ETV Bharat / bharat

ಗುಟ್ಕಾ, ತಂಬಾಕು ಉತ್ಪನ್ನಗಳ ಮೇಲೆ ನಿಷೇಧ: ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

author img

By

Published : Apr 26, 2023, 9:06 AM IST

Updated : Apr 26, 2023, 10:43 AM IST

Representative image
ಸುಪ್ರೀಂಕೋರ್ಟ್

ತಮಿಳುನಾಡಿನಲ್ಲಿ ಗುಟ್ಕಾ, ತಂಬಾಕು ಉತ್ಪನ್ನಗಳ ಮೇಲಿನ ನಿಷೇಧವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ ಹೈಕೋರ್ಟ್ ತೀರ್ಪಿಗೆ ಮೂರು ತಿಂಗಳ ಕಾಲ ತಡೆಯಾಜ್ಞೆ ನೀಡಿದೆ.

ನವದೆಹಲಿ: ತಮಿಳುನಾಡಿನಲ್ಲಿ ಗುಟ್ಕಾ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ 2018ರ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು, ತಯಾರಕರು ತಮ್ಮ ಚಟುವಟಿಕೆಗಳನ್ನು ರಾಜ್ಯ ಹೊರಡಿಸಿದ ಅಧಿಸೂಚನೆಗೆ ಒಳಪಡದಿದ್ದಲ್ಲಿ ಅವರು ಪರಿಹಾರಕ್ಕಾಗಿ ಸೂಕ್ತ ವೇದಿಕೆಯನ್ನು ಸಂಪರ್ಕಿಸಬಹುದು ಎಂದು ಸ್ಪಷ್ಟಪಡಿಸಿದರು.

ತಮಿಳುನಾಡು ಸರ್ಕಾರವನ್ನು ಪ್ರತಿನಿಧಿಸುವ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂದ್ ತಿವಾರಿ ಅವರು ಗುಟ್ಖಾ ಮತ್ತು ಇತರ ತಂಬಾಕು ಆಧಾರಿತ ಉತ್ಪನ್ನಗಳ ಮಾರಾಟ, ತಯಾರಿಕೆ ಮತ್ತು ಸಾಗಣೆಯ ಮೇಲೆ ವಿಧಿಸಲಾದ ನಿಷೇಧ ಸಮರ್ಥಿಸುವ ಹೈಕೋರ್ಟ್ ನಿರ್ದೇಶನವನ್ನು ಉಲ್ಲೇಖಿಸಿದರು. ತಂಬಾಕು ಜಗಿಯುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ ಮತ್ತು ಸರ್ಕಾರಕ್ಕೆ ತನ್ನ ನಾಗರಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಎಲ್ಲ ಹಕ್ಕಿದೆ ಎಂದು ಸಿಬಲ್ ವಾದಿಸಿದರು.

ಗುಟ್ಕಾ ಮತ್ತು ಇತರ ತಂಬಾಕುಗಳ ಮಾರಾಟ, ತಯಾರಿಕೆ ಮತ್ತು ಸಾಗಣೆಯನ್ನು ನಿಷೇಧಿಸುವ ಮೇ 2018ರ ಅಧಿಸೂಚನೆ ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಗುಟ್ಖಾ ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟ, ಶೇಖರಣೆ, ತಯಾರಿಕೆ ನಿಷೇಧಿಸುವ ಆಹಾರ ಸುರಕ್ಷತಾ ಆಯುಕ್ತರ ಆದೇಶಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ನಿಷೇಧ ಮತ್ತು ಮಾರಾಟದ ಮೇಲಿನ ನಿರ್ಬಂಧ) ನಿಯಮಗಳು, 2011 ರ ನಿಯಮಾವಳಿ 2.3.4 ರ ಬೆಂಬಲಿತವಾಗಿದೆ ಎಂದು ರಾಜ್ಯ ಸರ್ಕಾರ ವಾದಿಸಿತ್ತು.

ಮೇ 23, 2018 ರಂದು ಆಹಾರ ಸುರಕ್ಷತಾ ಆಯುಕ್ತರು ಹೊರಡಿಸಿದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿತು. ಗುಟ್ಕಾ, ಪಾನ್ ಮಸಾಲಾ ಮತ್ತು ತಂಬಾಕು, ನಿಕೋಟಿನ್ ಹೊಂದಿರುವ ಇತರ ಅಗಿಯುವ ಆಹಾರ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ಅದು ನಿಷೇಧಿಸಿತು. ಮೇ 2018 ರ ಅಧಿಸೂಚನೆಯನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ ಮನವಿಗೆ ಮಾರ್ಚ್‌ನಲ್ಲಿ ಸುಪ್ರೀಂಕೋರ್ಟ್ ಉತ್ತರ ಕೋರಿತ್ತು. ಈ ಬಗ್ಗೆ ಸುಪ್ರೀಂ ಕೋರ್ಟ್ ಆಹಾರ ಸುರಕ್ಷತಾ ಆಯುಕ್ತರು, ಜಯವಿಲಾಸ್ ತಂಬಾಕು ವ್ಯಾಪಾರಿಗಳು ಮತ್ತು ಇತರರಿಂದ ಪ್ರತಿಕ್ರಿಯೆ ಕೇಳಿದೆ.

ರಾಜ್ಯ ಸರ್ಕಾರವು ತನ್ನ ಮೇಲ್ಮನವಿಯಲ್ಲಿ, 2011 ರ ನಿಯಮಾವಳಿಗಳ ನಿಯಮ 2.3.4 ರ ಅಡಿಯಲ್ಲಿ ಆಹಾರ ಸುರಕ್ಷತಾ ಆಯುಕ್ತರು ಹೊರಡಿಸಿದ ರಾಜ್ಯದಲ್ಲಿ ಗುಟ್ಖಾ ಮತ್ತು ಪಾನ್ ಮಸಾಲಾವನ್ನು ನಿಷೇಧಿಸುವ ಅಧಿಸೂಚನೆಗಳು ಅವರ ಅಧಿಕಾರದಲ್ಲಿಲ್ಲ ಎಂದು ಹೈಕೋರ್ಟ್ ತಪ್ಪಾಗಿ ಪರಿಗಣಿಸಿದೆ ಎಂದು ಪ್ರತಿಪಾದಿಸಿದೆ.

ಆದರೆ ತಂಬಾಕು ಮೇಲೆ ಶಾಶ್ವತ ನಿಷೇಧ ಹೇರಲು ಆಹಾರ ಸುರಕ್ಷತಾ ಆಯುಕ್ತರಿಗೆ ಅವಕಾಶ ನೀಡುವುದು ವರ್ಷದಿಂದ ವರ್ಷಕ್ಕೆ ಸತತ ಅಧಿಸೂಚನೆಗಳನ್ನು ಹೊರಡಿಸುವ ಉತ್ಪನ್ನಗಳು ಕಾನೂನಿನಲ್ಲಿ ಒದಗಿಸದ ಅಧಿಕಾರವನ್ನು ನೀಡುತ್ತವೆ ಎಂದು ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ: ತಂಬಾಕು ಉತ್ಪನ್ನ ಜಾಹೀರಾತಿನಿಂದ ಹೊರಬಂದ ಅಕ್ಷಯ್​ಕುಮಾರ್; ಅಭಿಮಾನಿಗಳಲ್ಲಿ ಕ್ಷಮೆ

Last Updated :Apr 26, 2023, 10:43 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.