ETV Bharat / bharat

'ಹೆತ್ತ ತಾಯಿಯನ್ನೇ ಬೀದಿಪಾಲು ಮಾಡಿದ ಕ್ರೂರಿ' ನವಜೋತ್ ಸಿಂಗ್​ ಮೇಲೆ ಸಹೋದರಿ ಆರೋಪ

author img

By

Published : Jan 28, 2022, 9:44 PM IST

ತಂದೆಯ ಮರಣದ ನಂತರ ವೃದ್ಧ ತಾಯಿಯನ್ನೇ ಮನೆಯಿಂದ ಹೊರ ಹಾಕಿರುವ ಕ್ರೂರಿ ಎಂದು ನವಜೋತ್ ಸಿಂಗ್​ ಸಿಧು ವಿರುದ್ಧ ಆತನ ಸಹೋದರಿ ಗಂಭೀರ ಆರೋಪ ಮಾಡಿದ್ದಾರೆ. ಹಣಕ್ಕೋಸ್ಕರ ಅವರು ಈ ರೀತಿಯಾಗಿ ನಡೆದುಕೊಂಡಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ..

Sidhu sister suman toor allegation
Sidhu sister suman toor allegation

ಚಂಡೀಗಢ(ಪಂಜಾಬ್​): ಪಂಜಾಬ್​ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಮತ್ತೊಂದು ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಹರಸಾಹಸ ಪಡ್ತಿದೆ. ಇದರ ಮಧ್ಯೆ ಸುದ್ದಿಗೋಷ್ಠಿ ನಡೆಸಿರುವ ಪಂಜಾಬ್ ಕಾಂಗ್ರೆಸ್​ ಅಧ್ಯಕ್ಷ ನವಜೋತ್ ಸಿಂಗ್​ ಸಿಧು ಅವರ ಸಹೋದರಿ ಸುಮನ್​ ಗಂಭೀರ ಆರೋಪ ಮಾಡಿದ್ದಾರೆ.

ಸಹೋದರ ನವಜೋತ್ ಸಿಂಗ್ ಸಿಧು ವಿರುದ್ಧವೇ ಗಂಭೀರ ಆರೋಪ ಮಾಡಿರುವ ಸುಮನ್ ತೂರ್​, ನಮ್ಮ ತಂದೆ ಭಗವಂತ್ ಸಿಧು 1986ರಲ್ಲಿ ಮೃತಪಟ್ಟ ಬಳಿಕ ವೃದ್ಧ ತಾಯಿ ನಿರ್ಮಲ್ ಭಗವಂತ್​ ಮತ್ತು ಅಕ್ಕನನ್ನು ಮನೆಯಿಂದ ಹೊರ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಹಣದ ಆಸೆಗೋಸ್ಕರ ಈ ರೀತಿಯಾಗಿ ನಡೆದುಕೊಂಡಿದ್ದು, ಇದೇ ಕಾರಣದಿಂದಾಗಿ ರೈಲ್ವೆ ನಿಲ್ದಾಣದಲ್ಲಿ ನಿರ್ಗತಿಕಳಾಗಿ ತಾಯಿ ಸಾವನ್ನಪ್ಪುವಂತಾಯಿತು ಎಂದು ತಿಳಿಸಿದ್ದಾರೆ.

ನವಜೋತ್ ಸಿಂಗ್ ಸಿಧು ಮೇಲೆ ಗಂಭೀರ ಆರೋಪ ಮಾಡಿದ ಸಹೋದರಿ

ಇದನ್ನೂ ಓದಿರಿ: PUBG ಹುಚ್ಚು : ಕುಟುಂಬವನ್ನೇ ಗುಂಡಿಕ್ಕಿ ಕೊಂದ 14 ವರ್ಷದ ಬಾಲಕ!

