ETV Bharat / bharat

ತೈಲ ಬೆಲೆ ಇಳಿಕೆಗೆ ಒತ್ತಾಯಿಸಿ ಪ್ರತಿಭಟನೆ.. ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

author img

By

Published : Jun 1, 2022, 11:50 AM IST

ತೈಲ ಬೆಲೆ ಇಳಿಕೆ ಮಾಡುವಂತೆ ತಮಿಳುನಾಡು ಸರ್ಕಾರದ ವಿರುದ್ದ ಅಣ್ಣಾಮಲೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

Tamil Nadu BJP protest
Tamil Nadu BJP protest

ಚೆನ್ನೈ(ತಮಿಳುನಾಡು): ಪೆಟ್ರೋಲ್​, ಡೀಸೆಲ್​ ಮೇಲಿನ ತೆರಿಗೆ ದರ ಕಡಿತ ಮಾಡದ ತಮಿಳುನಾಡು ಸರ್ಕಾರದ ನೀತಿ ಖಂಡಿಸಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ನಿನ್ನೆ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ತೈಲದ ಮೇಲೆ ಕೇಂದ್ರ ಸರ್ಕಾರ ಕಳೆದ ಕೆಲ ದಿನಗಳ ಹಿಂದೆ ಸುಂಕ ಕಡಿತಗೊಳಿಸಿದೆ. ಇದರ ಬೆನ್ನಲ್ಲೇ ಕೆಲವೊಂದು ರಾಜ್ಯಗಳು ಸಹ ಪೆಟ್ರೋಲ್ ಬೆಲೆ ಕಡಿತಗೊಳಿಸಿವೆ. ಆದರೆ, ತಮಿಳುನಾಡಿನಲ್ಲಿ ಆಡಳಿತ ನಡೆಸುತ್ತಿರುವ ಡಿಎಂಕೆ ನೇತೃತ್ವದ ಸ್ಟಾಲಿನ್​ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ, ಎಗ್ಮೋರ್​​ ರಾಜರತ್ನಂ ಕ್ರೀಡಾಂಗಣದ ಬಳಿ ನಿನ್ನೆ ಧರಣಿ ಸತ್ಯಾಗ್ರಹ ನಡೆಸಲಾಗಿತ್ತು. ಪ್ರತಿಭಟನೆ ನಡೆಸಲು ಬಿಜೆಪಿಗೆ ಅನುಮತಿ ನೀಡಿರಲಿಲ್ಲ. ಇದರ ಹೊರತಾಗಿ ಕೂಡ ಅಣ್ಣಾಮಲೈ, ಎಚ್​ ರಾಜಾ ಸೇರಿದಂತೆ ಐದು ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಹೀಗಾಗಿ ಅವರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.

  • Tamil Nadu BJP workers along with state party president K Annamalai march towards the state's secretariat in Chennai condemning the state govt for not reducing the tax on petrol and diesel pic.twitter.com/4A3BhV79Sr

    — ANI (@ANI) May 31, 2022 " class="align-text-top noRightClick twitterSection" data=" ">

ಇದನ್ನೂ ಓದಿ: 'ಭಾರತಿ ಡ್ರೈವಿಂಗ್​ ಸ್ವರಾಜ್'.. ಮದುವೆ ಮಂಟಪಕ್ಕೆ ಟ್ರ್ಯಾಕ್ಟರ್​ನಲ್ಲಿ ಬಂದ ಯುವತಿ ನಡೆಗೆ ಆನಂದ್ ಮಹೀಂದ್ರಾ ಫಿದಾ!

ಪ್ರತಿಭಟನೆ ವೇಳೆ ಮಾತನಾಡಿದ್ದ ಅಣ್ಣಾಮಲೈ, ಪೆಟ್ರೋಲ್ ಬೆಲೆಯಲ್ಲಿ ರೂ. 5 ಮತ್ತು ಡೀಸೆಲ್ ಮೇಲಿನ ಬೆಲೆಯಲ್ಲಿ 4 ರೂ. ಕಡಿತ ಮಾಡುವುದಾಗಿ ಡಿಎಂಕೆ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಬೆಲೆಯನ್ನು ಕಡಿತ ಮಾಡಿದೆ. ತನ್ನ ಪ್ರಣಾಳಿಕೆಯಲ್ಲಿ ಏನು ಭರವಸೆ ನೀಡಿತ್ತೋ ಅದನ್ನು ಪೂರ್ಣಗೊಳಿಸಬೇಕೆಂಬುದು ನಮ್ಮ ಬೇಡಿಕೆಯಾಗಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ಮೇ 21 ರಂದು ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ರೂ. 8 ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ರೂ. 6 ನಷ್ಟು ಕಡಿತ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.