ETV Bharat / city

ಇಂದು ಬೆಳಗಾವಿಗೆ ಸಿಎಂ ಬೊಮ್ಮಾಯಿ; ಸಚಿವಾಕಾಂಕ್ಷಿಗಳಿಂದ ಲಾಬಿ ಸಾಧ್ಯತೆ

author img

By

Published : Apr 28, 2022, 10:59 AM IST

CM basavaraja bommai belagavi visit
ಇಂದು ಬೆಳಗಾವಿಗೆ ಸಿಎಂ ಬೊಮ್ಮಾಯಿ; ಸಚಿವಾಕಾಂಕ್ಷಿಗಳಿಂದ ಲಾಬಿ ಸಾಧ್ಯತೆ

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಯ ಶಾಸ್ತ್ರಿ ನಗರದ ಸಂಘ ಸದನದಲ್ಲಿ ಜನ ಕಲ್ಯಾಣ ಟ್ರಸ್ಟ್ ಆಯೋಜಿಸಿರುವ ಜಗನ್ನಾಥರಾವ್ ಜೋಶಿ ಜನ್ಮಶತಾಬ್ದಿ ಸ್ಮಾರಕ ಭವನದ ಭೂಮಿಪೂಜೆಯಲ್ಲಿ ಭಾಗವಹಿಸಲಿದ್ದಾರೆ.

ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯ ನಡುವೆಯೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಳಗಾವಿಗೆ ಆಗಮಿಸಲಿದ್ದಾರೆ. ಇಂದು ಮಧ್ಯಾಹ್ನ 2.30ಕ್ಕೆ ಶಿಗ್ಗಾವಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ಆಗಮಿಸಲಿರುವ ಬೊಮ್ಮಾಯಿ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಕೆಲಹೊತ್ತು ವಿಶ್ರಾಂತಿ ಪಡೆಯಲಿದ್ದಾರೆ.

ಬಳಿಕ ಮಧ್ಯಾಹ್ನ 3.30ಕ್ಕೆ ಬೆಳಗಾವಿಯ ಶಾಸ್ತ್ರಿ ನಗರದ ಸಂಘ ಸದನದಲ್ಲಿ ಜನ ಕಲ್ಯಾಣ ಟ್ರಸ್ಟ್ ಆಯೋಜಿಸಿರುವ ಜಗನ್ನಾಥರಾವ್ ಜೋಶಿ ಜನ್ಮಶತಾಬ್ದಿ ಸ್ಮಾರಕ ಭವನದ ಭೂಮಿ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 5.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಸಚಿವಾಕಾಂಕ್ಷಿಗಳಿಂದ ಲಾಬಿ: ಈ ಮಾಸಾಂತ್ಯ ಇಲ್ಲವೇ ಮೇ ತಿಂಗಳ ಮೊದಲ ವಾರದಲ್ಲಿ ಸಂಪುಟ ಪುನರ್ ರಚನೆ ಆಗುವ ಸಾಧ್ಯತೆ ಇದೆ. ಹೀಗಾಗಿ ಸಚಿವಾಕಾಂಕ್ಷಿಗಳಾದ ರಮೇಶ್ ಜಾರಕಿಹೊಳಿ,‌ ಅಭಯ ಪಾಟೀಲ, ಪಿ.ರಾಜೀವ್, ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ ಸಚಿವ ಸ್ಥಾನಕ್ಕೆ ಲಾಬಿ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಇದೀಗ ಮುಖ್ಯಮಂತ್ರಿಗಳೇ ಬೆಳಗಾವಿಗೆ ಆಗಮಿಸುತ್ತಿದ್ದು, ಸಿಎಂ ಮನವೊಲಿಕೆಗೆ ಯತ್ನಿಸುತ್ತಿದ್ದಾರೆ. ಮತ್ತೊಂದೆಡೆ ಸಚಿವ ಸ್ಥಾನ ಉಳಿಸಿಕೊಳ್ಳಲು ಉಮೇಶ ಕತ್ತಿ ಹಾಗೂ ಶಶಿಕಲಾ ಜೊಲ್ಲೆ ಕೂಡ ಸಿಎಂ ಸೇರಿದಂತೆ ರಾಜ್ಯ, ರಾಷ್ಟ್ರಮಟ್ಟದ ನಾಯಕರ ಸಂಪರ್ಕ ಸಾಧಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಓದಿ : ದೆಹಲಿಗೆ ಹೋಗ್ತೀನಿ ಆದ್ರೆ ಹೈಕಮಾಂಡ್ ಭೇಟಿಗೆ ಸಮಯಾವಕಾಶ ಕೋರಿಲ್ಲ: ಸಿಎಂ ಸ್ಪಷ್ಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.