ETV Bharat / bharat

ಗಡಿಯಲ್ಲಿ ಯೋಧರ ಕೈಗೆ ರಾಖಿ ಕಟ್ಟಿ ಸಂಭ್ರಮಿಸಿದ ಶಾಲಾ ವಿದ್ಯಾರ್ಥಿನಿಯರು

author img

By ETV Bharat Karnataka Team

Published : Aug 30, 2023, 12:32 PM IST

Raksha Bandhan
ಯೋಧರ ಕೈಗೆ ರಾಖಿ ಕಟ್ಟಿ ಸಂಭ್ರಮಿಸಿದ ಶಾಲಾ ವಿದ್ಯಾರ್ಥಿನಿಯರು

Raksha Bandhan: ಶಾಲಾ ವಿದ್ಯಾರ್ಥಿನಿಯರು ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಿಸಿದರು.

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) : ಜಮ್ಮು ಮತ್ತು ಕಾಶ್ಮೀರದಲ್ಲಿ ರಕ್ಷಾ ಬಂಧನದ ಸಂಭ್ರಮ ಮನೆ ಮಾಡಿದೆ. ತಮ್ಮ ಒಡಹುಟ್ಟಿದವರಿಂದ ದೂರವಿದ್ದು, ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಪಡೆ ಸಿಬ್ಬಂದಿಗೆ ಸ್ಥಳೀಯ ಶಾಲಾ ವಿದ್ಯಾರ್ಥಿನಿಯರು ರಾಖಿ ಕಟ್ಟುವ ಮೂಲಕ ಸಂತಸ ಹಂಚಿಕೊಂಡರು. ಇಲ್ಲಿನ ಅಖ್ನೂರ್ ಸೆಕ್ಟರ್‌ನಲ್ಲಿ ಶಾಲಾ ಬಾಲಕಿಯರು ಭಾರತೀಯ ಸೇನಾ ಯೋಧರ ಕೈಗೆ ರಾಖಿಗಳನ್ನು ಕಟ್ಟಿ, ಹಣೆಗೆ ತಿಲಕವನ್ನು ಹಚ್ಚುವ ಮೂಲಕ ಸಹೋದರರ ಮೇಲಿನ ಪ್ರೀತಿಯನ್ನು ಪ್ರದರ್ಶಿಸಿದರು.

ಈ ವೇಳೆ ಮಾತನಾಡಿದ ವಿದ್ಯಾರ್ಥಿನಿಯೊಬ್ಬಳು "ಯೋಧರು ನಮ್ಮನ್ನು ರಕ್ಷಿಸಲು ಇಲ್ಲಿದ್ದಾರೆ. ಹಾಗಾಗಿ, ಅವರು ಸಹ ನಮ್ಮ ಒಡಹುಟ್ಟಿದವರೇ ಆಗಿದ್ದಾರೆ. ಸೈನಿಕರ ಸೇವೆಯನ್ನು ಗುರುತಿಸುವುದು ಮತ್ತು ನಮ್ಮ ಕರ್ತವ್ಯ ನಿಭಾಯಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಭಾವಿಸುತ್ತೇನೆ. ನಾವು ಅವರ ಕೈಗಳಿಗೆ ಕಟ್ಟುವ ರಾಖಿಗಳು ಅವರನ್ನು ರಕ್ಷಿಸುತ್ತದೆ ಎಂಬ ನಂಬಿಕೆ ಇದೆ" ಎಂದು ಹೇಳಿದರು.

"ತಮ್ಮ ಮನೆ ಮತ್ತು ಪ್ರೀತಿಪಾತ್ರರಿಂದ ದೂರವಿರುವ ಯೋಧರು ರಕ್ಷಾ ಬಂಧನ ಆಚರಣೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶ. ಆದ್ದರಿಂದ ಇಲ್ಲಿಗೆ ಬಂದು ರಾಖಿ ಕಟ್ಟಿದ್ದೇವೆ. ನಾವು ಅವರ ಸಹೋದರಿಯರಂತೆ. ಅವರಿಗೆ ದೇವರು ಸರ್ವಶಕ್ತಿ ಕರುಣಿಸಲೆಂದು ಪ್ರಾರ್ಥಿಸಿದ್ದೇವೆ. ಅವರನ್ನು ಸುರಕ್ಷಿತವಾಗಿಡಲಿ" ಎಂದು ರಕ್ಷಣಾ ಪಡೆಗಳೊಂದಿಗೆ ರಕ್ಷಾ ಬಂಧನ ಆಚರಿಸಿದ ಸ್ಥಳೀಯ ಸರಪಂಚ್ ಗೀತಾ ದೇವಿ ತಿಳಿಸಿದರು.

