ETV Bharat / bharat

ಪುದುಚೇರಿ ಬಳಿಕ ಮಹಾರಾಷ್ಟ್ರದ ಮೇಲೆ ಬಿಜೆಪಿ ಕಣ್ಣು: 'ಸಾಮ್ನಾ'ದಲ್ಲಿ ಆರೋಪಿಸಿದ ಶಿವಸೇನೆ

author img

By

Published : Feb 24, 2021, 1:06 PM IST

saamana
ಶಿವಸೇನೆ ಮುಖವಾಣಿ ಸಾಮ್ನಾ

ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಯೋಜಿಸುತ್ತಿದೆ. ಅಷ್ಟೇ ಅಲ್ಲದೇ, ಪುದುಚೇರಿ ಸರ್ಕಾರ ಪತನದ ನಂತರ, ಕಾಂಗ್ರೆಸ್ ಪಕ್ಷವು ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿರುವಂತೆ ತೋರುತ್ತಿದೆ ಎಂದು ಶಿವಸೇನೆ ಹೇಳಿದೆ.

ಮುಂಬೈ: ಪುದುಚೇರಿ ಸರ್ಕಾರ ಪತನದ ನಂತರ, ಕಾಂಗ್ರೆಸ್ ಪಕ್ಷವು ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿರುವಂತೆ ತೋರುತ್ತಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಹೇಳಿದೆ.

ಕಾಂಗ್ರೆಸ್‌ನ ಐವರು ಹಾಗೂ ಮಿತ್ರಪಕ್ಷ ಡಿಎಂಕೆಯ ಒಬ್ಬ ಶಾಸಕನ ರಾಜೀನಾಮೆಯ ಮೂಲಕ ವಿಧಾನಸಭಾ ಚುನಾವಣೆಗೆ ಎರಡು ತಿಂಗಳು ಬಾಕಿಯಿರುವಾಗ ಪುದುಚೇರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಿದೆ.

ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪತನವನ್ನು ಸೇನಾ ತಮ್ಮ ಮುಖವಾಣಿ ಸಾಮ್ನಾದಲ್ಲಿ ಬರೆದಿತ್ತು. ಇದಾದ ಬಳಿಕ ಕಮಲ್ ನಾಥ್ ನೇತೃತ್ವದ ಸರ್ಕಾರವು ಮಾರ್ಚ್​ನಲ್ಲಿ ರಾಜೀನಾಮೆ ನೀಡಬೇಕಾಯಿತು. ಇನ್ನು "ಮಹಾರಾಷ್ಟ್ರವು ತುಂಬಾ ದೂರದಲ್ಲಿದೆ" ಎಂದು ಪ್ರತಿಪಾದಿಸುತ್ತಿದ್ದ ಅವರು, ಇದೀಗ ಬಿಜೆಪಿ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಲು ಯೋಜಿಸುತ್ತಿದೆ ಎಂದು ಶಿವಸೇನೆ ಆರೋಪಿಸಿದೆ.

saamana
ಶಿವಸೇನೆ ಸಂಪಾದಕೀಯ ಸಾಮ್ನಾದಲ್ಲಿ ಬರಹ

ಶಿವಸೇನೆ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಮುಖ್ಯಸ್ಥರಾಗಿದ್ದು, ಅದರಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್ ಘಟಕಗಳಾಗಿವೆ. "ಬಿಜೆಪಿ ಕೇವಲ ಕಾಂಗ್ರೆಸ್ ಅನ್ನು ಮಾತ್ರವಲ್ಲ, ಮಹಾರಾಷ್ಟ್ರದ ಶಿವಸೇನೆಯನ್ನೂ ಎದುರಿಸಬೇಕಾಗುತ್ತದೆ" ಎಂದು ರಾಜ್ಯದ ಆಡಳಿತ ಪಕ್ಷ ಹೇಳಿದೆ.

ನವೆಂಬರ್​ನಲ್ಲಿ, ಬಿಜೆಪಿಯ ಹಿರಿಯ ಮುಖಂಡ ಮತ್ತು ಕೇಂದ್ರ ಸಚಿವ ರೌಸಾಹೇಬ್ ದನ್ವೆ ಅವರು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ವಿಶ್ವಾಸವನ್ನು ಕೆಲವು ತಿಂಗಳುಗಳಲ್ಲಿ ಹೊರಹಾಕಿದ್ದರು. ಈ ಭಾಗವು ಈಗಾಗಲೇ ಅದಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಪ್ರತಿಪಾದಿಸಿದರು. ಪ್ರತಿಪಕ್ಷಗಳಿಗೆ ಬೆದರಿಕೆ ಹಾಕಲು ಬಿಜೆಪಿ ಕೇಂದ್ರ ಏಜೆನ್ಸಿಗಳನ್ನು ಬಳಸುತ್ತಿದೆ ಎಂದು ಶಿವಸೇನೆ ಆರೋಪಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.