ETV Bharat / bharat

ಜ್ಞಾನವಾಪಿ ಮಸೀದಿ ವಿವಾದ: ಮುಸ್ಲಿಮರ ವುಡು ಮನವಿ ಪರಿಗಣಿಸಲು ಸುಪ್ರೀಂ ಸೂಚನೆ

author img

By

Published : Apr 17, 2023, 9:26 PM IST

ಜ್ಞಾನವ್ಯಾಪಿ ಮಸೀದಿಯಲ್ಲಿ ಮುಸ್ಲಿಮರ ವುಡು ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿರುವ ಮನವಿಯನ್ನು ಪರಿಗಣಿಸುವಂತೆ ವಾರಣಾಸಿ ಜಿಲ್ಲಾಧಿಕಾರಿಗೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ.

sc-asks-varanasi-collector-to-consider-request-for-wuzu-facility-for-muslims-in-gyanvapi-mosque
ಜ್ಞಾನವಾಪಿ ಮಸೀದಿ ವಿವಾದ : ಮುಸ್ಲಿಮರ ವುಡು ಮನವಿಯನ್ನು ಪರಿಗಣಿಸಲು ಸುಪ್ರೀಂ ಸೂಚನೆ

ನವದೆಹಲಿ : ಜ್ಞಾನವ್ಯಾಪಿ ಮಸೀದಿ ವಿವಾದ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಅಯೋಧ್ಯೆ ರಾಮ ಮಂದಿರ ತೀರ್ಪಿನ ನಂತರ ಈ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ರಂಜಾನ್​ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ವುಡು ಮಾಡಲು ವ್ಯವಸ್ಥೆ ಮಾಡಿಕೊಡುವಂತೆ ಕೋರಿ ಜ್ಞಾನವ್ಯಾಪಿ ಮಸೀದಿ ಸಮಿತಿ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್​ ವಾರಾಣಾಸಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ಕರೆಯುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ಜಿಲ್ಲಾಧಿಕಾರಿಗೆ ಸೋಮವಾರ ಸೂಚಿಸಿದ್ದಾರೆ.

ನ್ಯಾ.ಪಿ.ಎಸ್ ನರಸಿಂಹ ಮತ್ತು ನ್ಯಾ.ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ಪೀಠವು, ಸಭೆಯಲ್ಲಿ ಕೈಗೊಂಡ ಒಮ್ಮತದ ನಿರ್ಧಾರದ ಮೇಲೆ ನ್ಯಾಯಾಲಯವು ಏಪ್ರಿಲ್ 21ರ ಶುಕ್ರವಾರದಂದು ಸೂಕ್ತ ಆದೇಶಗಳನ್ನು ನೀಡಲಿದೆ ಎಂದು ಹೇಳಿದ್ದಾರೆ.

ಅಂಜುಮನ್ ಇಂತೇಜಾಮಿಯಾ ಮಸೀದಿಯ ಪರ ಹಿರಿಯ ವಕೀಲ ಹುಸೇಫಾ ಅಹ್ಮೆದಿ ಅವರು, ಮುಸ್ಲಿಮರು ಇಲ್ಲಿನ ಫೌಂಟೇನ್​​ ಪ್ರದೇಶ ಮತ್ತು ಹತ್ತಿರದ ವಾಶ್‌ರೂಮ್‌ಗಳಲ್ಲಿ ತಮ್ಮ ವುಡು ಮಾಡಲು ಅವಕಾಶ ಕಲ್ಪಿಸುವಂತೆ ಎಂದು ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಕಳೆದ ವರ್ಷ ವಿವಾದಿತ ಸ್ಥಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ವುಡು ಸೇರಿದಂತೆ ವಿವಿಧ ಧಾರ್ಮಿಕ ಚಟುವಟಿಕೆಗಳನ್ನು ನಿರ್ವಹಿಸಲು ಮುಸ್ಲಿಮರ ಹಕ್ಕನ್ನು ನಿರ್ಬಂಧಿಸಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿತ್ತು ಎಂದು ವಕೀಲ ಅಹ್ಮದಿ ಇದೇ ವೇಳೆ ತಿಳಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯದ ಪರವಾಗಿ ವಾದ ಮಂಡಿಸಿದ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಒಂದು ಗುಂಪು ಇಲ್ಲಿ ಕಾರಂಜಿ ಇರುವುದಾಗಿ ಹೇಳಿದೆ, ಇನ್ನೊಂದು ಗುಂಪು ಶಿವಲಿಂಗ ಎಂದು ವಾದಿಸುತ್ತಿವೆ. ಇದು ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ, ನಾವು ಮುಸ್ಲಿಮರಿಗೆ ವುಜು ಮಾಡಲು ಪ್ರತ್ಯೇಕ ವ್ಯವಸ್ಥೆಗಳನ್ನು ಮಾಡಿದ್ದೇವೆ ಎಂದು ಹೇಳಿದರು.

