ETV Bharat / bharat

ಸಿಕ್ಕಿಂ-ನೇಪಾಳ ಗಡಿಬಳಿ ಭೂಕಂಪ: ನಾಲ್ಕು ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಚರ್ಚೆ

author img

By

Published : Apr 6, 2021, 4:50 AM IST

PM Modi
PM Modi

ಸಿಕ್ಕಿಂ-ನೇಪಾಳ ಗಡಿಯ ಬಳಿ ಸೋಮವಾರ ರಾತ್ರಿ 8.49ಕ್ಕೆ ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಅಸ್ಸೋಂ, ಬಿಹಾರ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿಯೂ ನಡುಕ ಉಂಟಾಗಿದೆ. ಈವರೆಗೆ ಯಾವುದೇ ಮಾನವ ಪ್ರಾಣಹಾನಿ ವರದಿಯಾಗಿಲ್ಲ.

ನವದೆಹಲಿ: ಸಿಕ್ಕಿಂ-ನೇಪಾಳ ಗಡಿ ಬಳಿ ಸಂಭವಿಸಿದ ಭೂಕಂಪದಿಂದ ಉಂಟಾದ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಂಪನ ಪೀಡಿತ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಪಿಎಂ ಮೋದಿ ಈಗಾಗಲೇ ಬಿಹಾರ ಸಿಎಂ ನಿತೀಶ್ ಕುಮಾರ್, ಅಸ್ಸೋಂ ಸಿಎಂ ಸರ್ಬಾನಂದ ಸೋನೊವಾಲ್ ಮತ್ತು ಸಿಕ್ಕಿಂ ಸಿಎಂ ಪಿಎಸ್ ತಮಾಂಗ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಮೂಲಗಳು ಹೇಳಿವೆ.

ಸಿಕ್ಕಿಂ-ನೇಪಾಳ ಗಡಿಯ ಬಳಿ ಸೋಮವಾರ ರಾತ್ರಿ 8.49ಕ್ಕೆ ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಅಸ್ಸೋಂ, ಬಿಹಾರ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿಯೂ ನಡುಕ ಉಂಟಾಗಿದೆ. ಈವರೆಗೆ ಯಾವುದೇ ಮಾನವ ಪ್ರಾಣಹಾನಿ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.