ಮಿಲಿಟರಿ ಸೇರಬೇಕೆಂದಿದ್ದ ಯುವಕ ಮೊಬೈಲ್‌ಗಾಗಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

author img

By

Published : Jan 13, 2022, 4:31 PM IST

youth shot himself in dholpur rajasthan

18 ವರ್ಷದ ಯುವಕನೋರ್ವ ಕಂಟ್ರಿ ಮೇಡ್‌ ಪಿಸ್ತೂಲ್​​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಧೋಲ್ಪುರ್​(ರಾಜಸ್ಥಾನ): ಮೊಬೈಲ್ ಖರೀದಿಸಲು ಕುಟುಂಬಸ್ಥರು 20 ಸಾವಿರ ರೂಪಾಯಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜಸ್ಥಾನದ ಧೋಲ್ಪುರ್​​ ಎಂಬಲ್ಲಿ ಈ ಘಟನೆ ನಡೆದಿದೆ.

ಸರ್ಮಥುರಾ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೌಲಿ ಗ್ರಾಮದಲ್ಲಿ 18 ವರ್ಷದ ಯುವಕ ಕಂಟ್ರಿ ಮೇಡ್‌ ಪಿಸ್ತೂಲ್​​ನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾನೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಯುವಕ ಸಂಗ್ರಾಮ್​ ಭಾರತೀಯ ಸೇನೆ ಸೇರಿಕೊಳ್ಳಲು ತಯಾರಿ ನಡೆಸುತ್ತಿದ್ದನಂತೆ. ಕೆಲವು ತಿಂಗಳ ಕಾಲ ಜೈಪುರದಲ್ಲಿ ತರಬೇತಿ ಪಡೆದುಕೊಂಡು ಮನೆಗೆ ಹಿಂತಿರುಗಿದ್ದ.

ಇದನ್ನೂ ಓದಿ: ಅಯೋಧ್ಯೆಯಿಂದ ಕಣಕ್ಕಿಳಿಯಲಿದ್ದಾರೆ ಯೋಗಿ​: ಬಿಜೆಪಿಯಿಂದ 172 ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಪ್ರಕಟ?

ಈ ಸಂದರ್ಭದಲ್ಲಿ ಮೊಬೈಲ್ ಖರೀದಿಸಲು 20 ಸಾವಿರ ರೂ. ನೀಡುವಂತೆ ಮನೆಯಲ್ಲಿ ಕೇಳಿಕೊಂಡಿದ್ದಾನೆ. ಆದರೆ, ಈ ವೇಳೆ ಕುಟುಂಬಸ್ಥರು ನಿರಾಕರಿಸಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದು ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಮಥುರಾ ಪೊಲೀಸ್ ಠಾಣೆಯ ಪ್ರಭಾರಿ ಅನಿಲ್ ಗೌತಮ್ ಮಾತನಾಡಿ, ಎಫ್​ಐಆರ್​ ದಾಖಲು ಮಾಡಿಕೊಳ್ಳಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.