ETV Bharat / bharat

ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ

author img

By

Published : Apr 11, 2023, 1:26 PM IST

Updated : Apr 11, 2023, 5:01 PM IST

ಐಎಎಸ್​ ಅಧಿಕಾರಿಣಿ ವಿರುದ್ಧ ರೂಪ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್​ ರದ್ದುಪಡಿಸಿದೆ.

High Court stayed the court order  defamatory statements against Sindhuri  Sindhuri and roopa case  ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ  ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ನೀಡಿದ್ದ ಆದೇಶ  ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ  ನ್ಯಾಯಾಲಯ ನೀಡಿದ್ದ ಆದೇಶ  ಏಕಪಕ್ಷೀಯವಾಗಿ ವಿಚಾರಣಾ ನ್ಯಾಯಾಲಯ  ಪ್ರಶ್ನಿಸಿ ರೂಪ ಹೈಕೋರ್ಟ್ ಮೊರೆ
ಹೈಕೋರ್ಟ್ ತಡೆ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪ ಅವರು ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ನಿರ್ಬಂಧಕಾಜ್ಞೆ ವಿಸ್ತರಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ತಮ್ಮ ವಾದವನ್ನು ಆಲಿಸದೇ ನೀಡಿರುವ ಆದೇಶವನ್ನು ಪ್ರಶ್ನಿಸಿ ಐಪಿಎಸ್ ಅಧಿಕಾರಿ ಡಿ.ರೂಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿ ಆದೇಶಿಸಿದೆ. ಈ ಆದೇಶದಿಂದ ವಿಚಾರಣಾ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವಾದಂತಾಗಿದೆ.

ವಿಚಾರಣೆ ವೇಳೆ ಡಿ.ರೂಪಾ ಪರವಾಗಿ ವಾದ ಮಂಡಿಸಿದ ವಕೀಲ ಮಧುಕರ್ ದೇಶಪಾಂಡೆ, ವಿಚಾರಣಾ ನ್ಯಾಯಾಲಯ ತಡೆಯಾಜ್ಞೆ ನೀಡಿದ ಬಳಿಕ ಪ್ರತಿವಾದಿಯಾಗಿರುವ ನಮ್ಮ ಕಕ್ಷಿದಾರರಿಗೆ ಅರ್ಜಿದಾರರು ನ್ಯಾಯಾಲಯಕ್ಕೆ ಸಲ್ಲಿಸಿರುವ ಎಲ್ಲ ದಾಖಲೆಗಳ ಪ್ರತಿಯೊಂದಿಗೆ ತಲುಪಿಸಬೇಕಾಗಿತ್ತು. ಆದರೆ, ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿರುವುದಾಗಿ ಹೇಳಿ ನಿರ್ಬಂಧಕಾಜ್ಞೆ ವಿಸ್ತರಣೆ ಮಾಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ನ್ಯಾಯಾಲಯ ನಿರ್ಬಂಧಕಾಜ್ಞೆ ವಿಸ್ತರಣೆ ಮಾಡಿದೆ.

ಆದರೆ, ಪ್ರತಿವಾದಿಗಳಿಗೆ ನೋಟಿಸ್ ತಲುಪದಿದ್ದರೂ, ನಿರ್ಬಂಧಕಾಜ್ಞೆ ವಿಸ್ತರಣೆ ಮಾಡಿದಲ್ಲಿ ಅದು ತಾನಾಗಿಯೇ ರದ್ದಾಗಲಿದೆ. ಜತೆಗೆ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡುವುದಕ್ಕೆ ಅವಕಾಶವಿಲ್ಲ. ಹೀಗಾಗಿ ನಿರ್ಬಂಧಕಾಜ್ಞೆ ವಿಸ್ತರಣೆ ಮಾಡಿರುವ ಆದೇಶ ರದ್ದು ಮಾಡಬೇಕು ಎಂದು ಮನವಿ ಮಾಡಿದ್ದರು. ಇದನ್ನು ಆಲಿಸಿದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯ ನೀಡಿದ್ದ ಮಧ್ಯಂತರ ನಿರ್ಬಂಧಕಾಜ್ಞೆ ಆದೇಶವನ್ನು ರದ್ದು ಪಡಿಸಿ ಆದೇಶಿಸಿದೆ.

ಏನಿದು ಪ್ರಕರಣ?: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲಾತಾಣಗಳಲ್ಲಿ ಕೆಲ ಫೋಟೋಗಳನ್ನು ಡಿ.ರೂಪ ಹಂಚಿಕೊಂಡಿದ್ದರು. ಅಲ್ಲದೆ, ರೋಹಿಣಿ ಸಿಂಧೂರಿ ವಿರುದ್ಧ ಕೆಲ ಆರೋಪಗಳನ್ನು ಮಾಡಿದ್ದರು.ಈ ನಡುವೆ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳು, ಫೋಟೋಗಳನ್ನು ಪ್ರಕಟ ಮಾಡದಂತೆ ಅರ್ಜಿದಾರರಾದ ರೂಪ ಮತ್ತು ಇತರ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಸಿಂಧೂರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ 2023ರಂದು ಫೆಬ್ರವರಿ 23 ರಂದು ಏಕಪಕ್ಷೀಯವಾಗಿ (ಎಕ್ಸ್‌ಪಾರ್ಟಿ) ನಿರ್ಬಂಧಕಾಜ್ಞೆ ವಿಧಿಸಿತ್ತು. ಅಲ್ಲದೇ, ಪ್ರತಿವಾದಿಗೆ ನೋಟಿಸ್ ಜಾರಿ ಮಾಡಿತ್ತು.

ಇದರ ಮುಂದುವರಿದ ಭಾಗವಾಗಿ ನೋಟಿಸ್ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳನ್ನು ಅರ್ಜಿದಾರರಿಗೆ ತಲುಪಿಸಬೇಕಾಗಿತ್ತು. ಆದರೆ ದೂರುದಾರರಾದ ರೋಹಿಣಿ ಸಿಂಧೂರಿ ಅವರು, ಎಲ್ಲ ದಾಖಲೆಗಳನ್ನು ರಿಜಿಸ್ಟ್ರಾರ್ ಪೋಸ್ಟ್ ಮೂಲಕ ಕಳುಹಿಸಿದ್ದೇವೆ ಎಂಬುದಾಗಿ ತಿಳಿಸಿ ಮಧ್ಯಂತರ ಅರ್ಜಿ ಸಲ್ಲಿಸಿ ನಿರ್ಬಂಧಕಾಜ್ಞೆ ಆದೇಶ ವಿಸ್ತರಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ನಿರ್ಬಂಧಕಾಜ್ಞೆ ವಿಸ್ತರಿಸಿತ್ತು. ಇದನ್ನು ಪ್ರಶ್ನಿಸಿ ರೂಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್​ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ನಿರ್ಬಂಧಕಾಜ್ಞೆ ಆದೇಶಕ್ಕೆ ತಡೆ ವಿಧಿಸಿದೆ.

ಓದಿ: 30 ದಿನದಲ್ಲಿ ಇ ಖಾತಾ ಮಂಜೂರು ಆಗುವ ವ್ಯವಸ್ಥೆ ಮಾಡಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Last Updated : Apr 11, 2023, 5:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.