ETV Bharat / bharat

ಶೋಪಿಯಾನ್​ ಎನ್‌ಕೌಂಟರ್‌ನಲ್ಲಿ ಟಿಆರ್‌ಎಫ್ ಉಗ್ರನ ಹತ್ಯೆ; ಪಾಕ್‌ ದಾಳಿಯಿಂದ ಗಾಯಗೊಂಡ ಬಿಎಸ್‌ಎಫ್‌ ಯೋಧ ಹುತಾತ್ಮ

author img

By ANI

Published : Nov 9, 2023, 7:58 AM IST

Updated : Nov 9, 2023, 1:08 PM IST

TRF terrorist killed: ಟಿಆರ್‌ಎಫ್ ಭಯೋತ್ಪಾದಕನನ್ನು ಭದ್ರತಾ ಪಡೆ ಹತ್ಯೆಗೈದ ಬಗ್ಗೆ ಎಕ್ಸ್​ನಲ್ಲಿ ಕಾಶ್ಮೀರ ವಲಯದ ಪೊಲೀಸರು ಮಾಹಿತಿ ನೀಡಿದ್ದಾರೆ.

ಭದ್ರತಾ ಪಡೆ
ಭದ್ರತಾ ಪಡೆ

ಶೋಪಿಯಾನ್‌(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ನ ಕಥೋಹಾಲನ್​ ಪ್ರದೇಶದಲ್ಲಿ ಕಳೆದ ರಾತ್ರಿ ಭದ್ರತಾ ಪಡೆಗಳು ನಡೆಸಿದ ಎನ್​ಕೌಂಟರ್​ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್​ ಫ್ರಂಟ್​ನೊಂದಿಗೆ (ಟಿಆರ್​ಎಫ್​) ಸಂಬಂಧ ಹೊಂದಿದ್ದ ಓರ್ವ ಭಯೋತ್ಪಾದಕ ಸಾವನ್ನಪ್ಪಿದ್ದಾನೆ. ಕಾಶ್ಮೀರ ವಲಯ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹತ್ಯೆಯಾದ ಭಯೋತ್ಪಾದಕನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಇನ್ನಿತರ ಭಯೋತ್ಪಾದನೆ ನಡೆಸಲು ಸಂಚು ರೂಪಿಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂಬ ಮಾಹಿತಿಯನ್ನು ಅಧಿಕಾರಿ ನೀಡಿದ್ದಾರೆ.

ಬಿಎಸ್‌ಎಫ್‌ ಯೋಧ ಸಾವು: ಮತ್ತೊಂದೆಡೆ, ಸಾಂಬಾ ಜಿಲ್ಲೆಯ ರಾಮಗಢ ಮತ್ತು ಅರ್ನಿಯಾ ಸೆಕ್ಟರ್​ ಗಡಿಯಲ್ಲಿ ಬುಧವಾರ ರಾತ್ರಿ ಪಾಕಿಸ್ತಾನಿ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಕದನ ವಿರಾಮ ಉಲ್ಲಂಘಿಸಿದ್ದಾರೆ. ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನಿಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಇದಕ್ಕೂ ಮೊದಲು ಯೋಧನಿಗೆ ರಾಮಗಢದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಸೇನಾಸ್ಪತ್ರೆಗೆ ರವಾನಿಸಲಾಗಿತ್ತು.

ಇದನ್ನೂ ಓದಿ : ಮಾವೋವಾದಿಗಳ ಸಂಗ್ರಹಿಸಿಟ್ಟಿದ್ದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನ ಪತ್ತೆ ಹಚ್ಚಿದ ಬಿಎಸ್‌ಎಫ್ ಪಡೆ

"ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗಾಯಗೊಂಡಿದ್ದ ಬಿಎಸ್ಎಫ್ ಯೋಧನನ್ನು ಇಲ್ಲಿಗೆ ಕರೆತರಲಾಗಿತ್ತು. ಮಾಹಿತಿ ಬಂದ ತಕ್ಷಣ ವೈದ್ಯರ ತಂಡ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ನಂತರ ಅವರನ್ನು ಸೇನಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ರಾಮಗಢದ ಸಮುದಾಯ" ಆರೋಗ್ಯ ಕೇಂದ್ರದ ವೈದ್ಯರಾದ ಡಾ.ಶಂಶಾದ್ ತಿಳಿಸಿದರು.

"ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನಿ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಯೋಧರು ನೀಡಿದ್ದಾರೆ" ಎಂದು ಜಮ್ಮುವಿನಲ್ಲಿ ಸೇನಾ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಳಿದ್ದಾರೆ.

"ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಬಿಎಸ್‌ಎಫ್ ಯೋಧರು ಮತ್ತು ಪಾಕಿಸ್ತಾನಿ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪಾಕಿಸ್ತಾನ ಪಡೆಗಳು ದಾಳಿ ನಡೆಸಿದ್ದರಿಂದ ಸ್ಥಳೀಯರು ಭಯಭೀತರಾಗಿ ಮನೆಯಿಂದ ಹೊರಬರಲಿಲ್ಲ. ಈ ಪ್ರದೇಶದಲ್ಲಿ 4-5 ವರ್ಷಗಳ ನಂತರ ಗುಂಡಿನ ದಾಳಿ ನಡೆದಿದೆ" ಎಂದು ಸ್ಥಳೀಯರೊಬ್ಬರು ತಿಳಿಸಿದರು.

ಇದನ್ನೂ ಓದಿ: ಈಶಾನ್ಯ ಭಾರತದಲ್ಲಿ ಭಯೋತ್ಪಾದನೆ, ಎಡಪಂಥೀಯ ಉಗ್ರವಾದ, ಬಂಡಾಯ ಶೇ.65 ರಷ್ಟು ತಗ್ಗಿದೆ: ಅಮಿತ್​ ಶಾ

Last Updated : Nov 9, 2023, 1:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.