಾತದಿಂದ ವೃದ್ಧ ಸಾವು
ಉತ್ತರಪ್ರದೇಶದ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 22 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳು ಲಕ್ನೋದಲ್ಲಿರುವ ಬಿಜೆಪಿ ಕಚೇರಿಯನ್ನು ಮುತ್ತಿಗೆ ಹಾಕಿದ್ದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು.
ಈ ಹಿಂದೆಯೂ ಕೂಡ ಬಿಜೆಪಿ ಸಂಸದ ವರುಣ್ ಗಾಂಧಿ ಲಖೀಂಪುರ ಹಿಂಸಾಚಾರ, ಕೃಷಿ ಕಾಯ್ದೆಗಳ ಹಿಂಪಡೆಯುವಿಕೆ ಕುರಿತು, ರೈತರ ಹೋರಾಟ ಬೆಂಬಲಿಸಿ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರವನ್ನು ಟೀಕೆ ಮಾಡುತ್ತಲೇ ಬಂದಿದ್ದರು.