ETV Bharat / city

ಅನೈತಿಕ ಸಂಬಂಧ ಶಂಕೆ-ಯುವಕನಿಗೆ ರಾಡ್​ನಿಂದ ಹೊಡೆದು ಮೃತದೇಹ ಕಾಲುವೆಗೆಸೆದ ಪತಿ?

author img

By

Published : Dec 5, 2021, 1:58 PM IST

ಕಬ್ಬಿಣದ ರಾಡ್​​ನಿಂದ ಯುವಕನೊಬ್ಬನ ತಲೆಗೆ ಹೊಡೆದು ಕೊಲೆ ಮಾಡಿ ಮೃತದೇಹವನ್ನು ನಾಲೆಗೆ ಎಸೆದಿರುವ ಘಟನೆ ಬೆಂಡೆವಾಡ ಗ್ರಾಮದಲ್ಲಿ ನಡೆದಿದೆ.

murder at belagavi
ಬೆಳಗಾವಿಯಲ್ಲಿ ಯುವಕನ ಕೊಲೆ

ಚಿಕ್ಕೋಡಿ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಕಬ್ಬಿಣದ ರಾಡ್​​ನಿಂದ ಯುವಕನೊಬ್ಬನ ತಲೆಗೆ ಹೊಡೆದು ಕೊಲೆ ಮಾಡಿ ಮೃತದೇಹವನ್ನು ನಾಲೆಗೆ ಎಸೆದಿರುವ ಘಟನೆ ಬೆಂಡೆವಾಡ ಗ್ರಾಮದಲ್ಲಿ ನಡೆದಿದೆ.

murder at belagavi

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೆಂಡವಾಡ ಗ್ರಾಮದ ಅರ್ಜುನ ಮಾರುತಿ ನಗಾಡೆ (30) ಕೊಲೆಯಾದ ವ್ಯಕ್ತಿ. ಇವರು ಕಳೆದ ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಹೀಗಾಗಿ ರಾಯಭಾಗ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ನೀಡಿದ್ದರು. ಇಂದು ಬೆಳಗಿನ ಜಾವ ಅರ್ಜುನ ಮಾರುತಿ ನಗಾಡೆ ಶವ ಗೋಕಾಕ ತಾಲೂಕಿನ ಕಾಲುವೆಯೊಂದರಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಸಿಕ್ಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ : ಮಾಜಿ ಸಿಎಂ ಹೆಚ್​​​​ಡಿಕೆ

ಮಾರುತಿ ನಗಾಡೆ ಅದೇ ಗ್ರಾಮದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನು. ಇದನ್ನು ಸಹಿಸದ ಪತಿ ಭೀಮಪ್ಪ ತಟ್ಟಿಮನಿ (34) ಆತನ ಕೊಲೆ ಮಾಡಿ ಕಾಲುವೆಗೆ ಎಸೆದು ಹೋಗಿದ್ದಾನೆ ಎಂಬುದು ಪೊಲೀಸರಿಗೆ ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ಆರೋಪಿಯ ಬಲೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾಯಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.