ETV Bharat / city

ಬೆಳಗಾವಿ : MES ನಿಷೇಧಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

author img

By

Published : Oct 27, 2021, 2:43 PM IST

protest in belagavi
MES ನಿಷೇಧಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

ಕಾನೂನು ಉಲ್ಲಂಘಿಸಿ ಪ್ರತಿಭಟನೆ ಮಾಡಿರುವ 200 ಎಂಇಎಸ್, ಶಿವಸೇನೆ ಕಾರ್ಯಕರ್ತರ ವಿರುದ್ಧ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಎಂಇಎಸ್ ಮಾಜಿ ಶಾಸಕ ಮನೋಹರ್ ಕಿಣೇಕರ್, ದೀಪಕ್ ದಳವಿ, ಶಿವಸೇನೆ ಮುಖಂಡ ಪ್ರಕಾಶ ಶಿರೋಳಕರ, ಮಾಜಿ ಮೇಯರ್, ಹಾಲಿ ಪಾಲಿಕೆ ಸದಸ್ಯ ಸೇರಿ 26 ಮುಖಂಡರು ಹಾಗೂ 200 ಅಪರಿಚಿತರ ವಿರುದ್ಧ ದೂರು ದಾಖಲಾಗಿದೆ..

ಬೆಳಗಾವಿ : ನಾಡದ್ರೋಹಿ ಎಂಇಎಸ್, ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆಗೆ ಖಂಡಿಸಿ ಕರವೇ (ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕರವೇ ಕಾರ್ಯಕರ್ತರು ಎಂಇಎಸ್ ಹಾಗೂ ಶಿವಸೇನೆ ವರ್ತನೆ ಖಂಡಿಸಿದರು. ಎಂಇಎಸ್ ಹಾಗೂ ಶಿವಸೇನೆ ಮುಖಂಡರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

MES ನಿಷೇಧಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ

ನಾಡದ್ರೋಹಿ ಚಟುವಟಿಕೆ ನಡೆಸುತ್ತಿರುವ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಮನವಿ ಸಲ್ಲಿಸಿದ ಕರವೇ ಕಾರ್ಯಕರ್ತರು, ಎಂಇಎಸ್ ನಿಷೇಧಿಸಲು ಕ್ರಮ ವಹಿಸುವಂತೆ ಮನವಿ ಮಾಡಿದರು.

ಘಟನೆ : ಬೆಳಗಾವಿ ಮಹಾನಗರ ಪಾಲಿಕೆ ಮೇಲಿನ ಕನ್ನಡ ಧ್ವಜ ತೆರವುಗೊಳಿಸಬೇಕು, ಕನ್ನಡ ರಾಜ್ಯೋತ್ಸವದಂದು ಕರಾಳ ದಿನಕ್ಕೆ ಅವಕಾಶ ನೀಡಬೇಕು ಹಾಗೂ ಮರಾಠಿಯಲ್ಲಿ ನಾಮಫಲಕ ಹಾಕುವಂತೆ ಎಂಇಎಸ್ ಕಾರ್ಯಕರ್ತರು ಪುಂಡಾಟ ಪ್ರದರ್ಶಿಸಿದ್ದರು. ಪ್ರತಿಭಟನಾ ಮೆರವಣಿಗೆಗೆ ಅವಕಾಶ ನೀಡದಿದ್ದರೂ ಎಂಇಎಸ್ ಕಾರ್ಯಕರ್ತರು ಮೆರವಣಿಗೆ ಮಾಡಿ ನಿಯಮ ಉಲ್ಲಂಘಿಸಿದ್ದರು.

ಇದನ್ನೂ ಓದಿ: ಎಂಇಎಸ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಬೆಳಗಾವಿ ಪೊಲೀಸರು

ಕಾನೂನು ಉಲ್ಲಂಘಿಸಿ ಪ್ರತಿಭಟನೆ ಮಾಡಿರುವ 200 ಎಂಇಎಸ್, ಶಿವಸೇನೆ ಕಾರ್ಯಕರ್ತರ ವಿರುದ್ಧ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಎಂಇಎಸ್ ಮಾಜಿ ಶಾಸಕ ಮನೋಹರ್ ಕಿಣೇಕರ್, ದೀಪಕ್ ದಳವಿ, ಶಿವಸೇನೆ ಮುಖಂಡ ಪ್ರಕಾಶ ಶಿರೋಳಕರ, ಮಾಜಿ ಮೇಯರ್, ಹಾಲಿ ಪಾಲಿಕೆ ಸದಸ್ಯ ಸೇರಿ 26 ಮುಖಂಡರು ಹಾಗೂ 200 ಅಪರಿಚಿತರ ವಿರುದ್ಧ ದೂರು ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.