ETV Bharat / bharat

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ ; ಕೇಂದ್ರ ಸಚಿವ ಅಜಯ್‌ ಮಿಶ್ರಾ ವಜಾಗೆ ರಾಹುಲ್‌ ಗಾಂಧಿ ಒತ್ತಾಯ

author img

By

Published : Dec 15, 2021, 12:25 PM IST

Lakhimpur Kheri violence: Rahul Gandhi moves adjournment motion notice, demands Govt to sack minister Ajay Mishra
ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ; ಕೇಂದ್ರ ಸಚಿವ ಅಜಯ್‌ ಮಿಶ್ರಾ ವಜಾಗೆ ರಾಹುಲ್‌ ಗಾಂಧಿ ಒತ್ತಾಯ

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದ ಬಗ್ಗೆ ಲೋಕಸಭೆಯಲ್ಲಿ ಚರ್ಚೆಗೆ ಒತ್ತಾಯಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಿಲುವಳಿ ಸೂಚನೆ ಮಂಡಿಸಿದ್ದಾರೆ..

ನವದೆಹಲಿ : ಉತ್ತರಪ್ರದೇಶದ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕೆಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ. ಈ ಸಂಬಂಧ ಲೋಕಸಭೆಯಲ್ಲಿಂದು ನಿಲುವಳಿ ಸೂಚನೆ ಮಂಡಿಸಿದ್ದಾರೆ.

  • मोदी जी, फिर से माफ़ी माँगने का टाइम आ गया…
    लेकिन पहले अभियुक्त के पिता को मंत्री पद से हटाओ।

    सच सामने है!#Lakhimpur #Murder pic.twitter.com/r5wfoOLHak

    — Rahul Gandhi (@RahulGandhi) December 14, 2021 " class="align-text-top noRightClick twitterSection" data=" ">

ನಿಲುವಳಿ ಸೂಚಕ ಮಂಡನೆ ಜೊತೆಗೆ ಕಾಂಗ್ರೆಸ್ ತಮ್ಮ ಪಕ್ಷದ ಸಂಸದರ ಸಭೆ ನಡೆಸಿದ್ದು, ಲಖೀಂಪುರ ಖೇರಿ ಹಿಂಸಾಚಾರದ ಬಗ್ಗೆ ಸಭೆಯಲ್ಲಿ ಚರ್ಚಿಸಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಹಣಿಯಲು ಮುಂದಾಗಿದೆ.

ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ರೈತರ ಮೇಲೆ ಕಾರು ಹರಿಸಿರುವುದು ಪೂರ್ವ ಯೋಜಿತ ಪಿತೂರಿ ಎಂದು ಹೇಳಿ 13 ಆರೋಪಿಗಳ ವಿರುದ್ಧ ಹೊಸ ಸೆಕ್ಷನ್‌ಗಳನ್ನು ಸೇರಿಸಲು ಚೀಫ್‌ ಜುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ (ಸಿಜೆಎಂ) ಬಳಿ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: ಲಖೀಂಪುರ್‌ ಖೇರಿ ಹಿಂಸಾಚಾರ ಪೂರ್ವಯೋಜಿತ: ಆರೋಪಿಗಳ ವಿರುದ್ಧ ಹೊಸ ಸೆಕ್ಷನ್‌ ಸೇರಿಸಲು ಎಸ್‌ಐಟಿ ಅರ್ಜಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.