ETV Bharat / bharat

ಯುವಕರು ದುಃಖದಲ್ಲಿದ್ದಾರೆ, ನನ್ನ ಬರ್ತ್​ಡೇ ಆಚರಿಸಬೇಡಿ: ರಾಹುಲ್ ಗಾಂಧಿ

author img

By

Published : Jun 19, 2022, 8:25 AM IST

Updated : Jun 19, 2022, 9:21 AM IST

'ಅಗ್ನಿಪಥ' ಯೋಜನೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ನಿಲ್ಲಬೇಕೆಂದು ರಾಹುಲ್ ಮನವಿ ಮಾಡಿದ್ದಾರೆ.

ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಇಂದು 53ನೇ ವರ್ಷಕ್ಕೆ ಕಾಲಿಟ್ಟಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ತಮ್ಮ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ. 'ಅಗ್ನಿಪಥ' ಯೋಜನೆ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ನಿಲ್ಲಬೇಕು ಎಂದು ಸೂಚಿಸಿದ್ದಾರೆ.

"ದೇಶದಲ್ಲಿ ಸದ್ಯದ ಪರಿಸ್ಥಿತಿ ಚಿಂತಾಜನಕವಾಗಿವೆ. ಕೋಟ್ಯಂತರ ಯುವಕರು ವೇದನೆಯಲ್ಲಿದ್ದಾರೆ. ನಾವು ನೊಂದ ಯುವಕರ ಮತ್ತು ಅವರ ಕುಟುಂಬಸ್ಥರ ನೋವು ಹಂಚಿಕೊಂಡು ಅವರೊಂದಿಗೆ ನಿಲ್ಲಬೇಕು" ಎಂದು ಹೇಳಿದ್ದಾರೆ.

ಇದನ್ನೂ ಓದಿ: 'ವೈದ್ಯೆಯಾದ ನನಗೆ ಜೀವದ ಬೆಲೆ ಗೊತ್ತು': ವಿವಾದದ ಬೆನ್ನಲ್ಲೇ ನಟಿ ಸಾಯಿ ಪಲ್ಲವಿ ಸ್ಪಷ್ಟನೆ

Last Updated : Jun 19, 2022, 9:21 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.