ETV Bharat / bharat

ತಡೆಗೋಡೆಗೆ ಡಿಕ್ಕಿ ಹೊಡೆದು ರೈಲ್ವೇ ಟ್ರ್ಯಾಕ್‌ಗೆ ಬಿದ್ದ ಬಸ್: ರಾಜಸ್ತಾನದಲ್ಲಿ ನಾಲ್ವರು ಸಾವು, 24 ಮಂದಿಗೆ ಗಾಯ

author img

By ETV Bharat Karnataka Team

Published : Nov 6, 2023, 7:26 AM IST

Updated : Nov 6, 2023, 8:38 AM IST

ಇಂದು ನಸುಕಿನ ಜಾವ ರಾಜಸ್ತಾನದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

Rajasthan
ತಡೆಗೊಡೆಗೆ ಡಿಕ್ಕಿ ಹೊಡೆದು ರೈಲ್ವೇ ಟ್ರ್ಯಾಕ್​ ಮೇಲೆ ಉರುಳಿ ಬಿದ್ದ ಬಸ್

ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತ

ದೌಸಾ(ರಾಜಸ್ಥಾನ): ರಾಜ್ಯದಲ್ಲಿ ಸೋಮವಾರ ನಸುಕಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿತು. ದುರಂತದಲ್ಲಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 24 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಎಂ ಸೇರಿದಂತೆ ಎಲ್ಲಾ ಉನ್ನತ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಕಲೆ ಹಾಕಿದರು.

injured as bus overturns on railway track at Dausa  4 people dead  accident in Rajasthan  ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತ  ಭೀಕರ ಅಪಘಾತದಲ್ಲಿ 4 ಜನರು ಮೃತ  24 ಮಂದಿ ಗಾಯಗೊಂಡಿರುವ ಘಟನೆ  ರಾಜ್ಯದಲ್ಲಿ ನಸುಕಿನ ಜಾವ ಭೀಕರ ರಸ್ತೆ ಅಪಘಾತ  ನಾಲ್ವರು ಪ್ರಯಾಣಿಕರು ಸ್ಥಳದಲ್ಲಿ ತಮ್ಮ ಪ್ರಾಣ  ಅಪಘಾತ ರಾಷ್ಟ್ರೀಯ ಹೆದ್ದಾರಿ 21ರಲ್ಲಿ ಸಂಭವಿಸಿ  ಪ್ರಯಾಣಿಕರ ಬಸ್ ತಡೆಗೊಡೆಗೆ ಡಿಕ್ಕಿ  ರೈಲ್ವೇ ಟ್ರ್ಯಾಕ್​ ಮೇಲೆ ಉರುಳಿ ಬಿದ್ದ ಬಸ್​ ತಡೆಗೊಡೆಗೆ ಡಿಕ್ಕಿ ಹೊಡೆದು ರೈಲ್ವೇ ಟ್ರ್ಯಾಕ್​
ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತ

ಈ ಅಪಘಾತ ರಾಷ್ಟ್ರೀಯ ಹೆದ್ದಾರಿ 21ರಲ್ಲಿ ಸಂಭವಿಸಿತು. ಪ್ರಯಾಣಿಕರ ಬಸ್ ತಡೆಗೊಡೆಗೆ ಡಿಕ್ಕಿ ಹೊಡೆದು ಕೆಳಗಿನ ರೈಲ್ವೆ ಹಳಿ ಮೇಲೆ ಬಿದ್ದಿದೆ. ಇದರಿಂದಾಗಿ ರೈಲುಗಳ ಸಂಚಾರವೂ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ದೌಸಾ ಡಿಎಂ ಕಮರ್ ಚೌಧರಿ ಪ್ರಕಾರ, ನಸುಕಿನ ಜಾವ 2.15 ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ-21 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹರಿದ್ವಾರದಿಂದ ಜೈಪುರ ಕಡೆಗೆ ಹೋಗುತ್ತಿದ್ದ ಪ್ಯಾಸೆಂಜರ್ ಬಸ್ ನಿಯಂತ್ರಣ ತಪ್ಪಿ ಕಬ್ಬಿಣದ ರೇಲಿಂಗ್ ಮುರಿದು ಕೆಳಗೆ ಬಿದ್ದಿದೆ. ಬಸ್ ನೇರವಾಗಿ ಜೈಪುರ ದೆಹಲಿ ರೈಲ್ವೆ ಮಾರ್ಗದ ಹಳಿ ಮೇಲೆ ಬಿದ್ದಿದೆ. ಬಸ್ ರೈಲು ಹಳಿ ಮೇಲೆ ಬಿದ್ದಿರುವ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದ್ದು, ಪೊಲೀಸರು ಹಾಗೂ ಆಂಬ್ಯುಲೆನ್ಸ್ ವಾಹನಗಳು ಸ್ಥಳಕ್ಕೆ ಧಾವಿಸಿದ್ದವು ಎಂದು ಹೇಳಿದರು.

