ETV Bharat / bharat

ಮುಂಗಾರು ಅಧಿವೇಶನ: ಮಹತ್ವದ ಮಸೂದೆಗಳ ಮಂಡನೆಗೆ ಸಿದ್ಧತೆ, ಪ್ರತಿಪಕ್ಷಗಳ ಹೋರಾಟ ನಿರೀಕ್ಷೆ

author img

By

Published : Jul 18, 2022, 7:08 AM IST

Updated : Jul 18, 2022, 8:18 AM IST

ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗುತ್ತಿದೆ. ಕೇಂದ್ರ ಸರ್ಕಾರ 24 ಮಹತ್ವದ ಮಸೂದೆಗಳನ್ನು ಸದನದಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಲು ಮುಂದಾಗಿದೆ. ಹಣದುಬ್ಬರ, ನಿರುದ್ಯೋಗ ಹಾಗು ಅಗ್ನಿಪಥ್‌ ಯೋಜನೆಗಳನ್ನು ವಿರೋಧಿಸಿ ಪ್ರತಿಪಕ್ಷಗಳು ಪ್ರತಿಭಟನೆಗೆ ಸಜ್ಜಾಗಿವೆ.

ಸಂಸತ್ತು
Parliament

ನವದೆಹಲಿ: ಇಂದಿನಿಂದ ಆರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಕೇಂದ್ರ ಸರ್ಕಾರ ತಯಾರಿ ನಡೆಸಿದ್ದು, ವಿವಿಧ ವಿಚಾರಗಳನ್ನಿಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ತಯಾರಿ ನಡೆಸಿವೆ. ಪ್ರಸಕ್ತ ಅಧಿವೇಶನವು ಆಗಸ್ಟ್‌ 12 ರವರೆಗೆ ನಡೆಯಲಿದೆ.

ಈ ಅವಧಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಕಂಟೋನ್ಮೆಂಟ್‌ ಮಸೂದೆ, ಮಲ್ಟಿ ಸ್ಟೇಟ್ ಕೋಅಪರೇಟಿವ್‌ ಸೊಸೈಟೀಸ್‌ ಮಸೂದೆ, ತಮಿಳುನಾಡು ಮತ್ತು ಛತ್ತೀಸ್‌ಘಡದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪರಿಷ್ಕೃತ ಪಟ್ಟಿಗೆ ಸಂವಿಧಾನ ತಿದ್ದುಪಡಿ ಮಸೂದೆ ಸೇರಿದಂತೆ ಒಟ್ಟು 24 ಮಸೂದೆಗಳನ್ನು ಅಧಿವೇಶನದಲ್ಲಿ ಮಂಡಿಸಲಿದೆ. ಈ ಮಸೂದೆಗಳ ಹೊರತಾಗಿ ಈಗಾಗಲೇ ಉಭಯ ಸದನಗಳಲ್ಲಿ ಬಾಕಿ ಉಳಿದಿರುವ ಇತರೆ 8 ಮಸೂದೆಗಳು ಅನುಮೋದನೆಗಾಗಿ ಕಾದು ಕುಳಿತಿದ್ದು, ಸಂಸತ್ತಿನಲ್ಲಿ ಮಂಡನೆಯಾಗಲಿವೆ.

ಪ್ರತಿಪಕ್ಷಗಳ ಪ್ರತಿಭಟನೆಯ ನಿರೀಕ್ಷೆ: ಕಾಂಗ್ರೆಸ್‌ ಸೇರಿದಂತೆ ಇತರೆ ಪ್ರತಿಪಕ್ಷಗಳು ಪ್ರಮುಖವಾಗಿ ಹಣದುಬ್ಬರ, ಹೆಚ್ಚುತ್ತಿರುವ ಇಂಧನ ಬೆಲೆ ಹಾಗು ಅಗ್ನಿಪಥ್‌ ಯೋಜನೆಯ ವಾಪಸಾತಿಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಈಗಾಗಲೇ ತೀರ್ಮಾನ ಕೈಗೊಂಡಿವೆ.

ಇದನ್ನೂ ಓದಿ: ಸಂಸತ್ತಿನ ಮುಂಗಾರು​ ಅಧಿವೇಶನ: ಇಂದು ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ

Last Updated :Jul 18, 2022, 8:18 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.