ಪಿಎಂ ಕೇರ್ಸ್​ ಫಂಡ್​ಗೆ ರತನ್​ ಟಾಟಾ ಟ್ರಸ್ಟಿ, ಸಲಹೆಗಾರರಾಗಿ ಸುಧಾಮೂರ್ತಿ ನೇಮಕ

author img

By

Published : Sep 21, 2022, 3:54 PM IST

Updated : Sep 21, 2022, 4:50 PM IST

ratan-tata-joins-as-trustee-of-pm-cares-fund

ಕೋವಿಡ್​ ವೇಳೆ ಆರಂಭಿಸಲಾದ ಪಿಎಂ ಕೇರ್ಸ್​ ಫಂಡ್​ಗೆ ಕೈಗಾರಿಕೋದ್ಯಮಿ ರತನ್ ಟಾಟಾ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕೆಟಿ ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಅವರನ್ನು ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ.

ನವದೆಹಲಿ: ಕೋವಿಡ್​ ವೇಳೆ ಆರಂಭಿಸಲಾದ ಪಿಎಂ ಕೇರ್ಸ್​ ಫಂಡ್​ಗೆ ಕೈಗಾರಿಕೋದ್ಯಮಿ ರತನ್ ಟಾಟಾ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕೆಟಿ ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಅವರನ್ನು ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ.

ಭಾರತದ ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ರಾಜೀವ್ ಮೆಹ್ರಿಷಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ, ಇಂಡಿಕಾಪ್ಸ್​ ಮತ್ತು ಪಿರಮಲ್​ ಫೌಂಡೇಶನ್​ನ ಮಾಜಿ ಸಿಇಒ ಆನಂದ್​ ಶಾ ಅವರನ್ನು ಪಿಎಂ ಕೇರ್ಸ್ ನಿಧಿಯ ಸಲಹಾ ಮಂಡಳಿಗೆ ನಾಮನಿರ್ದೇಶನ ಮಾಡಲಾಗಿದೆ.

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿಎಂ ಕೇರ್ಸ್ ಫಂಡ್‌ ಟ್ರಸ್ಟಿಗಳ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಹೊಸದಾಗಿ ನೇಮಕವಾದ ಟ್ರಸ್ಟಿಗಳು ಮತ್ತು ಸಲಹಾ ಮಂಡಳಿ ಸದಸ್ಯರನ್ನು ಪಿಎಂ ಕೇರ್ಸ್​ ನಿಧಿಯ ಅಂಗವಾಗಲು ಪ್ರಧಾನಿ ಮೋದಿ ಅವರು ಸ್ವಾಗತಿಸಿದರು ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಹೊಸ ಟ್ರಸ್ಟಿಗಳು ಮತ್ತು ಸಲಹೆಗಾರರ ಭಾಗವಹಿಸುವಿಕೆಯಿಂದ ನಿಧಿಯ ಕಾರ್ಯಚಟುವಟಿಕೆಗಳಿಗೆ ನೆರವಾಗಲಿದೆ. ಸಾರ್ವಜನಿಕ ಜೀವನದ ಅವರ ಅಪಾರವಾದ ಅನುಭವ ಈ ನಿಧಿಯನ್ನು ಬಡವರಿಗೆ ಮತ್ತು ಅಗತ್ಯ ಕಾರ್ಯಗಳಿಗೆ ಹೇಗೆ ವಿನಿಯೋಗ ಮಾಡಿಕೊಳ್ಳಬಹುದು ಎಂಬುದಕ್ಕೆ ನೆರವಾಗಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯಲ್ಲಿ ಹೇಳಿದರು.

ತುರ್ತು ಸಂದರ್ಭದಲ್ಲಿ ದೇಶದ ಜನರು ಪಿಎಂ ಕೇರ್ಸ್​ ಫಂಡ್​ಗೆ ನೆರವು ನೀಡಿರುವುದನ್ನು ಇದೇ ವೇಳೆ ಶ್ಲಾಘಿಸಿದ ಪ್ರಧಾನಿ, ದೇಶದ ಜನರು ನೀಡಿದ ನೆರವನ್ನು ಉತ್ತಮ ಕಾರ್ಯಗಳಿಗೆ ಬಳಸಲು ಯೋಜನೆ ರೂಪಿಸುವುದಾಗಿ ತಿಳಿಸಿದರು.

ಓದಿ: ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

Last Updated :Sep 21, 2022, 4:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.