injured as bus overturns on railway track at Dausa  4 people dead  accident in Rajasthan  ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತ  ಭೀಕರ ಅಪಘಾತದಲ್ಲಿ 4 ಜನರು ಮೃತ  24 ಮಂದಿ ಗಾಯಗೊಂಡಿರುವ ಘಟನೆ  ರಾಜ್ಯದಲ್ಲಿ ನಸುಕಿನ ಜಾವ ಭೀಕರ ರಸ್ತೆ ಅಪಘಾತ  ನಾಲ್ವರು ಪ್ರಯಾಣಿಕರು ಸ್ಥಳದಲ್ಲಿ ತಮ್ಮ ಪ್ರಾಣ  ಅಪಘಾತ ರಾಷ್ಟ್ರೀಯ ಹೆದ್ದಾರಿ 21ರಲ್ಲಿ ಸಂಭವಿಸಿ  ಪ್ರಯಾಣಿಕರ ಬಸ್ ತಡೆಗೊಡೆಗೆ ಡಿಕ್ಕಿ  ರೈಲ್ವೇ ಟ್ರ್ಯಾಕ್​ ಮೇಲೆ ಉರುಳಿ ಬಿದ್ದ ಬಸ್​ ತಡೆಗೊಡೆಗೆ ಡಿಕ್ಕಿ ಹೊಡೆದು ರೈಲ್ವೇ ಟ್ರ್ಯಾಕ್​
ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತ

ಅಪಘಾತದ ಬಗ್ಗೆ ರೈಲ್ವೆ ನಿಯಂತ್ರಣ ಕೊಠಡಿಗೆ ಮಾಹಿತಿ ಬಂದ ಕೂಡಲೇ ರೈಲುಗಳ ಕಾರ್ಯಾಚರಣೆಯನ್ನು ತಕ್ಷಣವೇ ನಿಲ್ಲಿಸಲಾಯಿತು. ರೈಲ್ವೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಘಟನೆಯ ಬಗ್ಗೆ ಪರಿಶೀಲಿಸಿದರು. ಅಪಘಾತದ ನಂತರ, ಜಿಆರ್‌ಪಿ, ಆರ್‌ಪಿಎಫ್ ಸೇರಿದಂತೆ ಹಲವು ಪೊಲೀಸ್ ಠಾಣೆಗಳ ಪೊಲೀಸರು ಸ್ಥಳಕ್ಕೆ ಧಾವಿಸಿ ಬಸ್‌ನಿಂದ ಮೃತರನ್ನು ಮತ್ತು ಗಾಯಾಳುಗಳನ್ನು ಹೊರತೆಗೆದರು. ಗಾಯಾಳುಗಳನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಯಿತು. ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಐವರ ಸ್ಥಿತಿ ಗಂಭೀರವಾಗಿದ್ದು ಜೈಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯ ಪೂರ್ಣಗೊಂಡು ಗಾಯಾಳುಗಳಿಗೆ ಚಿಕಿತ್ಸೆ ನೀಡಿದ ನಂತರ ಅಪಘಾತದ ತನಿಖೆ ಪ್ರಾರಂಭಿಸಲಾಗುವುದು ಎಂದು ಪೊಲೀಸ್ ಮತ್ತು ಜಿಲ್ಲಾ ಆಡಳಿತ ಹೇಳಿದೆ.

injured as bus overturns on railway track at Dausa  4 people dead  accident in Rajasthan  ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತ  ಭೀಕರ ಅಪಘಾತದಲ್ಲಿ 4 ಜನರು ಮೃತ  24 ಮಂದಿ ಗಾಯಗೊಂಡಿರುವ ಘಟನೆ  ರಾಜ್ಯದಲ್ಲಿ ನಸುಕಿನ ಜಾವ ಭೀಕರ ರಸ್ತೆ ಅಪಘಾತ  ನಾಲ್ವರು ಪ್ರಯಾಣಿಕರು ಸ್ಥಳದಲ್ಲಿ ತಮ್ಮ ಪ್ರಾಣ  ಅಪಘಾತ ರಾಷ್ಟ್ರೀಯ ಹೆದ್ದಾರಿ 21ರಲ್ಲಿ ಸಂಭವಿಸಿ  ಪ್ರಯಾಣಿಕರ ಬಸ್ ತಡೆಗೊಡೆಗೆ ಡಿಕ್ಕಿ  ರೈಲ್ವೇ ಟ್ರ್ಯಾಕ್​ ಮೇಲೆ ಉರುಳಿ ಬಿದ್ದ ಬಸ್​ ತಡೆಗೊಡೆಗೆ ಡಿಕ್ಕಿ ಹೊಡೆದು ರೈಲ್ವೇ ಟ್ರ್ಯಾಕ್​
ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತ

ಅಪಘಾತದ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ರಕ್ಷಣಾ ಕಾರ್ಯಾಚರಣೆಯತ್ತ ಜಿಲ್ಲಾಧಿಕಾರಿಗಳು ಗಮನಹರಿಸಿದ್ದಾರೆ. ಅಪಘಾತದ ನಂತರ ಸುಮಾರು 28 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು. ಇವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮೃತರ ಗುರುತುಗಳನ್ನು ಅಧಿಕಾರಿಗಳು ದೃಢಪಡಿಸುತ್ತಿದ್ದಾರೆ ಎಂದು ದೌಸಾ ಎಡಿಎಂ ರಾಜ್‌ಕುಮಾರ್ ಕಸ್ವಾ ತಿಳಿಸಿದರು.

ಇದನ್ನೂ ಓದಿ: ಗಾಜಾ ಪಟ್ಟಿಯನ್ನು ಎರಡು ಭಾಗಗಳಾಗಿ ವಿಂಗಡಿಸಿ ದಾಳಿ ಮುಂದುವರೆಸಿದ ಇಸ್ರೇಲ್ ಸೇನೆ

Last Updated : Nov 6, 2023, 8:38 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.