ETV Bharat / bharat

ಹುಟ್ಟುಹಬ್ಬದಂದು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

author img

By

Published : Sep 6, 2022, 3:23 PM IST

PM Modi
ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ತಮ್ಮ 72 ನೇ ಹುಟ್ಟುಹಬ್ಬದಂದು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ನೀಡಲಿದ್ದಾರೆ.

ಭೋಪಾಲ್ (ಮಧ್ಯಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 72 ನೇ ಹುಟ್ಟುಹಬ್ಬದಂದು (ಸೆ.17) ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ದಕ್ಷಿಣ ಆಫ್ರಿಕಾದಿಂದ ಚಿರತೆಗಳನ್ನು ಉದ್ಯಾನಕ್ಕೆ ತರಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು 16 ದಿನಗಳ ಅವಧಿಗೆ ಸೇವಾ ಪಖ್ವಾರ (ಸೇವಾ ಪಾಕ್ಷಿಕ) ಎಂದು ಆಚರಿಸಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಪ್ರಧಾನಿ ಮೋದಿ ಅವರ ಹುಟ್ಟುಹಬ್ಬಕ್ಕೆ ಹಲವು ಕಾರ್ಯಕ್ರಮ ಯೋಜಿಸುತ್ತಿದ್ದಾರೆ. ಇದನ್ನು "ಸೇವಾ ಪಾಕ್ಷಿಕ" ಎಂದು ಆಚರಿಸಲು ಪಕ್ಷದ ಎಲ್ಲ ಕಾರ್ಯಕರ್ತರು ಮತ್ತು ಮುಖಂಡರಿಗೆ ಅವರು ಸೂಚನೆ ನೀಡಿದ್ದಾರೆ ಎಂದು ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದರು.

Modi @20 ಪುಸ್ತಕದ ಪ್ರಚಾರಕ್ಕಾಗಿ ತಂತ್ರ: ಕಾರ್ಯಕ್ರಮಗಳ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪಕ್ಷದ ಎಲ್ಲ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ. ಸೆ.17 ರಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನವಾದ ಅ.2 ರವರೆಗೆ "ಸೇವಾ ಪಖ್ವಾರ" ಆಚರಿಸಲಾಗುತ್ತದೆ. ಪಖ್ವಾರ ಅಡಿ, ಪಕ್ಷವು ಜಿಲ್ಲಾ ಮಟ್ಟದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಪ್ರದರ್ಶನಗಳನ್ನು ಆಯೋಜಿಸುತ್ತದೆ. ಇದರೊಂದಿಗೆ "Modi @20 Sapne Hue Sakaar" ಪುಸ್ತಕದ ಪ್ರಚಾರಕ್ಕಾಗಿ ತಂತ್ರ ರೂಪಿಸುತ್ತಿದೆ.

ಇದರ ಜತೆಗೆ ರಕ್ತದಾನ ಶಿಬಿರ ಹಾಗೂ ಉಚಿತ ತಪಾಸಣಾ ಶಿಬಿರ, ಕೃತಕ ಕೈಕಾಲು, ಉಪಕರಣಗಳ ವಿತರಣೆ ಏರ್ಪಡಿಸಲಾಗುವುದು. ಪಕ್ಷವು ದೇಶವನ್ನು ಕ್ಷಯರೋಗ (ಟಿಬಿ) ಮುಕ್ತಗೊಳಿಸಲು ಒಂದು ವರ್ಷದ ಕಾರ್ಯಕ್ರಮ ನಡೆಸುತ್ತದೆ. ಇದರ ಅಡಿ ಪ್ರತಿಯೊಬ್ಬರೂ ಟಿಬಿ ರೋಗಿಯನ್ನು ದತ್ತು ತೆಗೆದುಕೊಳ್ಳುತ್ತಾರೆ ಮತ್ತು ಒಂದು ವರ್ಷದವರೆಗೆ ಅವನನ್ನು ನೋಡಿಕೊಳ್ಳುತ್ತಾರೆ. ಸೇವಾ ಪಖ್ವಾರ ಭಾಗವಾಗಿ, ಕೋವಿಡ್-19 ಬೂಸ್ಟರ್ ಡೋಸ್ ಪ್ರಚಾರಕ್ಕಾಗಿ ಅಭಿಯಾನ ನಡೆಸುತ್ತದೆ.

