ETV Bharat / city

ಸಂಗೊಳ್ಳಿ ರಾಯಣ್ಣನ ಪ್ರತಿಮೆ ಕೆಡವಿದ ಕಿಡಿಗೇಡಿಗಳು: ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ

author img

By

Published : Dec 18, 2021, 9:31 AM IST

ಸಂಗೊಳ್ಳಿ ರಾಯಣ್ಣನ ಪುತ್ಥಳಿ ಕೆಡವಿ ಅಟ್ಟಹಾಸ ಮೆರೆದಿರುವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

pro Kannada activists Protest
ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ

ಬೆಳಗಾವಿ : ಇಲ್ಲಿನ ಅನಗೋಳದ ಕನಕದಾಸ ಕಾಲೋನಿಯಲ್ಲಿ ಇಂದು ನಸುಕಿಜಾವ 3 ಗಂಟೆ ಸುಮಾರಿಗೆ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಕೆಡವಿ ಕೆಲ ಪುಂಡರು ಅಟ್ಟಹಾಸ ಮೆರೆದಿರುವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.

ನಗರದ ಟಿಳಕವಾಡಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿರುವ ಕನ್ನಡಪರ ಹೋರಾಟಗಾರರು, ಕೂಡಲೇ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸುತ್ತಿದ್ದಾರೆ.

ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ

ಜಿಲ್ಲೆಯಲ್ಲಿ ಪುಂಡರ ಹಾವಳಿ ಹೆಚ್ಚಾಗ್ತಿದೆ. ಅಧಿವೇಶನದ ಸಮಯದಲ್ಲೇ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿದ್ದು, ಪ್ರತಿಭಟನೆ ಜೊತೆಗೆ ಪೊಲೀಸರಿಗೆ ‌ಹೊಸ ತಲೆನೋವು ಶುರುವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.