ETV Bharat / bharat

ಬಾಗಿಲು ತೆರೆದ ಸುಪ್ರಸಿದ್ಧ ಕೇದಾರನಾಥ; ಭಕ್ತಾದಿಗಳ ದರ್ಶನಕ್ಕೆ ಮುಕ್ತ

author img

By

Published : May 6, 2022, 7:26 AM IST

Updated : May 6, 2022, 2:24 PM IST

ಹಿಂದೂ ಧರ್ಮೀಯರ ಪವಿತ್ರ ಯಾತ್ರಾಸ್ಥಳ ಉತ್ತರಾಖಂಡದ ಕೇದಾರನಾಥ ದೇವಾಲಯದ ಬಾಗಿಲನ್ನು ಸಂಪ್ರದಾಯಬದ್ಧವಾಗಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಇಂದು ಬೆಳಗ್ಗೆ ತೆರೆಯಲಾಯಿತು.

ಬಾಗಿಲು ತೆರೆದ ಸುಪ್ರಸಿದ್ಧ ಕೇದಾರನಾಥ
ಬಾಗಿಲು ತೆರೆದ ಸುಪ್ರಸಿದ್ಧ ಕೇದಾರನಾಥ

ಚಮೋಲಿ ​(ಉತ್ತರಾಖಂಡ): ಸುಪ್ರಸಿದ್ಧ ಕೇದಾರನಾಥ ಧಾಮ ಇಂದಿನಿಂದ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಬೆಳಗ್ಗೆ ದೇಗುಲದ ಬಾಗಿಲು ತೆರೆಯುವುದಕ್ಕೂ ಮುಂಚಿತವಾಗಿ ಧಾರ್ಮಿಕ ವಿಧಿ ಮತ್ತು ವೈದಿಕ ಮಂತ್ರಗಳ ಪಠಣ ನಡೆಯಿತು. ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಉಪಸ್ಥಿತರಿದ್ದರು.

ಪುರಾಣಪ್ರಸಿದ್ಧ ದೇವಸ್ಥಾನವನ್ನು 15 ಕ್ವಿಂಟಲ್​ ಹೂವುಗಳಿಂದ ಆಕರ್ಷಕವಾಗಿ ಅಲಂಕರಿಸಲಾಗಿದೆ. 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಕೇದಾರನಾಥನ ದರ್ಶನ ಭಾಗ್ಯಕ್ಕೆ ಹಾತೊರೆಯುತ್ತಿದ್ದಾರೆ.ದೇವಾಲಯ ಓಪನ್​ ಆಗ್ತಿದ್ದಂತೆ ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಪೂಜೆ ಸಹ ಸಲ್ಲಿಸಲಾಗಿದೆ.


ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಮತ್ತು ಬದರಿನಾಥ ದರ್ಶನಕ್ಕೆ ನಿಗದಿತ ಕಾಲಮಿತಿಯಲ್ಲಿ ಯಾತ್ರಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಚಾರ್​ ಧಾಮ್​ಗೆ ತೆರಳುವ ಯಾತ್ರಿಗಳು ಆನ್​ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ದೇಗುಲದ ವೆಬ್​ಸೈಟ್​ಗೆ ಭೇಟಿ ನೀಡಬೇಕಾಗುತ್ತದೆ.

ಇದನ್ನೂ ಓದಿ: ಶುಕ್ರವಾರದ ಭವಿಷ್ಯ: ಇಂದು ಈ ರಾಶಿಯವರಿಗೆ ಶುಭ ಫಲ

ಬದರಿನಾಥಕ್ಕೆ 15,000, ಕೇದಾರನಾಥಕ್ಕೆ 12,000, ಗಂಗೋತ್ರಿಗೆ 7,000 ಮತ್ತು ಯಮುನೋತ್ರಿಗೆ 4,000 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಈ ಸ್ಥಳಗಳಿಗೆ ಭೇಟಿ ನೀಡಲು ಕೋವಿಡ್ ಪರೀಕ್ಷೆ ಕಡ್ಡಾಯ. ಲಸಿಕೆ ಪಡೆದುಕೊಂಡಿರುವ ಪ್ರಮಾಣ ಪತ್ರ ಒದಗಿಸುವುದು ಕೂಡಾ ಅವಶ್ಯಕವಾಗಿದೆ.

Last Updated :May 6, 2022, 2:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.