ETV Bharat / bharat

ಲಖಿಂಪುರ ಹಿಂಸಾಚಾರದ ಸಂಪೂರ್ಣ ವರದಿ ಸಲ್ಲಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

author img

By

Published : Oct 7, 2021, 1:12 PM IST

UP sets up judicial commission to probe Lakhimpur Kheri violence
ಲಖಿಂಪುರ ಹಿಂಸಾಚಾರ ಪ್ರಕರಣ: ಪೂರ್ಣ ವರದಿ ಸಲ್ಲಿಕೆಗೆ ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ಲಖಿಂಪುರದಲ್ಲಿ ಎಂಟು ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿವರವಾದ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.

ಲಖನೌ(ಉತ್ತರ ಪ್ರದೇಶ): ಲಖಿಂಪುರ ಹಿಂಸಾಚಾರ ಸಂಬಂಧ ಸುಪ್ರೀಂಕೋರ್ಟ್​ ವಿಚಾರಣೆ ಆರಂಭಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟವರ ಬಗ್ಗೆ ನಾಳೆಯೊಳಗೆ ವಿವರವಾದ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚನೆ ನೀಡಿದೆ.

ಮುಖ್ಯ ನಾಯಮೂರ್ತಿ ಎನ್.​ವಿ.ರಮಣ, ನ್ಯಾ.ಸೂರ್ಯಕಾಂತ್ ಮತ್ತು ನ್ಯಾ.ಹಿಮಾ ಕೊಹ್ಲಿ ನೇತೃತ್ವದ ಪೀಠ ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾದ ಪ್ರಕರಣದ ಸ್ವಯಂಪ್ರೇರಿತ ಅರ್ಜಿ ವಿಚಾರಣೆ ಆರಂಭಿಸಿದೆ.

ಈ ಪ್ರಕರಣದಲ್ಲಿ ಬಂಧಿತರಾದವರು, ಆರೋಪಿಗಳು ಮತ್ತು ಯಾವ ವ್ಯಕ್ತಿಗಳ ಮೇಲೆ ಎಫ್​ಐಆರ್ ದಾಖಲಾಗಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮಗೆ ನಾಳೆಯೊಳಗೆ ಒದಗಿಸಬೇಕು ಎಂದು ಯುಪಿ ಸರ್ಕಾರಕ್ಕೆ ತಾಕೀತು ಮಾಡಿತು.

ಈ ವೇಳೆ ಕೋರ್ಟ್​ಗೆ ಮಾಹಿತಿ ನೀಡಿದ ಉತ್ತರ ಪ್ರದೇಶ ಸರ್ಕಾರದ ಪರ ವಕೀಲರು, ಪ್ರಕರಣದ ತನಿಖೆಗೆ ಈಗಾಗಲೇ ವಿಶೇಷ ತನಿಖಾ ದಳ(ಎಸ್‌ಐಟಿ) ಮತ್ತು ಓರ್ವ ಸದಸ್ಯರಿರುವ ತನಿಖಾ ಆಯೋಗವನ್ನು ರಚನೆ ಮಾಡಲಾಗಿದೆ ಎಂದು ತಿಳಿಸಿತು.

ಈ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್​ನ ನಿವೃತ್ತ ನ್ಯಾ.ಪ್ರದೀಪ್ ಕುಮಾರ್ ಶ್ರೀವತ್ಸ ಅವರನ್ನು ನೇಮಕ ಮಾಡಲಾಗಿದೆ. ತನಿಖಾ ಆಯೋಗವು ಲಖಿಂಪುರದಲ್ಲಿಯೇ ಕಚೇರಿ ಹೊಂದಲಿದ್ದು, ಸುಮಾರು 2 ತಿಂಗಳೊಳಗೆ ವಿಸ್ತೃತ ತನಿಖಾ ವರದಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಸಲ್ಲಿಸಲಿದೆ ಎಂದು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಇದನ್ನೂ ಓದಿ: ಜಗತ್ತಿನ ಮೊಟ್ಟ ಮೊದಲ ಮಲೇರಿಯಾ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.