ಹೈದರಾಬಾದ್(ತೆಲಂಗಾಣ): ಸಂಕ್ರಾಂತಿ ಸಂದರ್ಭದಲ್ಲಿ ಗಾಳಿಪಟ ಹಾರಿಸುತ್ತಿದ್ದ ವೇಳೆ ಅದು ವಿದ್ಯುತ್ ಕಂಬದಲ್ಲಿ ಸಿಲುಕಿಕೊಂಡಿದ್ದು, ಅಲ್ಲಿಂದ ಹೊರಗೆ ತೆಗೆಯಲು ಹೋದಾಗ ಬಾಲಕನೋರ್ವನಿಗೆ ವಿದ್ಯುತ್ ಶಾಕ್ ಹೊಡೆದಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ.
12 ವರ್ಷದ ಬಾಲಕನೋರ್ವ ಗಾಳಿಪಟ ಹಾರಿಸುವಾಗ ಅದು ವಿದ್ಯುತ್ ಕಂಬದಲ್ಲಿ ಸಿಲುಕಿಕೊಂಡಿದೆ. ಅದನ್ನು ಹೊರ ತೆಗೆಯಬೇಕೆಂಬ ಉದ್ದೇಶದಿಂದ ದಿಢೀರ್ ಆಗಿ ವಿದ್ಯುತ್ ಕಂಬ ಏರಿದ್ದಾನೆ. ಈ ವೇಳೆ ಆತನಿಗೆ ವಿದ್ಯುತ್ ಸ್ಪರ್ಶಿಸಿದೆ.ಇದನ್ನ ನೋಡಿರುವ ಸ್ಥಳೀಯರು ತಕ್ಷಣವೇ ವಿದ್ಯುತ್ ಪ್ರಸರಣ ನಿಗಮಕ್ಕೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿರಿ: 'ಯೋಗಿ ಗೋರಖ್ಪುರ್ದಲ್ಲೇ ಇರಬೇಕು' ಅಲ್ಲೇ ಇರಿ ಎಂದು ಸಿಎಂ ಆದಿತ್ಯನಾಥ್ ಕಾಲೆಳೆದ ಅಖಿಲೇಶ್
ತಕ್ಷಣವೇ ಲೈನ್ಮನ್ಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಬಾಲಕನನ್ನು ಕೆಳಗಿಳಿಸಿದ್ದಾರೆ. ಪ್ರಜ್ಞೆ ತಪ್ಪಿದ ಮಗುವನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.