ETV Bharat / city

ರಾಮದುರ್ಗದ ವೆಂಕಟೇಶ್ವರ ಜಾತ್ರೆ: ಹಿಂದೂಯೇತರ ಅಂಗಡಿಗಳಿಗೆ ಅವಕಾಶ ನೀಡದಂತೆ ಮನವಿ

author img

By

Published : Apr 6, 2022, 9:54 AM IST

Bajrang Dal activists appeal
ರಾಮದುರ್ಗದ ತಹಶೀಲ್ದಾರ್​ಗೆ ಮನವಿ ಸಲ್ಲಿಸಿದ ವಿಶ್ವ ಹಿಂದೂ ಪರಿಷತ್​​ ಹಾಗೂ ಭಜರಂಗದಳದ ಕಾರ್ಯಕರ್ತರು

ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದ ಪ್ರಕಾರ ದತ್ತಿ ಇಲಾಖೆಗೆ ಒಳಪಡುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಮಹೋತ್ಸವದಲ್ಲಿ ಹಿಂದೂಯೇತರ ಅಂಗಡಿಗಳಿಗೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್​​ ಹಾಗೂ ಭಜರಂಗದಳದ ಕಾರ್ಯಕರ್ತರು ರಾಮದುರ್ಗದ ತಹಶೀಲ್ದಾರ್​ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಬೆಳಗಾವಿ: ಜಿಲ್ಲೆಯ ರಾಮದುರ್ಗದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ‌ಹಿಂದೂಯೇತರ ಅಂಗಡಿಗಳಿಗೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್​​ ಹಾಗೂ ಭಜರಂಗದಳದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್​​ ತಾಲೂಕು ಸಂಚಾಲಕ ರವಿ ಹೊಸೂರು

ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದ ಪ್ರಕಾರ ದತ್ತಿ ಇಲಾಖೆಗೆ ಒಳಪಡುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಮಹೋತ್ಸವದಲ್ಲಿ ಹಿಂದೂಯೇತರ ಅಂಗಡಿಗಳಿಗೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್​​ ಹಾಗೂ ಭಜರಂಗದಳದ ಕಾರ್ಯಕರ್ತರು ರಾಮದುರ್ಗದ ತಹಶೀಲ್ದಾರ್​ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಏ.11 ರಿಂದ 15ರವರೆಗೆ ಐತಿಹಾಸ ಪ್ರಸಿದ್ಧ ಶ್ರೀ ವೆಂಕಟೇಶ್ವರ ಜಾತ್ರಾಮಹೋತ್ಸವ ಜರುಗಲಿದೆ. ಜಾತ್ರೆಯಲ್ಲಿ ಹಿಂದೂಯೇತರಿಗೆ ಅಂಗಡಿಗಳನ್ನು ತೆರೆಯಲು ಅವಕಾಶ ಕೊಡಬಾರದು. ದೇವಸ್ಥಾನಗಳ ಆವರಣದಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ವ್ಯಾಪಾರ - ವಹಿವಾಟುಗಳನ್ನು ನಡೆಸಲು ಅವಕಾಶ ನೀಡಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂಯೇತರರಿಗೆ ದೇವಾಲಯಗಳ ಜಾತ್ರೋತ್ಸವಗಳಲ್ಲಿ ವ್ಯಾಪಾರ ನಿರಾಕರಿಸಿ ಬ್ಯಾನರ್ ಅಳವಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.