ತಿರುವನಂತಪುರಂ (ಕೇರಳ) : ಆರ್ಟಿ-ಪಿಸಿಆರ್ ಪರೀಕ್ಷೆಯನ್ನೊಳಗೊಂಡ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ತಂದ ಭಕ್ತರಿಗೆ ಮಾತ್ರ ಡಿಸೆಂಬರ್ 26 ರಿಂದ ಶಬರಿಮಲೆ ದೇವಳ ಭೇಟಿಗೆ ಅವಕಾಶ ನೀಡಲಾಗುವುದು ಎಂದು ತಿರುವಾಂಕೂರು ದೇವಸಂ ಮಂಡಳಿ (ಟಿಡಿಬಿ) ತಿಳಿಸಿದೆ. ಪ್ರತಿದಿನ 5 ಸಾವಿರ ಭಕ್ತರ ಭೇಟಿಗೆ ಅವಕಾಶ ನೀಡಿ ಕೇರಳ ಹೈಕೋರ್ಟ್ ಭಾನುವಾರ ಆದೇಶಿಸಿದೆ.
ದೇವಾಲಯಕ್ಕೆ ಭೇಟಿ ನೀಡುವ ಭಕ್ತರು, 48 ಗಂಟೆಗಳ ಮೊದಲು ಮಾಡಿದ ಆರ್ಟಿ-ಪಿಸಿಆರ್ ಪರೀಕ್ಷೆಯನ್ನೊಳಗೊಂಡ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ತರಬೇಕು ಎಂದು ಟಿಡಿಬಿ ಅಧ್ಯಕ್ಷ ಎನ್. ವಾಸು ತಿಳಿಸಿದ್ದಾರೆ.
ಓದಿ: ಶಬರಿಮಲೆ ಅಯ್ಯಪ್ಪ ಭಕ್ತರಿಗೆ ವರ್ಚುವಲ್ ಕ್ಯೂ ಬುಕಿಂಗ್ ಆರಂಭ
ವಾರ್ಷಿಕ ಮಕರ ವಿಲಕ್ಕು (ಮಕರ ಜ್ಯೋತಿ) ಹಬ್ಬದ ಪ್ರಯುಕ್ತ ಡಿಸೆಂಬರ್ 31 ರಿಂದ 2021 ಜನವರಿ 13 ರವರೆಗೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ತಂದ ಭಕ್ತರಿಗೆ ಶಬರಿಮಲೆ ಬೆಟ್ಟ ಏರಲು ಅವಕಾಶ ನೀಡಲಾಗುವುದು. ಸರ್ಕಾರ ಶಬರಿಮಲೆ ತೀರ್ಥ ಯಾತ್ರಾ ಕಾರ್ಯಕ್ರಮಕ್ಕಾಗಿ 50 ಕೋಟಿ ರೂ ನೀಡಿರುವುದಾಗಿ ವಾಸು ತಿಳಿಸಿದ್ದಾರೆ.
ಈ ಹಿಂದೆ ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಆ್ಯಂಟಿಜೆನ್ ಪರೀಕ್ಷೆ ನಡೆಸಿದ ವರದಿ ತಂದಿದ್ದರೆ ಸಾಕಿತ್ತು. ಇಂದಿನವರೆಗೆ ಪ್ರತಿದಿನ 2 ಸಾವಿರ ಭಕ್ತರ ಭೇಟಿಗೆ ಅವಕಾಶ ನೀಡಲಾಗಿತ್ತು. ಮುಂದಿನ ಸೋಮವಾರದಿಂದ ಶುಕ್ರವಾರದವರೆಗೆ 3 ಸಾವಿರ ಭಕ್ತರ ಭೇಟಿಗೆ ಅವಕಾಶ ನೀಡಲಾಗುವುದು ಎಂದು ದೇವಾಲಯ ಮಂಡಳಿ ಹೇಳಿದೆ.