ETV Bharat / bharat

ಆರ್​ಎಸ್​ಎಸ್​ ಸಹಸಂಘಟನೆಯಿಂದ ಸೆಪ್ಟೆಂಬರ್ 8ರಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ

author img

By

Published : Sep 2, 2021, 7:57 PM IST

ನೂತನ ಕೃಷಿ ಕಾಯ್ದೆಗಳು ಮತ್ತು ಎಂಎಸ್​ಪಿಗೆ ಸಂಬಂಧಿಸಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗದ ಆರೋಪದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬಿಕೆಎಸ್ ಪ್ರತಿಭಟನೆಗೆ ಸಜ್ಜಾಗಿದೆ.

RSS-affiliate farmers' body to stage nationwide dharna against agri laws on September 8
ಕೃಷಿ ಕಾಯ್ದೆಗಳ ವಿಚಾರವಾಗಿ ಆರ್​ಎಸ್​ಎಸ್​ನ ಸಹಸಂಘಟನೆಯಿಂದ ಸೆಪ್ಟೆಂಬರ್ 8ರಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ

ಲಖನೌ(ಉತ್ತರ ಪ್ರದೇಶ): ಕೇಂದ್ರ ಸರ್ಕಾರ ಈವರೆಗೆ ನೂತನ ಕೃಷಿ ಕಾಯ್ದೆಗಳು ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್​ಪಿ) ಕುರಿತು ಈವರೆಗೆ ತಮ್ಮ ಬೇಡಿಕೆಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ, ಆರ್​ಎಸ್​ಎಸ್​ನ ಸಹ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ (ಬಿಕೆಎಸ್​) ದೇಶಾದ್ಯಂತ ಧರಣಿ ನಡೆಸಲು ನಿರ್ಧಾರ ಮಾಡಿದೆ.

ಕನಿಷ್ಠ ಬೆಂಬಲ ಬೆಲೆ ಬೆಳೆಯ ಬೆಲೆಯ ಮೇಲೆ ನಿರ್ಧಾರವಾಗಬೇಕು ಮತ್ತು ನೂತನ ಕೃಷಿ ಕಾಯ್ದೆಗಳಿಂದ ರೈತರಿಗೆ ಉಂಟಾಗುವ ಸಮಸ್ಯೆಗಳು ಮತ್ತು ವಿವಾದಗಳನ್ನು ಬಗೆಹರಿಸುವುದನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನನ್ನು ಜಾರಿಗೊಳಿಸಬೇಕು ಎಂದು ಬಿಕೆಎಸ್​ ಆಗ್ರಹಿಸಿದೆ.

ಮೋದಿ ಸರ್ಕಾರ ಆಗಸ್ಟ್ 31ರೊಳಗೆ ಕೃಷಿ ಕಾಯ್ದೆಗಳು ಮತ್ತು ಕನಿಷ್ಠ ಬೆಂಬಲ ಬೆಲೆ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರುವುದಾಗಿ ಭರವಸೆ ನೀಡಿತ್ತು. ಆದರೆ ಅಂತಹ ಸಕಾರಾತ್ಮಕ ಬೆಳವಣಿಗೆಗಳು ಸರ್ಕಾರದಿಂದ ಕಾಣುತ್ತಿಲ್ಲ. ಆದ್ದರಿಂದ ನಾವು ಸೆಪ್ಟೆಂಬರ್ 8ರಂದು ಧರಣಿ ಹಮ್ಮಿಕೊಳ್ಳುತ್ತಿದ್ದೇವೆ ಎಂದು ಬಿಕೆಎಸ್​​ನ ಖಜಾಂಚಿ ಯುಗಲ್ ಕಿಶೋರ್​ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ.

ರೈತರ ಅವ್ಯವಸ್ಥೆಯನ್ನು ಜನರಿಗೆ ತಿಳಿಸುವ ಸಲುವಾಗಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸುದ್ದಿಗೋಷ್ಠಿಗಳನ್ನು ನಡೆಸಲಾಗುತ್ತದೆ. ಧರಣಿಯ ಕಾರ್ಯತಂತ್ರದ ಬಗ್ಗೆ ಶೀಘ್ರವಾಗಿ ನಿರ್ಧಾರ ಮಾಡಲಾಗುತ್ತದೆ ಎಂದು ಮಿಶ್ರಾ ಹೇಳಿದ್ದಾರೆ.

ಇದರ ಜೊತೆಗೆ ರೈತರಿಗೆ ಅವರು ಬೆಳೆದ ಬೆಳೆಗೆ ಪ್ರತಿಫಲ ಸಿಗುವುದಿಲ್ಲ ಎಂದಿರುವ ಅವರು ಕನಿಷ್ಠ ಬೆಂಬಲ ಬೆಲೆ ಪ್ರತಿಫಲವಲ್ಲ ಎಂದು ಮಾರ್ಮಿಕವಾಗಿ ನುಡಿದ್ದಾರೆ.

ಇದನ್ನೂ ಓದಿ: ಆನೆ, ಎಮ್ಮೆ ಸ್ನೇಹ ಸಂಬಂಧದ ಅಪರೂಪದ ವಿಡಿಯೋ: ವಿಭಿನ್ನ ಪ್ರಬೇಧದ ಜೀವಿಗಳ ಸಾಮರಸ್ಯದ ಬದುಕು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.