ETV Bharat / bharat

ಜನ್ ಧನ್ ಖಾತೆಯಲ್ಲಿ ಭ್ರಷ್ಟಾಚಾರ ನಡೆದಿದೆ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ

author img

By

Published : Nov 22, 2021, 1:38 PM IST

ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಜನ್ ಧನ್ ಖಾತೆಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನವ ದೆಹಲಿ: ಜನ್ -ಧನ್ ಖಾತೆಗಳಲ್ಲಿನ ಹಣ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮ ವರದಿ ಉಲ್ಲೇಖಿಸಿ ಟ್ವೀಟ್​​ ಮಾಡಿರುವ ಅವರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜನ್ ಧನ್ ಖಾತೆದಾರರಿಂದ ಒಟ್ಟು 164 ಕೋಟಿ ರೂ. ಶುಲ್ಕವನ್ನು ವಿಧಿಸುವಾಗ ಜನ್ ಧನ್ ಖಾತೆಗಳಿಗೆ ಸಂಬಂಧಿಸಿದ ಷರತ್ತುಗಳನ್ನು ಉಲ್ಲಂಘಿಸಿದೆ ಎಂದು ವರದಿಗಳು ತಿಳಿಸಿವೆ.

2017 ಮತ್ತು ಸೆಪ್ಟೆಂಬರ್ 2020 ರ ನಡುವೆ, ಯುಪಿಐ (UPI) ಮತ್ತು ರುಪೇ ಕಾರ್ಡ್ ಮೂಲಕ ವಹಿವಾಟುಗಳಿಗಾಗಿ ಬ್ಯಾಂಕ್ ಜನ್ ಧನ್ ಖಾತೆದಾರರಿಂದ ಒಟ್ಟು 254 ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಈ ಅವಧಿಯಲ್ಲಿ ಬ್ಯಾಂಕ್ ಪ್ರತಿ ಖಾತೆದಾರರಿಂದ 17.70 ರೂಪಾಯಿಗಳನ್ನು ಕಡಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್​​ ಗಾಂಧಿ ಮೋದಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. 2019 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ, ರಫೇಲ್ ಜೆಟ್ ಸ್ವಾಧೀನಪಡಿಸಿಕೊಳ್ಳುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಇದನ್ನೂ ಓದಿ: ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ-2019 ಅಳವಡಿಕೆ ವಿಚಾರ; ಜಂಟಿ ಸಂಸದೀಯ ಸಮಿತಿ ಸಭೆ ಆರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.