ಚುನಾವಣೆ ಬೆನ್ನಲ್ಲೇ ಗಂಭೀರ ಆರೋಪ : ಯುನೈಟೆಡ್​ ಸ್ಟೇಟ್ಸ್​ನಲ್ಲಿ ವಾಸವಾಗಿರುವ ಸುಮನ್ ತೌರ್​, ಇದೀಗ ಚಂಡೀಗಢಗೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿದರು. ನನ್ನ ತಾಯಿ ನಾಲ್ಕು ತಿಂಗಳ ಕಾಲ ಆಸ್ಪತ್ರೆಯಲ್ಲಿದ್ದರು. ಅದಕ್ಕೆ ಸಂಬಂಧಿಸಿದ ಅನೇಕ ಸಾಕ್ಷ್ಯಾಧಾರಗಳು ನಮ್ಮ ಬಳಿ ಇವೆ ಎಂದು ತಿಳಿಸಿದ್ದಾರೆ.

ತನಗೆ ಎರಡು ವರ್ಷವಿದ್ದಾಗ ತನ್ನ ತಂದೆ-ತಾಯಿ ಬೇರ್ಪಟ್ಟಿದ್ದಾರೆಂದು ಕಾಂಗ್ರೆಸ್ ನಾಯಕ ಸಿಧು ಎಲ್ಲರ ಮುಂದೆ ಸುಳ್ಳು ಹೇಳಿದ್ದಾರೆಂದು ತಿಳಿಸಿದ್ದಾರೆ. ಆದರೆ, ತನ್ನ ತಾಯಿ ದೆಹಲಿ ರೈಲ್ವೆ ನಿಲ್ದಾಣದಲ್ಲಿ ಸಾವನ್ನಪ್ಪಿರುವ ಸುದ್ದಿಯನ್ನ ಎಲ್ಲರಿಂದಲೂ ಮುಚ್ಚಿಟ್ಟಿದ್ದಾರೆ.

  • #WATCH | Chandigarh: Punjab Congress chief Navjot Singh Sidhu's sister from the US, Suman Toor alleges that he abandoned their old-aged mother after the death of their father in 1986 & she later died as a destitute woman at Delhi railway station in 1989.

    (Source: Suman Toor) pic.twitter.com/SveEP9YrsD

    — ANI (@ANI) January 28, 2022 " class="align-text-top noRightClick twitterSection" data=" ">

ಈ ವಿಚಾರವಾಗಿ ಅವರು ತಾಯಿ ಹಾಗೂ ಸಹೋದರಿಯ ಬಳಿ ಕ್ಷಮೆ ಕೇಳಬೇಕು ಎಂದಿರುವ ನವಜೋತ್ ಸಿಂಗ್ ಸಿಧು ಸಹೋದರಿ, ನನ್ನನ್ನು ಅವರು ಬ್ಲಾಕ್ ಮಾಡಿದ್ದಾರೆ. ಇಲ್ಲಿಗೆ ಬಂದ ತಕ್ಷಣವೇ ಅವರನ್ನ ಸಂಪರ್ಕಿಸುವ ಪ್ರಯತ್ನ ಮಾಡಿದೆ. ಆದರೆ, ಸಿಧು ಮನೆ ಬಾಗಿಲು ತೆರೆಯಲಿಲ್ಲ. ಫೋನ್​ನಲ್ಲೂ ನನ್ನನ್ನ ಬ್ಲಾಕ್ ಮಾಡಿದ್ದಾರೆ. ಇದೇ ಕಾರಣಕ್ಕಾಗಿ ನಾನು ಸುದ್ದಿಗೋಷ್ಠಿ ನಡೆಸಬೇಕಾಯಿತು ಎಂದು ತಿಳಿಸಿದ್ದಾರೆ.

ಪಂಜಾಬ್​ ಚುನಾವಣೆ ಬೆನ್ನಲ್ಲೇ ನವಜೋತ್ ಸಿಂಗ್​ ಸಿಧು ಸಹೋದರಿ ಹೇಳಿಕೆ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದು, ರಾಜಕೀಯ ವಲಯದಲ್ಲಿ ಹೆಚ್ಚಿನ ಸಂಚಲನ ಮೂಡಿಸಿದೆ. ಇದೇ ವಿಚಾರವನ್ನಿಟ್ಟುಕೊಂಡು ಶಿರೋಮಣಿ ಅಕಾಲಿದಳ ಸಿಧು ವಿರುದ್ಧ ವಾಗ್ದಾಳಿ ನಡೆಸಿದೆ.

ಆದಷ್ಟು ಬೇಗ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್​​ ಅಮರೀಂದರ್ ಸಿಂಗ್ ಹೇಳಿಕೊಂಡಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.