ETV Bharat / bharat

ಕಾಂಗ್ರೆಸ್​​ ನಾಶ ಮಾಡಲು ರಾಹುಲ್, ಪ್ರಿಯಾಂಕ ಸಾಕು ಬೇರೆ ಯಾರೂ ಬೇಕಾಗಿಲ್ಲ: ಯೋಗಿ ಆದಿತ್ಯನಾಥ್

author img

By

Published : Feb 14, 2022, 10:10 AM IST

ಕಾಂಗ್ರೆಸ್ ನಾಶ ಮಾಡಲು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇಬ್ಬರು ಸಾಕು, ಬೇರೆ ಯಾರೂ ಬೇಕಾಗಿಲ್ಲ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪರೋಕ್ಷವಾಗಿ ವ್ಯಂಗ್ಯವಾಡಿದರು.

UP CM Yogi Adityanath
ಯುಪಿ ಸಿಎಂ ಯೋಗಿ ಆದಿತ್ಯನಾಥ್

ಲಕ್ನೋ(ಉತ್ತರ ಪ್ರದೇಶ): ಕಾಂಗ್ರೆಸ್ ಪಕ್ಷವನ್ನು ಅಂತ್ಯಗೊಳಿಸಲು ಯಾವುದೇ ಬಾಹ್ಯಶಕ್ತಿಯ ಅಗತ್ಯವಿಲ್ಲ. ಏಕೆಂದರೆ ಹಳೆಯ ಪಕ್ಷವನ್ನು ನಾಶಮಾಡಲು ಒಡಹುಟ್ಟಿದವರು (ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ) ಸಾಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ಹೇಳಿದ್ದಾರೆ.

  • #WATCH | "The siblings (Rahul Gandhi and Priyanka Gandhi Vadra) are enough to ruin the Congress. No one else is needed for that," says Uttar Pradesh Chief Minister Yogi Adityanath pic.twitter.com/Oo9GiatNa3

    — ANI (@ANI) February 14, 2022 " class="align-text-top noRightClick twitterSection" data=" ">

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ನಡೆಯುತ್ತಿರುವ 2ನೇ ಹಂತದ ಮತದಾನದ ಸಂದರ್ಭದಲ್ಲಿ ಆದಿತ್ಯನಾಥ್ ಅವರು ರಾಹುಲ್ ಮತ್ತು ಪ್ರಿಯಾಂಕಾ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: 300 ಸ್ಥಾನ ಗೆದ್ದು ಮತ್ತೆ ಬಿಜೆಪಿ ಸರ್ಕಾರ ರಚನೆ: ಸಿಎಂ ಯೋಗಿ ಆದಿತ್ಯನಾಥ್​ ವಿಶ್ವಾಸ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.