ಬೆಳಗಾವಿ : ಜಿಲ್ಲೆಯಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ಮತ್ತೆ ಇಬ್ಬರು ಸಹೋದರರು ಬಲಿಯಾಗಿದ್ದಾರೆ. ತಗಡಿನ ಶೆಡ್ ಕುಸಿದ ಪರಿಣಾಮ ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಹೋದರರು ಸಾವನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ದೇಸೂರ ಗ್ರಾಮದಲ್ಲಿ ನಡೆದಿದೆ.
![belgavi](https://etvbharatimages.akamaized.net/etvbharat/prod-images/13318801_thumbsssjpg.jpg)
ಬಸವರಾಜ್ ವಡ್ಡರ್ ಹಾಗೂ ವೆಂಕಟೇಶ ವಡ್ಡರ್ ಮೃತ ಸಹೋದರರು. ಇಂದು ಸಂಜೆ ಸತತವಾಗಿ ಸುರಿದ ಮಳೆಯಿಂದ ಗಾಳಿಗೆ ತಗಡಿನ ಶೆಡ್ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ತಗಡಿನ ಶೆಡ್ಗೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.
![belgavi](https://etvbharatimages.akamaized.net/etvbharat/prod-images/13318801_thumbjpg.jpg)
ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವಾರವಷ್ಟೇ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಒಂದೇ ಕುಟುಂಬದ ಆರು ಜನ ಮತ್ತು ಪಕ್ಕದ ಮನೆಯ ಓರ್ವ ಬಾಲಕಿ ಸಾವನ್ನಪ್ಪಿದ್ದರು.
ಇದನ್ನೂ ಓದಿ: ಗೋಡೆ ಕುಸಿತ ಪ್ರಕರಣ: ಬಡಾಲ ಅಂಕಲಗಿ ಗ್ರಾಮದಲ್ಲಿ ಸ್ಮಶಾನ ಮೌನ