'ಖಾದಿ' ಬಳಕೆಗೆ ಸೂಚನೆ: ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಆಚರಣೆಗಾಗಿ ಆಯೋಜಿಸಲಾದ ಕಾರ್ಯಕ್ರಮಗಳಲ್ಲಿ ಗಿಡ ನೆಡುವ ಅಭಿಯಾನ ಮತ್ತು ಹಲವಾರು ಸ್ವಚ್ಛತಾ ಅಭಿಯಾನಗಳನ್ನು ಸೇರಿಸಲಾಗುವುದು. ನಮೋ ಆಪ್‌ನಲ್ಲಿ ಕಾರ್ಯಕ್ರಮಗಳ ಫೋಟೋಗಳನ್ನು ಅಪ್ಲೋಡ್​​ ಮಾಡುವಂತೆ ಜೆ.ಪಿ ನಡ್ಡಾ ಅವರು ಎಲ್ಲ ಮುಖಂಡರು ಮತ್ತು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಆಚರಣೆ ಭಾಗವಾಗಿ ವಿವಿಧತೆಯಲ್ಲಿ ಏಕತೆ ಮತ್ತು 'ಏಕ್ ಭಾರತ್ ಶ್ರೇಷ್ಠ ಭಾರತ'ಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಉತ್ತೇಜಿಸಲು ಅವರು ನಿರ್ದೇಶನ ನೀಡಿದ್ದಾರೆ. ಮಹಾತ್ಮಾ ಗಾಂಧೀಜಿ ಅವರ ಜನ್ಮದಿನದಂದು ವಿಶೇಷ ಕಾರ್ಯಕ್ರಮ ನಡೆಸಲು ಬಿಜೆಪಿ ಅಧ್ಯಕ್ಷರು ಸೂಚಿಸಿದ್ದಾರೆ. ಇದರ ಅಡಿ, 'ಖಾದಿ' ಬಳಕೆ ಮತ್ತು ರಾಷ್ಟ್ರಪಿತನ ತತ್ತ್ವ ಗಳ ಬಗ್ಗೆ ಚರ್ಚಿಸಲು ಹೇಳಲಾಗಿದೆ.

ಇಡೀ ದೇಶದಲ್ಲಿ "ಸೇವಾ ಪಖ್ವಾರ" ಸುಗಮವಾಗಿ ನಡೆಸಲು ಕೇಂದ್ರ ಸಮಿತಿ ರಚಿಸಲಾಗಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಷ್ಟ್ರೀಯ ಉಪಾಧ್ಯಕ್ಷ ರಘುಬರ್ ದಾಸ್, ರಾಷ್ಟ್ರೀಯ ಕಾರ್ಯದರ್ಶಿ ವಿಜಯ ರಹತ್ಕರ್, ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್, ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಕಿಸಾನ್ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ರಾಜ್‌ಕುಮಾರ್ ಚಹಾರ್, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್ ಸಿದ್ದಿಕಿ ಅವರಿಗೆ ಪಕ್ಷವು ಜವಾಬ್ದಾರಿಯನ್ನು ನೀಡಿದೆ.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರ 71ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ದೇಶಾದ್ಯಂತ ವಿಶೇಷ ಕೋವಿಡ್​​ ವ್ಯಾಕ್ಸಿನೇಷನ್​ ಅಭಿಯಾನ ನಡೆಸಲಾಗಿತ್ತು. ಅಂದು ರಾತ್ರಿ 10 ಗಂಟೆಯವರೆಗೆ 2.50 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆ ನೀಡುವುದರೊಂದಿಗೆ ವಿಶ್ವ ದಾಖಲೆಯನ್ನು ಸೃಷ್ಟಿಸಿತ್ತು.

ಇದನ್ನೂ ಓದಿ: ದೇಶಾದ್ಯಂತ 2.25 ಕೋಟಿ ಕೋವಿಡ್​ ಲಸಿಕೆ ಡೋಸ್‌​ ವಿತರಣೆ: ಮೋದಿ ಜನ್ಮದಿನದಂದು ಐತಿಹಾಸಿಕ ದಾಖಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.