ETV Bharat / bharat

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಹೆಚ್ಚು ಶಿಕ್ಷೆ ಪಡೆದ ಭಾರತದ ಮೊದಲ ವ್ಯಕ್ತಿ ನಾನು: ರಾಹುಲ್ ಗಾಂಧಿ

author img

By

Published : Jun 2, 2023, 10:04 AM IST

Updated : Jun 2, 2023, 2:03 PM IST

ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಮಾನನಷ್ಟ ಮೊಕದ್ದಮೆ ಕೇಸ್‌ನಲ್ಲಿ ಅತಿ ದೊಡ್ಡ ಶಿಕ್ಷೆಗೆ ಗುರಿಯಾದ ಭಾರತದ ಮೊದಲ ವ್ಯಕ್ತಿ ನಾನೇ ಎಂದು ರಾಹುಲ್​ ಗಾಂಧಿ ಅಮೆರಿಕದಲ್ಲಿ ಹೇಳಿದರು.

ವಾಷಿಂಗ್ಟನ್‌: ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ. ತಮ್ಮ ಸಂಸತ್ ಸದಸ್ಯತ್ವ ರದ್ದು ವಿಚಾರವಾಗಿ ಗುರುವಾರ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ಸಂಸತ್ತಿನಲ್ಲಿ ಅದಾನಿ-ಹಿಂಡನ್‌ಬರ್ಗ್ ವಿಷಯವನ್ನು ಪ್ರಸ್ತಾಪಿಸಿದ್ದಕ್ಕೆ ಪ್ರತಿಯಾಗಿ ನನಗೆ ಈ ಉಡುಗೊರೆ (ಶಿಕ್ಷೆ) ಸಿಕ್ಕಿದೆ. ಮಾನನಷ್ಟ ಮೊಕದ್ದಮೆಯಲ್ಲಿ ಅತಿ ದೊಡ್ಡ ಶಿಕ್ಷೆಗೆ ಗುರಿಯಾದ ಭಾರತದ ಮೊದಲ ವ್ಯಕ್ತಿ ನಾನು ಎಂದು ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮ ಸಂವಾದದಲ್ಲಿ ಹೇಳಿದರು. ಇದಕ್ಕೂ ಮುನ್ನ ಬುಧವಾರ (ಜೂ.1) ಕೂಡ ಸಂಸತ್ ಸದಸ್ಯತ್ವ ವಿಚಾರವಾಗಿ ಹೇಳಿಕೆ ನೀಡಿದ್ದರು.

  • #WATCH | Washington, DC: ..." Muslim League is a completely secular party, there is nothing non-secular about the Muslim League...": Congress leader Rahul Gandhi on being asked about Congress's alliance with Indian Union Muslim League (IUML) in Kerala pic.twitter.com/wXWa7t1bb0

    — ANI (@ANI) June 1, 2023 " class="align-text-top noRightClick twitterSection" data=" ">

ಕಾಂಗ್ರೆಸ್​ ವಿರೋಧ ಪಕ್ಷಗಳ ಜೊತೆ ಸಂಪರ್ಕದಲ್ಲಿದೆ: 1947 ರಿಂದ ಈವೆರೆಗಿನ ಇತಿಹಾಸದಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಅತಿ ಹೆಚ್ಚು ಶಿಕ್ಷೆ ಪಡೆದ ಭಾರತದ ಮೊದಲ ವ್ಯಕ್ತಿ ನಾನಾಗಿದ್ದೇನೆ. ಮೊದಲ ಅಪರಾಧಕ್ಕೆ ಯಾರಿಗೂ ಇಷ್ಟು ದೊಡ್ಡ ಪ್ರಮಾಣದ ಶಿಕ್ಷೆ ಆಗಿಲ್ಲ. ಇದರಿಂದ ನನಗೆ ಮುಂದೆ ಏನಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ತಿಳಿಸಿದರು. ಪ್ರತಿಪಕ್ಷಗಳ ಒಗ್ಗಟ್ಟಿನ ಕುರಿತ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ತಮ್ಮ ಪಕ್ಷ ವಿರೋಧ ಪಕ್ಷಗಳ ಜೊತೆ ಸಂಪರ್ಕದಲ್ಲಿದೆ. ಎಲ್ಲ ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಹೇಳಿದರು.

