'ಈಟಿವಿ ಭಾರತ' ವರದಿ ಫಲಶೃತಿ.. ಕೋಮಾದಲ್ಲಿದ್ದ ಬಾಲಕನ ನೆರವಿಗೆ ಬಂದ್ರು ಬೆಳಗಾವಿ ಫೇಸ್​ಬುಕ್​ ಫ್ರೆಂಡ್ಸ್​

author img

By

Published : Jun 22, 2022, 2:32 PM IST

boy suffering from a brain fever Shifted to a private hospital

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಶೈಲೇಶ್ ಕೃಷ್ಣಾ ಸೂತ್ರವಿ ಎಂಬ 8 ವರ್ಷದ‌ ಬಾಲಕ ಮೆದುಳು ಜ್ವರ ಬಂದು ಕೋಮಾದಲ್ಲಿದ್ದಾನೆ. ಬೆಳಗಾವಿ ಫೇಸ್‌ಬುಕ್ ಫ್ರೆಂಡ್ಸ್ ಸರ್ಕಲ್ ತಂಡದವರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸಾ ವೆಚ್ಚವನ್ನು ಭರಿಸಲು ನಿರ್ಧರಿಸಿದ್ದು, ನಗರದ ಯಶ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಳಗಾವಿ: ಮೆದುಳು ಜ್ವರದಿಂದ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ 8 ವರ್ಷದ ಬಾಲಕನ್ನು ಬೆಳಗಾವಿಯ ಯಶ್ ಆಸ್ಪತ್ರೆಗೆ ಕರೆತರಲಾಗಿದೆ. 'ಈಟಿವಿ ಭಾರತ'ದಲ್ಲಿ 'ಬೆಳಗಾವಿ: ಕೋಮಾದಲ್ಲಿರುವ ಮಗನ ಪ್ರಾಣ ಉಳಿಸಲು ದೇವರ ಮೊರೆ ಹೋದ ತಾಯಿ' ಎಂಬ ಶೀರ್ಷಿಕೆಯಡಿ ಮಂಗಳವಾರ ಸುದ್ದಿ ಪ್ರಕಟಿಸಲಾಗಿತ್ತು. ಈ ಸುದ್ದಿಗೆ ಸ್ಪಂದಿಸಿದ ಬೆಳಗಾವಿ ಫೇಸ್‌ಬುಕ್ ಫ್ರೆಂಡ್ಸ್ ಸರ್ಕಲ್ ತಂಡದವರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸಾ ವೆಚ್ಚವನ್ನು ಭರಿಸಲು ನಿರ್ಧರಿಸಿದ್ದು, ನಗರದ ಯಶ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೆದುಳು ಜ್ವರದಿಂದ ಬಳಲುತ್ತಿದ್ದ ಬಾಲಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಶೈಲೇಶ್ ಕೃಷ್ಣಾ ಸೂತ್ರವಿ ಎಂಬ 8 ವರ್ಷದ‌ ಬಾಲಕ ಮೆದುಳು ಜ್ವರ ಬಂದು ಕೋಮಾದಲ್ಲಿದ್ದಾನೆ. ಮಗನ ಪ್ರಾಣ ಉಳಿಸುವಂತೆ ಬಾಲಕನ ತಾಯಿ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿರುವ ಪ್ರಸಿದ್ಧ ಕ್ರೈಸ್ತ ಪ್ರಾರ್ಥನಾ ಮಂದಿರಕ್ಕೆ ಕರೆದೊಯ್ದು ಪ್ರಾರ್ಥಿಸಿದ್ದಾರೆ. ಇದೀಗ ಕೋಮಾದಲ್ಲಿದ್ದ ಬಾಲಕನನ್ನು ಖಾನಾಪೂರ ತಾಲೂಕಿನ ನಂದಗಡ ಗ್ರಾಮದಿಂದ ಬೆಳಗಾವಿಯ ಯಶ್ ಆಸ್ಪತ್ರೆಗೆ ಆ್ಯಂಬುಲೆನ್ಸ್​​ ಮೂಲಕ ಕರೆದುಕೊಂಡು ಬರಲಾಗಿದೆ. ಯಶ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಎಸ್.ಕೆ. ಪಾಟೀಲ ಅವರಿಂದ ಚಿಕಿತ್ಸೆ ಪ್ರಾರಂಭಿಸಲಾಗಿದೆ.‌

ಸದ್ಯ ಬಾಲಕನನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಆಸ್ಪತ್ರೆಗೆ ಬೆಳಗಾವಿ ಡಿಹೆಚ್ಓ ಅವರು ಭೇಟಿ ನೀಡಿ ಬಾಲಕನ ಆರೋಗ್ಯ ವಿಚಾರಿಸಿದ್ದು, ಚಿಕಿತ್ಸೆಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅಭಯ ನೀಡಿದ್ದಾರೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಕೂಡ ಬಾಲಕನ ಆರೋಗ್ಯ ತಪಾಸಣೆಗೆ ಬೇಕಾದ ಅಗತ್ಯ ಖರ್ಚು ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಕೋಮಾದಲ್ಲಿರುವ ಮಗನ ಪ್ರಾಣ ಉಳಿಸಲು ದೇವರ ಮೊರೆ ಹೋದ ತಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.