ಇದನ್ನೂ ಓದಿ : ಯಾವ ಸಮಯದಲ್ಲಿ ರಾಖಿ ಕಟ್ಟಿದರೆ ಉತ್ತಮ? : ರಾಶಿಚಕ್ರದ ಪ್ರಕಾರ ಯಾವ ಬಣ್ಣದ ರಾಖಿ ಕಟ್ಟಬೇಕೆಂದು ತಿಳಿಯಿರಿ

ಹಾಗೆಯೇ, ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್‌ನಲ್ಲಿರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಸಹ ಶಾಲಾ ಮಕ್ಕಳ ಗುಂಪಿನೊಂದಿಗೆ ರಕ್ಷಾ ಬಂಧನವನ್ನು ಆಚರಿಸಿದರು. ಶಾಲಾ ವಿದ್ಯಾರ್ಥಿನಿಯರು ಸಮವಸ್ತ್ರ ಧರಿಸಿ, ಬಿಎಸ್‌ಎಫ್ ಸಿಬ್ಬಂದಿಯ ಕೈಗೆ ಪ್ರೀತಿ ಮತ್ತು ಬಾಂಧವ್ಯದ ಪವಿತ್ರ ದಾರವನ್ನು ಕಟ್ಟುತ್ತಿರುವುದು ಕಂಡು ಬಂದಿತು. ಅಲ್ಲದೆ, ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಶಾಲಾ ಬಾಲಕಿಯರ ಗುಂಪೊಂದು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧರೊಂದಿಗೆ ರಾಖಿ ಹಬ್ಬ ಆಚರಿಸಿದರು.

ಇದನ್ನೂ ಓದಿ : ರಕ್ಷಾಬಂಧನಕ್ಕೆ ಸಹೋದರಿಯಿಂದ ವಿಶೇಷ ಉಡುಗೊರೆ : ಆಸ್ಪತ್ರೆ ಸೇರಿದ ಅಣ್ಣನಿಗೆ ಕಿಡ್ನಿ ದಾನ ಮಾಡಿದ್ಲು ತಂಗಿ

ಶ್ರಾವಣ ಮಾಸದ ಹುಣ್ಣಿಮೆಯಂದು ರಕ್ಷಾ ಬಂಧನ : ಹಿಂದೂ ಪಂಚಾಂಗದ ಪ್ರಕಾರ, ರಾಖಿ ಹಬ್ಬವನ್ನು ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯ ದಿನ ಆಚರಿಸಲಾಗುತ್ತದೆ. ಈ ವರ್ಷದ ಹುಣ್ಣಿಮೆಯು ಆಗಸ್ಟ್ 30 ಮತ್ತು 31 ರಂದು ಬಂದಿದೆ. ಮಾರುಕಟ್ಟೆಯಲ್ಲಿ ಸಹೋದರಿಯರು ಸೋದರರಿಗಾಗಿ ರಾಖಿ ಖರೀದಿಸುವುದರಲ್ಲಿ ನಿರತರಾಗಿದ್ದಾರೆ. ಇತ್ತ ಸಹೋದರರು ತಮ್ಮ ಮುದ್ದಿನ ಸೋದರಿಯರಿಗೆ ಉಡುಗೊರೆ ಕೊಳ್ಳುವಲ್ಲಿ ಬ್ಯುಸಿಯಾಗಿದ್ದಾರೆ. (ಎಎನ್​ಐ)​

ಇದನ್ನೂ ಓದಿ : Raksha Bandhan 2023 : ಬಾಲಿವುಡ್‌ನ ಪ್ರಸಿದ್ಧ ಸಹೋದರ - ಸಹೋದರಿ ಜೋಡಿಯ ನೋಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.