ಒಬ್ರು ಬಿಜೆಪಿಗೆ ಹೋಗಿ ಅಲ್ಲಿಯೂ ಬಂಡುಕೋರತನ ಮಾಡ್ತಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್‌ ವಾಗ್ದಾಳಿ

author img

By

Published : Nov 28, 2021, 1:31 PM IST

akshmi hebbalkar slams against ramesh jarkiholi

ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬಿಜೆಪಿಯ ರಮೇಶ್ ಜಾರಕಿಹೊಳಿ ವಿರುದ್ಧ ಟೀಕಾ ಸಮರ ನಡೆಸಿದ್ದಾರೆ.

ಬೆಳಗಾವಿ: ವಿಧಾನ ಪರಿಷತ್ ಚುನಾವಣಾ ಹೋರಾಟದಲ್ಲಿ ರಾಜಕೀಯ ಬದ್ಧ ವೈರಿಗಳ ವಾಗ್ಯುದ್ಧ ಜೋರಾಗಿಯೇ ನಡೆಯುತ್ತಿದೆ. ಇದೀಗ ರಮೇಶ್ ಜಾರಕಿಹೊಳಿ ಒಬ್ಬ ಬಂಡುಕೋರ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.


ರಾಯಬಾಗ ತಾಲೂಕಿನ ಹಂದಿಗುಂದದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಶಾಸಕಿ, ಮೂವರಲ್ಲಿ ಎಲೆಕ್ಷನ್ ನಾವು ಗೆಲ್ಲಬೇಕು, ನಾವು ಗೆಲ್ಲಬೇಕು ಅಂತಾ ಓಡಾಡ್ತಿದ್ದೀವಿ. ಆದ್ರೆ, ಒಬ್ಬರು ಬಿಜೆಪಿಯಿಂದ ಓಡಾಡ್ತಿದ್ರೆ, ನಾವು ಕಾಂಗ್ರೆಸ್‌ನಿಂದ ಓಡಾಡ್ತಿದೀವಿ. ಒಬ್ಬರು ಪಕ್ಷೇತರವಾಗಿ ಓಡಾಡ್ತಿದ್ದಾರೆ. ಅವರು ಮುಂಚೆ ನಮ್ಮ ಪಕ್ಷದಲ್ಲಿದ್ರು. ಇಲ್ಲಿಯೂ ಬಂಡುಕೋರತನ ಮಾಡಿದ್ರು. ಇಲ್ಲಿಯೂ ಕೂಡ ಅವರಿಗೆ ಸಮಾಧಾನ ಆಗಲಿಲ್ಲ. ಈಗ ಬಿಜೆಪಿಗೆ ಹೋಗಿದ್ದು, ಅಲ್ಲಿಯೂ ಬಂಡುಕೋರತನ ಮಾಡ್ತಿದ್ದಾರೆ ಎಂದು ಹರಿಹಾಯ್ದರು.

ಬಿಜೆಪಿ ಪಕ್ಷದಲ್ಲಿ ಬಾಯಿ ತೆಗೆದ್ರೆ ರಾಮ ರಾಮ ಅಂತಾ ಹೇಳ್ತಾರೆ. ಅವರು ಒಬ್ಬ ಮಹಿಳಾ ಶಾಸಕಿ ಬಗ್ಗೆ ಮಾತನಾಡಿದ್ದಾರೆ. ನನಗೆ ಅದರ ಬಗ್ಗೆ ಕಮೆಂಟ್ ಮಾಡುವಷ್ಟು ಟೈಮ್ ಇಲ್ಲ, ತಲೆನೂ ಓಡಲ್ಲ. ನನಗೆ ನನ್ನ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕೆನ್ನೋದು ಒಂದೇ ಗುರಿ ಇದೆ. ಅರ್ಜುನನ ಗುರಿ ಪಾರಿವಾಳ ಕಣ್ಣಿಗೆ ಇತ್ತು ಅನ್ನೋ ಹಾಗೆಯೇ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸೋದೊಂದೇ ನಮ್ಮ ಗುರಿ ಎಂದರು.

ಇದನ್ನೂ ಓದಿ: ಕಾರವಾರ: ಪ್ಲೈ ಓವರ್ ಕಾಮಗಾರಿ ವೇಳೆ ಸುರಕ್ಷತೆ ಮರೆತ ಕಾರ್ಮಿಕರು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.