ತಿರುವನಂತಪುರಂ (ಕೇರಳ) : ಕೇರಳ ಸರ್ಕಾರದ ಡ್ರಗ್ ವಿರೋಧಿ ಅಭಿಯಾನದ ಲಾಂಛನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಬಿಡುಗಡೆ ಮಾಡಿದ್ದಾರೆ. ತಿರುವನಂತಪುರಂನಲ್ಲಿ ನಡೆದ ಭಾರತ - ದಕ್ಷಿಣ ಆಫ್ರಿಕಾ ಟಿ-20 ಪಂದ್ಯ ವೀಕ್ಷಿಸಲು ಬಂದ ವೇಳೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಲಾಂಛನ ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿದ ಸಿಎಂ, ಸರ್ಕಾರವು ಅಕ್ಟೋಬರ್ 2 ರಂದು ರಾಜ್ಯದಲ್ಲಿ ಮಾದಕ ದ್ರವ್ಯ ವಿರೋಧಿ ಅಭಿಯಾನ ಪ್ರಾರಂಭಿಸುತ್ತಿದೆ. ಸರ್ಕಾರವು ಶಾಲಾ ಹಂತದಿಂದ ಜಾಗೃತಿ ಕಾರ್ಯಕ್ರಮ ನಡೆಸುತ್ತದೆ ಮತ್ತು ಮಾದಕ ವ್ಯಸನದ ಪ್ರಕರಣಗಳನ್ನು ಕಡಿಮೆ ಮಾಡಲು ಶೋಧ ಕಾರ್ಯಾಚರಣೆ ಹೆಚ್ಚಿಸುತ್ತದೆ ಎಂದರು.
ಗಂಗೂಲಿ ಅವರು ಈ ಪ್ರಯತ್ನಕ್ಕೆ ತಮ್ಮ ಹೃತ್ಪೂರ್ವಕ ಬೆಂಬಲವನ್ನು ವ್ಯಕ್ತಪಡಿಸಿದರು. ಮತ್ತು ಕಾರ್ಯಕ್ರಮಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಬಕಾರಿ ಆಯುಕ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಓದಿ: ಸತ್ಯಮೇವ ಜಯತೇ ಇದು ಕೇವಲ ಆತ್ಮಚರಿತ್ರೆಯಲ್ಲ ಪೊಲೀಸ್ ಇಲಾಖೆಗೆ ಮಾರ್ಗದರ್ಶಿ ಕೈಪಿಡಿ - ಶಂಕರ್ ಬಿದರಿ