ಮಕ್ಕಳೊಂದಿಗೆ ಶಿಕ್ಷಕಿ ಜಾತಿ ತಾರತಮ್ಯ ಮಾಡಿದ ಆರೋಪ.. ಬಿಇಒ ಕಾಲಿಗೆ ಬಿದ್ದ ಪೋಷಕರು..

author img

By

Published : Oct 12, 2021, 6:38 PM IST

Updated : Oct 12, 2021, 7:18 PM IST

hukkeri people is not satisfied with teacher attitude towards children

ಜಾತೀಯತೆ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದರೆ ಶಿಕ್ಷಕಿ ಅನುಪಮಾ ಉಡಾಫೆ ಉತ್ತರವನ್ನು ನೀಡುತ್ತಾರೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಬದಲು ಮಕ್ಕಳಲ್ಲಿ ಒಡಕು ತರುವ ಪ್ರಯತ್ನ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ..

ಚಿಕ್ಕೋಡಿ : ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜವನ್ನು ಬದಲಾವಣೆ ಮಾಡಬೇಕಿದ್ದ ಶಿಕ್ಷಕರೊಬ್ಬರು ಏನೂ ಅರಿಯದ ಮುಗ್ಧ ಮಕ್ಕಳೊಂದಿಗೆ ಜಾತೀಯತೆ ಮಾಡುತ್ತಿದ್ದಾರೆ. ಅಂತಹವರನ್ನು ವರ್ಗಾವಣೆ ಮಾಡುವ ಮೂಲಕ ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಒತ್ತಾಯಿಸಿದ ಪೋಷಕರು, ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಲಿಗೆ ಬಿದ್ದು ತಮ್ಮ ಅಸಮಾಧಾನ ಹೊರ ಹಾಕಿದರು.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಅನುಪಮಾ ಎಂ ಟಿ ಎಂಬುವರ ವಿರುದ್ಧ ಮಕ್ಕಳೊಂದಿಗೆ ಜಾತಿ ತಾರತಮ್ಯ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಲಿಗೆ ಬಿದ್ದ ಪೋಷಕರು

ಪೋಷಕರು ಹೇಳುವ ಪ್ರಕಾರ, ಶಿಕ್ಷಕಿ ಅನುಪಮಾ ನಮ್ಮ ಗ್ರಾಮದ ಶಾಲೆಗೆ ಬಂದಾಗಿನಿಂದಲೂ ದಲಿತ ಮಕ್ಕಳಿಗೆ ಜಾತೀಯತೆಯ ಬೀಜ ಬಿತ್ತುತ್ತಿರೋದ್ದಲ್ಲದೇ, ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದಾರೆ.

ಜಾತೀಯತೆ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದರೆ ಶಿಕ್ಷಕಿ ಅನುಪಮಾ ಉಡಾಫೆ ಉತ್ತರವನ್ನು ನೀಡುತ್ತಾರೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಬದಲು ಮಕ್ಕಳಲ್ಲಿ ಒಡಕು ತರುವ ಪ್ರಯತ್ನ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿಡಿಯೋ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊರೊನಾ ಉಚಿತ ಪರೀಕ್ಷೆಗೆ ಹಣ ಪೀಕುವ ಸಿಬ್ಬಂದಿ?

ಹೀಗಾಗಿ, ಇಂತಹ ಶಿಕ್ಷಕಿಯನ್ನು ಅಮಾನತು ಮಾಡಬೇಕು ಎಂದು ಪೋಷಕರು ಆಗ್ರಹಿಸಿ ಹುಕ್ಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ‌ ಕಾಲಿಗೆ ಬಿದ್ದು‌ ಮನವಿ ಮಾಡಿಕೊಂಡರು. ಈ ವೇಳೆ ಪ್ರಾಥಮಿಕ ಮಾಹಿತಿ ಪಡೆದುಕೊಂಡು ಶಿಕ್ಷಕಿಯನ್ನು ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.

Last Updated :Oct 12, 2021, 7:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.