ETV Bharat / bharat

ಬಂಡಾಯ ಶಾಸಕರ ಅನರ್ಹತೆಯ ಪ್ರಕ್ರಿಯೆ ತ್ವರಿತಗೊಳಿಸಿ: ಮಹಾರಾಷ್ಟ್ರ ಸ್ಪೀಕರ್‌ಗೆ ಸುಪ್ರೀಂಕೋರ್ಟ್​ ನೋಟಿಸ್

author img

By

Published : Jul 14, 2023, 5:12 PM IST

Updated : Jul 14, 2023, 6:03 PM IST

ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಬಂಡಾಯ ಶಾಸಕರ ವಿರುದ್ಧದ ಅನರ್ಹತೆ ಅರ್ಜಿ ಬಗ್ಗೆ ತ್ವರಿತವಾಗಿ ತೀರ್ಮಾನ ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದೆ.

the-supreme-court-issues-notice-to-the-maharashtra-assembly-speaker-on-disqualification-of-mlas
ಬಂಡಾಯ ಶಾಸಕರ ಅನರ್ಹತೆಯ ಪ್ರಕ್ರಿಯೆಯನ್ನು ತ್ವರಿತಗೊಳಿಸಿ: ಮಹಾರಾಷ್ಟ್ರ ಸ್ಪೀಕರ್‌ಗೆ ಸುಪ್ರೀಂಕೋರ್ಟ್​ ನೋಟಿಸ್

ನವದೆಹಲಿ: ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳ ತ್ವರಿತ ನಿರ್ಧಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಶಿವಸೇನೆ (ಯುಬಿಟಿ) ಶಾಸಕ ಸುನೀಲ್ ಪ್ರಭು ಅವರು ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂಕೋರ್ಟ್ ಶುಕ್ರವಾರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್‌ಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠವು ಪ್ರಭು ಅವರ ಮನವಿ ಮೇರೆ ನೋಟಿಸ್ ಜಾರಿ ಮಾಡಿದೆ.

ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಮತ್ತು ಇತರ ಎಂಟು ಮಂದಿ ಸೇರ್ಪಡೆಗೊಂಡ ಕೆಲವು ದಿನಗಳ ನಂತರ ಪ್ರಭು ಅವರು ಸುಪ್ರೀಂಗೆ ಮನವಿ ಸಲ್ಲಿಸಿದರು. ಅಜಿತ್​ ಪವಾರ್ ಅವರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದಿಂದ (ಎನ್‌ಸಿಪಿ) ಬಂಡಾಯ ಎದ್ದು, ಆಡಳಿತಾರೂಢ ಬಿಜೆಪಿ-ಶಿಂಧೆ ಶಿವಸೇನಾ ಮೈತ್ರಿಕೂಟದೊಂದಿಗೆ ಕೈಜೋಡಿಸಿ ಉಪಮುಖ್ಯಮಂತ್ರಿಯಾಗಿದ್ದರು.

