ETV Bharat / bharat

ನಾನು ಅವರಿಗೆ ಹೆಣ್ಣಿನ ಶಕ್ತಿ ತೋರಿಸುತ್ತೇನೆ : ಮಹಾ ಸಿಎಂಗೆ ಸಂಸದೆ ಸವಾಲು

author img

By

Published : May 8, 2022, 5:17 PM IST

Navneet Rana's direct challenge to CM; Fight elections from anywhere!
ನಾನು ಅವರಿಗೆ ಹೆಣ್ಣಿನ ಶಕ್ತಿ ತೋರಿಸುತ್ತೇನೆ: ಮಹಾ ಸಿಎಂಗೆ ಸಂಸದೆ ಸವಾಲು

ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವ ನವನೀತ್ ರಾಣಾ, ಶಿವಸೇನೆ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ..

ಮುಂಬೈ, ಮಹಾರಾಷ್ಟ್ರ: ಸಂಸದೆ ನವನೀತ್ ರಾಣಾ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹರಿಹಾಯ್ದಿದ್ದಾರೆ. ಮುಖ್ಯಮಂತ್ರಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ನನಗೆ ಕಿರುಕುಳ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಲಿ, ನಾನು ಅವರಿಗೆ ಹೆಣ್ಣಿನ ಶಕ್ತಿ ತೋರಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹನುಮಾನ್ ಚಾಲೀಸಾ ಪಠಣೆ ವಿವಾದದ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವ ನವನೀತ್ ರಾಣಾ, ಶಿವಸೇನೆ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ. ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಗಿಳಿಗೆ ಹೋಲಿಸಿದ ಅವರು, ರಾವತ್ ವಿರುದ್ಧ ದೂರು ನೀಡುವುದಾಗಿ ಹೇಳಿದ್ದಾರೆ.

ಇದರ ಜೊತೆಗೆ ಮುಂಬೈ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಲಂಕೆಯನ್ನು ನಾಶಪಡಿಸದೆ ಶಾಂತಿ ನೆಲೆಸುವುದಿಲ್ಲ ಎಂದು ಅಭಿಯಾನ ಪ್ರಾರಂಭಿಸುತ್ತೇನೆ ಎಂದು ನವನೀತ್ ರಾಣಾ ಮಾಹಿತಿ ನೀಡಿದ್ದಾರೆ. ನಾನೇನು ತಪ್ಪು ಮಾಡಿದ್ದೇನೆ?, ಹನುಮಾನ್ ಚಾಲೀಸಾ ಓದಿ ಶ್ರೀರಾಮನ ನಾಮಸ್ಮರಣೆ ಮಾಡಿದ್ದಕ್ಕೆ 14 ದಿನ ಜೈಲಿನಲ್ಲಿಟ್ಟಿದೆ, ಅಪರಾಧವಾದರೆ 14 ತಿಂಗಳು ಅಲ್ಲ, 14 ವರ್ಷ ಜೈಲಿನಲ್ಲಿ ಇರಲು ಸಿದ್ಧ.

ನಾನು ಮುಖ್ಯಮಂತ್ರಿಗೆ ಸವಾಲು ಹಾಕುತ್ತೇನೆ. ಅವರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಲಿ. ನಾನು ಹೆಣ್ಣಿನ ಶಕ್ತಿ ತೋರಿಸುತ್ತೇನೆ. ರಾಜ್ಯ ಸರ್ಕಾರ ಮಹಿಳೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಈ ಹೋರಾಟವನ್ನು ಮುಂದುವರೆಸುತ್ತೇನೆ ಎಂದು ನವನೀತ್ ರಾಣಾ ಹೇಳಿದ್ದಾರೆ.

ಇದನ್ನೂ ಓದಿ: ಕುಲ್ಗಾಮ್​ನಲ್ಲಿ ಎನ್​ಕೌಂಟರ್..​ ಎಲ್​ಇಟಿಯ ಇಬ್ಬರು ಉಗ್ರರು ಹತ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.