ETV Bharat / bharat

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಓರ್ವ ಸೇನಾಧಿಕಾರಿ ಸೇರಿ ಇಬ್ಬರು ಹುತಾತ್ಮ

author img

By

Published : Oct 15, 2021, 11:42 AM IST

ಮೆಂಧರ್ ಉಪ ವಿಭಾಗದ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದ್ದು, ಈ ವೇಳೆ ಓರ್ವ ಸೇನಾಧಿಕಾರಿ ಸೇರಿ ಇಬ್ಬರು ಹುತಾತ್ಮರಾಗಿದ್ದಾರೆ.

soldier
soldier

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯ ಮೆಂಧರ್ ಉಪ ವಿಭಾಗದಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಕಿರಿಯ ನಿಯೋಜಿತ ಅಧಿಕಾರಿ (JCO) ಮತ್ತು ಓರ್ವ ಸೈನಿಕ ಹುತಾತ್ಮರಾಗಿದ್ದಾರೆ.

ಮೆಂಧರ್ ಉಪ ವಿಭಾಗದ ಅರಣ್ಯ ಪ್ರದೇಶದಲ್ಲಿ ಭಾರತೀಯ ಸೇನಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಈ ವೇಳೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಪೊಲೀಸರು ನೀಡಿರುವ ಪ್ರಕಾರ, ಭೀಂಬರ್ ಗಾಲಿ ಮತ್ತು ಸುರಂಕೋಟೆ ನಡುವಿನ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.