ETV Bharat / bharat

ಲಖಿಂಪುರ ಖೇರಿ ಹಿಂಸಾಚಾರ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ.. ಸಿಧು ಸೇರಿ ಹಲವರು ಪೊಲೀಸರ ವಶಕ್ಕೆ

author img

By

Published : Oct 4, 2021, 3:29 PM IST

Updated : Oct 4, 2021, 3:35 PM IST

Navjot Sidhu Detained In Chandigarh
ಚಂಡೀಗಢ ರಾಜ್ಯಪಾಲರ ಭವನದ ಎದುರು ಪ್ರತಿಭಟನೆ

ಉತ್ತರಪ್ರದೇಶದ ಹಿಂಸಾಚಾರ ಪೀಡಿತ ಜಿಲ್ಲೆಗೆ ಭೇಟಿ ನೀಡಲು ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಗೆ ಉತ್ತರಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿದೆ. ಈ ಹಿಂದೆ, ಪಂಜಾಬ್ ಉಪ ಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಅವರಿಗೂ ಲಖನೌ ವಿಮಾನ ನಿಲ್ದಾಣದಲ್ಲಿ ಇಳಿಯಲು ಅನುಮತಿ ನಿರಾಕರಿಸಲಾಗಿತ್ತು..

ಚಂಡೀಗಢ (ಪಂಜಾಬ್​): ಲಖಿಂಪುರ ಖೇರಿ ಹಿಂಸಾಚಾರ ವಿರೋಧಿಸಿ ಚಂಡೀಗಢದ ರಾಜ್ಯಪಾಲರ ಭವನದ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್​ ನಾಯಕ ನವಜೋತ್​ ಸಿಂಗ್ ಸಿಧು ಸೇರಿದಂತೆ ಅವರ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉತ್ತರಪ್ರದೇಶದ ಲಖಿಂಪುರದಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದರು. ಈ ಘಟನೆಯನ್ನು ವಿರೋಧಿಸಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಬಂಧನಕ್ಕೆ ಆಗ್ರಹಿಸಿ ನವಜೋತ್​ ಸಿಂಗ್ ಸಿಧು ಪ್ರತಿಭಟನೆ ನಡೆಸುತ್ತಿದ್ದರು. ಇವರಿಗೆ ಕಾಂಗ್ರೆಸ್​ ಶಾಸಕರು, ಪಿವೈಸಿ ಅಧ್ಯಕ್ಷ ಬರಿಂದರ್ ದಿಲ್ಲೋನ್​ ಸೇರಿದಂತೆ ಬೆಂಬಲಿಗರು ಸಾಥ್​ ನೀಡಿದ್ದರು. ಹರಿಯಾಣ ಸಿಎಂ ಮನೋಹರ್​ ಲಾಲ್ ಖಟ್ಟರ್​ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆಯೂ ಪ್ರತಿಭಟನಾನಿರತರು ಆಗ್ರಹಿಸಿದ್ದಾರೆ.

ಓದಿ: ಲಖಿಂಪುರ ಖೇರಿಗೆ ತೆರಳುತ್ತಿದ್ದ ವೇಳೆ ಪ್ರಿಯಾಂಕಾ ಗಾಂಧಿ ಬಂಧನ- ಕಾಂಗ್ರೆಸ್ ಆರೋಪ

ಘಟನಾ ಸ್ಥಳಕ್ಕೆ ಭೇಟಿ ನೀಡಲು ಪಂಜಾಬ್ ಸಿಎಂಗೆ ಅನುಮತಿ ನಿರಾಕರಣೆ : ಏತನ್ಮಧ್ಯೆ, ಉತ್ತರಪ್ರದೇಶದ ಹಿಂಸಾಚಾರ ಪೀಡಿತ ಜಿಲ್ಲೆಗೆ ಭೇಟಿ ನೀಡಲು ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಗೆ ಉತ್ತರಪ್ರದೇಶ ಸರ್ಕಾರ ಅನುಮತಿ ನಿರಾಕರಿಸಿದೆ. ಈ ಹಿಂದೆ, ಪಂಜಾಬ್ ಉಪ ಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಅವರಿಗೂ ಲಖನೌ ವಿಮಾನ ನಿಲ್ದಾಣದಲ್ಲಿ ಇಳಿಯಲು ಅನುಮತಿ ನಿರಾಕರಿಸಲಾಗಿತ್ತು.

ಲಖಿಂಪುರ ಖೇರಿಯ ಹಿಂಸಾಚಾರ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನೂತನ ಕೃಷಿ ಕಾಯ್ಧೆಗಳ ವಿರುದ್ಧ ರೈತರು ಪ್ರತಿಭಟಿಸುತ್ತಿದ್ದರು. ಅಲ್ಲಿಗೆ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್​ ಮಿಶ್ರಾ ಮತ್ತು ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್​ ಮೌರ್ಯ ಭೇಟಿ ನೀಡಿದ್ದನ್ನ ವಿರೋಧಿಸಿ ರೈತರು ಲಖಿಂಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅಲ್ಲದೇ, ರೈತರು ಉಪ ಮುಖ್ಯಮಂತ್ರಿಗೆ ಕಪ್ಪು ಬಾವುಟಗಳನ್ನು ತೋರಿಸಲು ಯೋಜಿಸಿದ್ದರು.

ಲಖಿಂಪುರದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಎರಡು ಕಾರುಗಳು ಅವರ ಮೇಲೆ ಹರಿದು, ಇಬ್ಬರು ರೈತರು ಮೃತಪಟ್ಟಿದ್ದಾರೆ. ಈ ವೇಳೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್​ ಮಿಶ್ರಾ ಒಂದು ಕಾರಿನಲ್ಲಿದ್ದರು ಎಂದು ಆರೋಪಿಸಲಾಗಿದೆ. ಪರಿಣಾಮ ಹೋರಾಟಗಾರರು ಬಿಜೆಪಿ ಕಾರ್ಯಕರ್ತರ ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳನ್ನು ಉರುಳಿಸಿದರು. ಈ ವೇಳೆ, ನಾಲ್ವರು ರೈತರು ಸೇರಿದಂತೆ ಒಟ್ಟು 8 ಮಂದಿ ಮೃತಪಟ್ಟಿದ್ದರು.

ಓದಿ: ಲಖಿಂಪುರ ಖೇರಿ ಹಿಂಸಾಚಾರ: ಸಚಿವ ಅಜಯ್ ಮಿಶ್ರಾ, ಪುತ್ರ ಆಶೀಶ್ ಮಿಶ್ರಾ ಹೇಳಿದ್ದೇನು?

Last Updated :Oct 4, 2021, 3:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.