"No UPA" ಎಂದ ಮಮತಾ.. ಕುತೂಹಲ ಕೆರಳಿಸಿದ ಸಂಜಯ್​ ರಾವತ್​​-ರಾಹುಲ್ ಗಾಂಧಿ ಭೇಟಿ

author img

By

Published : Dec 7, 2021, 3:50 PM IST

Updated : Dec 7, 2021, 8:48 PM IST

alliance government in Maharashtra
alliance government in Maharashtra ()

ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದ್ದು, ಇದರ ಬೆನ್ನಲ್ಲೇ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಕಾರಣ ಇದೀಗ ರಾಹುಲ್ ಗಾಂಧಿ-ಸಂಜಯ್​ ರಾವತ್​​ ಮಹತ್ವದ ಮಾತುಕತೆ ನಡೆಸಲಿದ್ದಾರೆಂದು ತಿಳಿದು ಬಂದಿದೆ.

ನವದೆಹಲಿ: ಕಳೆದ ಕೆಲ ದಿನಗಳ ಹಿಂದೆ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎನ್​​​ಸಿಪಿ ಹಾಗೂ ಶಿವಸೇನೆಯ ಪ್ರಮುಖ ಮುಖಂಡರ ಜೊತೆ ಮಹತ್ವದ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ್ದ ದೀದಿ, ಯುಪಿಎ ಎಂಬುದು ಈಗ ಉಳಿದಿಲ್ಲ ಎಂಬ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್​​ಗೆ ಟಾಂಗ್​​ ನೀಡಿದ್ದರು. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಹಾಗೂ ಸಂಜಯ್​ ರಾವತ್​​ ಭೇಟಿ ಮಾಡ್ತಿರುವುದು ಕುತೂಹಲ ಮೂಡಿಸಿದೆ.

ಮಹಾರಾಷ್ಟ್ರದಲ್ಲಿ ಈಗಾಗಲೇ ಎನ್​​​ಸಿಪಿ+ಕಾಂಗ್ರೆಸ್​​+ಶಿವಸೇನೆ ಮೈತ್ರಿ ಸರ್ಕಾರವಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿವಸೇನೆ ಸಂಸದ ಸಂಜಯ್​ ರಾವತ್​​ ಹಾಗೂ ರಾಹುಲ್​ ಗಾಂಧಿ ನಡುವೆ ಮಹತ್ವದ ಮಾತುಕತೆ ನಡೆಯಲಿದೆ. ಮುಂದಿನ ವರ್ಷ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಬಗ್ಗೆ ಇಂದಿನ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ದಟ್ಟವಾಗಿದೆ. ಜೊತೆಗೆ ಯುಪಿಎ ವಿಚಾರವಾಗಿ ಮಾತುಕತೆ ನಡೆಯಬಹುದು ಎನ್ನಲಾಗ್ತಿದೆ.

ಇದನ್ನೂ ಓದಿರಿ: 104 ವರ್ಷದ ಪದ್ಮಶ್ರೀ ಪುರಸ್ಕೃತ ನಂದಾ ಸರ್​​​ ಇನ್ನಿಲ್ಲ...

ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿರುವ ಕಾರಣ ಅನೇಕ ಸಂದರ್ಭಗಳಲ್ಲಿ ಸಂಜಯ್​ ರಾವತ್​​​ ದೆಹಲಿಗೆ ತೆರಳಿ ರಾಹುಲ್​ ಗಾಂಧಿ ಅವರನ್ನ ಭೇಟಿ ಮಾಡಿದ್ದಾರೆ. ಆದರೆ ಮಮತಾ ಬ್ಯಾನರ್ಜಿ ಹೇಳಿಕೆ ನಂತರ ಈ ಭೇಟಿ ಬಹಳಷ್ಟು ಮಹತ್ವ ಪಡೆದುಕೊಂಡಿದೆ.

ಮುಂದಿನ ವರ್ಷದ ಆರಂಭದಲ್ಲೇ ಗೋವಾ, ಪಂಜಾಬ್​, ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಇಲ್ಲಿ ಕಾಂಗ್ರೆಸ್​​ ಪಕ್ಷಕ್ಕೆ ಎನ್​​​ಸಿಪಿ ಹಾಗೂ ಶಿವಸೇನೆಯ ಬೆಂಬಲ ಪಡೆದುಕೊಳ್ಳಲು ರಾಹುಲ್​ ಗಾಂಧಿ ಮನವಿ ಮಾಡಿಕೊಳ್ಳಬಹುದು.

Last Updated :Dec 7, 2021, 8:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.