ETV Bharat / bharat

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ

author img

By

Published : Aug 22, 2022, 7:35 AM IST

ಉದ್ರಿಕ್ತರ ಗುಂಪುವೊಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಅಷ್ಟೇ ಅಲ್ಲ ಕಲ್ಲು ತೂರಾಟ ನಡೆಸಿದ ಬಳಿಕ ದೊಣ್ಣೆಗಳಿಂದ ವಾಹನಗಳ ಮೇಲೆ ದಾಳಿ ಮಾಡಿರುವುದು ಬೆಳಕಿಗೆ ಬಂದಿದೆ.

ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ
Stones pelted on motorcade of cm Nitish Kumar

ಪಾಟ್ನಾ: ಕಿಡಿಗೇಡಿಗಳ ಗುಂಪೊಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್​ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡಿಸಿದೆ. ಪಾಟ್ನಾದ ಗೌರಿಚಕ್ ಪೊಲೀಸ್ ಠಾಣಾ ಸಮೀಪದ ಸಂಪತ್ಚಕ್ ಬ್ಲಾಕ್‌ನ ಸೊಹ್ಗಿ ಗ್ರಾಮದ ಬಳಿ ಈ ವಿಧ್ವಂಸಕ ಕೃತ್ಯ ನಡೆದಿದೆ.

ಎರಡು ಕಾರುಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ, ದೊಣ್ಣೆಗಳಿಂದ ಧ್ವಂಸಗೊಳಿಸಿದ್ದಾರೆ. ಕಾರಿನ ಗಾಜುಗಳು ಪುಡಿಪುಡಿಯಾಗಿದ್ದು, ಘಟನೆ ವೇಳೆ ಬೆಂಗಾವಲು ವಾಹನ ಪಡೆಯಲ್ಲಿ ನಿತೀಶ್ ಕುಮಾರ್ ಇರಲಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸಿಎಂ ನಿತೀಶ್ ಕುಮಾರ್ ಬಾಯ್​ಫ್ರೆಂಡ್ ಬದಲಿಸುವ ಮಹಿಳೆಯಂತೆ: ಬಿಜೆಪಿ ಮುಖಂಡನ ಹೇಳಿಕೆ

ಸಿಎಂ ನಿತೀಶ್ ಕುಮಾರ್ ಸೋಮವಾರ ಗಯಾಕ್ಕೆ ಭೇಟಿ ನೀಡಿ, ಮಹತ್ವಾಕಾಂಕ್ಷೆಯ ರಬ್ಬರ್ ಅಣೆಕಟ್ಟು ಯೋಜನೆ ಕುರಿತು ಪರಿಶೀಲನೆ ಮತ್ತು ಆ ಪ್ರದೇಶದ ಬರ ಪರಿಸ್ಥಿತಿ ಅವಲೋಕಿಸುವ ನಿರೀಕ್ಷೆಯಿತ್ತು. ಗಯಾಕ್ಕೆ ಭೇಟಿ ನೀಡುವ ಒಂದು ದಿನ ಮುಂಚಿತವಾಗಿಯೇ ಈ ಘಟನೆ ನಡೆದಿದೆ.

ಬಿಹಾರದಲ್ಲಿ ಹೊಸ ಸರ್ಕಾರ ರಚನೆಯಾಗಿ ಕೆಲ ದಿನಗಳು ಉರುಳಿದೆ. ಬಿಜೆಪಿ ಜೊತೆಗಿನ ಮೈತ್ರಿಯನ್ನ ಕಡಿದುಕೊಂಡು ಆರ್‌ಜೆಡಿ ಜೊತೆ ಮಹಾಘಟಬಂಧನ್ ನೂತನ ಸರ್ಕಾರ ರಚಿಸಿರುವ ಸಿಎಂ ನಿತೀಶ್ ಕುಮಾರ್‌ಗೆ ಇದೀಗ ದಾಳಿ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ: ಪ್ರಮಾಣವಚನ ಸ್ವೀಕರಿಸಿ ಸಿಎಂ ನಿತೀಶ್ ಕುಮಾರ್‌ ಕಾಲಿಗೆರಗಿದ ಲಾಲು ಪುತ್ರ ತೇಜಸ್ವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.