'ಮುಸ್ಲಿಂ ಲೀಗ್ ಜಾತ್ಯತೀತ ಪಕ್ಷ': ಕೇರಳದಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲಿಂ ಲೀಗ್ ಸಂಪೂರ್ಣ ಜಾತ್ಯತೀತ ಪಕ್ಷವಾಗಿದೆ. ಇದರಲ್ಲಿ ಜಾತ್ಯತೀತವಲ್ಲದ ಯಾವುದೇ ಅಂಶ ಇಲ್ಲ ಎಂದು ಹೇಳಿದರು. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಕೇರಳದಲ್ಲಿ ಕಾಂಗ್ರೆಸ್ ಮೈತ್ರಿಕೂಟದ ಭಾಗವಾಗಿದೆ.

ರಾಹುಲ್​ ಗಾಂಧಿ ಹೇಳಿಕೆಗೆ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್​ ಮೂಲಕ​ ಪ್ರತಿಕ್ರಿಯೆ ನೀಡಿದ್ದು, "ಧಾರ್ಮಿಕ ನೆಲೆಯಲ್ಲಿ ಭಾರತದ ವಿಭಜನೆಗೆ ಕಾರಣವಾದ ಜಿನ್ನಾ ನೇತೃತ್ವದ ಮುಸ್ಲಿಂ ಲೀಗ್ ಪಕ್ಷವು ರಾಹುಲ್ ಪ್ರಕಾರ ಜಾತ್ಯತೀತ ಪಕ್ಷ. ವಯನಾಡಿನಲ್ಲಿ ಸ್ವೀಕಾರಾರ್ಹತೆ ಕಾಯ್ದುಕೊಳ್ಳಲು ಇದು ಅವರ ಪ್ರಯತ್ನವಾಗಿದೆ" ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ರಾಹುಲ್ ವಿರುದ್ಧದ ಮೋದಿ ಉಪನಾಮದ ಕೇಸ್​: ಪರಿಷ್ಕರಣಾ ಅರ್ಜಿಯ ತೀರ್ಪು ಜೂ.5ರ ನಂತರ ಪ್ರಕಟ ಸಾಧ್ಯತೆ..!

ರಷ್ಯಾ-ಉಕ್ರೇನ್​ ಯುದ್ದ- ಭಾರತದ ನಡೆ ಬಗ್ಗೆ..: ರಷ್ಯಾ-ಉಕ್ರೇನ್ ಯುದ್ಧದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ವಿಷಯದಲ್ಲಿ ಮೋದಿ ಸರ್ಕಾರದ ಜೊತೆಗಿದ್ದೇನೆ ಎಂದು ಸ್ಪಷ್ಟಪಡಿಸಿದರು. ನಾವು ರಷ್ಯಾದೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇವೆ. ರಷ್ಯಾದ ಮೇಲೆ ಕೆಲವು ಅವಲಂಬನೆಗಳನ್ನು (ರಕ್ಷಣೆ) ಹೊಂದಿದ್ದೇವೆ. ಅದಕ್ಕಾಗಿಯೇ ನನ್ನ ನಿಲುವು ಭಾರತ ಸರ್ಕಾರದಂತೆಯೇ ಇರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ತಮ್ಮ ಐಫೋನ್​ನಲ್ಲಿ "ಹಲೋ ಮಿಸ್ಟರ್ ಮೋದಿ" ಎಂದ ರಾಹುಲ್​ ಗಾಂಧಿ: ಯಾಕೆ ಗೊತ್ತಾ?

Last Updated :Jun 2, 2023, 2:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.