" ಮಹಾರಾಷ್ಟ್ರ ವಿಧಾನಸಭೆಯ ತಪ್ಪಿತಸ್ಥ ಸದಸ್ಯರ ವಿರುದ್ಧ ಅನರ್ಹತೆ ಅರ್ಜಿ ಸಂಬಂಧ ಕ್ರಮಕೈಗೊಳ್ಳಲು ಸ್ಪೀಕರ್ ವಿಫಲರಾಗಿದ್ದಾರೆ. ಪ್ರಸ್ತುತ ಸ್ಪೀಕರ್ ಕಾನೂನಿನ ಪ್ರಕಾರ ಹತ್ತನೇ ಅನುಸೂಚಿ ಅಡಿ ನ್ಯಾಯಯುತ ಮತ್ತು ನಿಷ್ಪಕ್ಷಪಾತ ಕರ್ತವ್ಯವನ್ನು ನಿರ್ವಹಿಸಲು ಅಸಮರ್ಥರಾಗಿದ್ದಾರೆ ಎಂದು ಸ್ಪಷ್ಟವಾಗಿ ತೋರಿಸಿದ್ದಾರೆ" ಎಂದು ಪ್ರಭು ತಮ್ಮ ಮನವಿಯಲ್ಲಿ ತಿಳಿಸಿದ್ದರು. ಪ್ರಸ್ತುತ ಪ್ರಕರಣದಲ್ಲಿ ಸ್ಪೀಕರ್ ಸಂವಿಧಾನದ ಅನುಗುಣವಾಗಿ ನ್ಯಾಯಸಮ್ಮತ ಮತ್ತು ಪಕ್ಷಪಾತವಿಲ್ಲದ ರೀತಿಯಲ್ಲಿ ಕಾರ್ಯನಿರ್ವಹಿಸಲು ವಿಫಲವಾದಾಗ, ಹತ್ತನೆಯ ನಿಬಂಧನೆಗಳನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂಕೋರ್ಟ್ ಸೂಕ್ತ ನಿರ್ದೇಶನಗಳನ್ನು ನೀಡುವುದು ಸಾಂವಿಧಾನಿಕವಾಗಿ ಕಡ್ಡಾಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪ ಎದುರಿಸುತ್ತಿರುವ ಏಕನಾಥ್ ಶಿಂಧೆ ಸೇರಿದಂತೆ 16 ಶಿವಸೇನೆ ಶಾಸಕರ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಮೇ.11 ರಂದು ಸ್ಪೀಕರ್ ರಾಹುಲ್ ನರ್ವೇಕರ್​ಗೆ ಸೂಚನೆ ನೀಡಿತ್ತು. ನಂತರದ ಮೂರು ಮನವಿಗಳನ್ನು ಸ್ಪೀಕರ್​ಗೆ ಸಲ್ಲಿಸಲಾಗಿದೆ ಎಂದು ಪ್ರಭು ತಮ್ಮ ಅರ್ಜಿಯಲ್ಲಿ ಪ್ರತಿಪಾದಿಸಿದ್ದಾರೆ. ಸಾಂವಿಧಾನ ಸ್ಪೀಕರ್‌ಗೆ ಶಾಸನಸಭೆಯ ಸದಸ್ಯರ ಅನರ್ಹತೆಯ ಕುರಿತು ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿಯನ್ನು ನೀಡಿದೆ. ಅನರ್ಹತೆಯ ಅರ್ಜಿ ಸಂಬಂಧ ಸ್ಪೀಕರ್ ಕಡೆಯಿಂದ ವಿಳಂಬವು ತಪ್ಪಿತಸ್ಥ ಸದಸ್ಯರು ಮಾಡಿದ ಪಕ್ಷಾಂತರಕ್ಕೆ ಕೊಡುಗೆ ನೀಡುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ಹಿಂಸಾಚಾರ: ರಾಜ್ಯಪಾಲರ ಭೇಟಿಯಾದ ಬಿಜೆಪಿ ಸತ್ಯಶೋಧನಾ ತಂಡ

ಎನ್‌ಸಿಪಿ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಮಹಾರಾಷ್ಟ್ರ ಸಿಎಂ: ಮಹಾರಾಷ್ಟ್ರದ ಸರ್ಕಾರದಲ್ಲಿ ಏಕನಾಥ್​ ಶಿಂಧೆ ನೇತೃತ್ವದ ಸರ್ಕಾರಕ್ಕೆ ಎನ್​ಸಿಪಿ ನಾಯಕರು ಸೇರಿದ ಸುಮಾರು ಎರಡು ವಾರಗಳ ನಂತರ ಇಂದು ಡಿಸಿಎಂ ಅಜಿತ್ ಪವಾರ್ ಸೇರಿ ಎಲ್ಲ ಒಂಬತ್ತು ಜನರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು ಮತ್ತು ಯೋಜನಾ ಖಾತೆಯನ್ನು ನೀಡಲಾಗಿದೆ. ಇದೇ ಮೊದಲ ಬಾರಿಗೆ ಸಚಿವ ಸಂಪುಟದಲ್ಲಿ ಒಬ್ಬ ಶಾಸಕಿಗೆ ಕ್ಯಾಬಿನೆಟ್ ಸ್ಥಾನ ನೀಡಲಾಗಿದೆ.

Last Updated : Jul 14, 2023, 6:03 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.