ಈ ಸಂಬಂಧ ಮಸೀದಿ ಪರ ವಕೀಲರು, ಸಂಚಾರಿ ಶೌಚಾಲಯಗಳಿದ್ದರೂ ಮುಸ್ಲಿಮರು ಅನುಕೂಲ ಆಗುತ್ತದೆ ಎಂದು ಹೇಳಿದಾಗ, ಸಂಚಾರಿ ಶೌಚಾಲಯಗಳು ಸ್ಥಳದ ಪಾವಿತ್ರ್ಯತೆಯ ಮೇಲೆ ಪರಿಣಾಮ ಬೀರಬಹುದು. ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮಕೈಗೊಳ್ಳುತ್ತಾರೆ ಎಂದು ಸಾಲಿಸಿಟರ್​ ಜನರಲ್​ ಹೇಳಿದರು.

ಇನ್ನು, ಸುಪ್ರೀಂ ಕೋರ್ಟ್ ವಾರಣಾಸಿಯ ಜಿಲ್ಲಾಧಿಕಾರಿಗೆ ನಾಳೆ ಸಭೆ ಕರೆದು "ಸೌಹಾರ್ದಯುತ ಕಾರ್ಯ ವ್ಯವಸ್ಥೆ" ಒದಗಿಸುವಂತೆ ಆದೇಶಿಸಿದೆ. ಈ ಬಗ್ಗೆ ಒಮ್ಮತವಿದ್ದಲ್ಲಿ ನ್ಯಾಯಾಲಯವು ಆದೇಶ ನೀಡುತ್ತದೆ. ಇಲ್ಲದಿದ್ದಲ್ಲಿ ಏಪ್ರಿಲ್ 21 ರಂದು ಮತ್ತೆ ವಿಚಾರಣೆ ನಡೆಸಲಿದೆ ಎಂದು ತಿಳಿಸಿದೆ.

ಕಳೆದ ವರ್ಷ ಐವರು ಮಹಿಳೆಯರು ಜ್ಞಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗವಿದ್ದು, ನಮಗೆ ಪೂಜೆ ನಡೆಸಲು ಅವಕಾಶ ಕಲ್ಪಿಸಬೇಕೆಂದು ನ್ಯಾಯಾಲಯದ ಮೊರೆಹೋಗಿದ್ದರು. ಈ ಸಂಬಂಧ ವಾರಾಣಾಸಿ ನ್ಯಾಯಾಲಯವು ವಿವಾದಿತ ಪ್ರದೇಶವನ್ನು ಸೀಲ್​ ಮಾಡುವಂತೆ ಆದೇಶ ನೀಡಿತ್ತು. ಈ ಸಂಬಂಧ ಮುಸ್ಲಿಮರು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದರು. ಈ ಬಗ್ಗೆ ಸುಪ್ರೀ ಕೋರ್ಟ್​ ಧಾರ್ಮಿಕ ಚಟುವಟಿಕೆಗಳನ್ನು ನಿರ್ಬಂಧಿಸಬಾರದು ಎಂದು ಆದೇಶ ನೀಡಿತ್ತು.

ಪ್ರಕರಣವನ್ನು ಹಿರಿಯ ಅನುಭವಿ ನ್ಯಾಯಾಂಗದ ಅಧಿಕಾರಿಯೊಬ್ಬರು ನಿರ್ವಹಿಸಲು ಸುಪ್ರೀಂ ಕೋರ್ಟ್ ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸಿತು. ಜಿಲ್ಲಾ ನ್ಯಾಯಾಲಯವು ಹಿಂದೂಗಳ ಪರವಾಗಿ ತೀರ್ಪು ನೀಡಿ, ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆಯನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಸಂಬಂಧ ಅಲಹಾಬಾದ್ ಹೈಕೋರ್ಟ್​, ಶಿವಲಿಂಗದ ಕಾರ್ಬನ್​​ ಡೇಟಿಂಗ್ ನಡೆಸಲು ​ ಸಾಧ್ಯವಾದರೆ ಈ ಬಗ್ಗೆ ವರದಿ ಸಲ್ಲಿಸುವಂತೆ ಎಎಸ್​​ಐಗೆ ಕೇಳಿತ್ತು.

ಇದನ್ನೂ ಓದಿ : ಮಳಲಿ ಮಸೀದಿ ವಿವಾದ: ಮಂದಿರ ನಿರ್ಮಾಣಕ್ಕೆ ಗಣಯಾಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.