ETV Bharat / city

ಆರ್‌.ಎನ್‌.ನಾಯಕ ಕೊಲೆ ಕೇಸ್‌: ಬನ್ನಂಜೆ ರಾಜಾ ಸೇರಿ 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

author img

By

Published : Apr 4, 2022, 12:15 PM IST

Updated : Apr 4, 2022, 8:11 PM IST

ಆರ್.ಎನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿದಂತೆ ಎಂಟು ಅಪರಾಧಿಗಳಿಗೆ ಬೆಳಗಾವಿ ಕೋಕಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

Bannanje Raja sentenced to life imprisonment by Karnataka court  RN Nayak murder case news  underworld gangster Bannanje Raja case judgement  Karnataka court news  ಬೆಳಗಾವಿ ನ್ಯಾಯಾಲಯದಿಂದ ಬನ್ನಂಜೆ ರಾಜಾಗೆ ಜೀವಾವಧಿ ಶಿಕ್ಷೆ ಪ್ರಕಟ  ಆರ್​ಎನ್ ನಾಯಕ್ ಹತ್ಯೆ ಪ್ರಕರಣದ ಸುದ್ದಿ  ಭೂಗತ ಪಾತಕಿ ಬನ್ನಂಜೆ ರಾಜಾ ಪ್ರಕರಣದ ತೀರ್ಪು  ಕರ್ನಾಟಕ ನ್ಯಾಯಾಲಯದ ಸುದ್ದಿ  karnataka court to life time sentence for bannanje raja  ರಾಜ್ಯದ ಮೊದಲ ಕೋಕಾ ತೀರ್ಪು ಪ್ರಕಟ  Karnataka first coca case verdict announced
ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಅಂಕೋಲಾದ ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ಎಂಟು ಅಪರಾಧಿಗಳಿಗೆ ಇಲ್ಲಿನ ಕೋಕಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮಾರ್ಚ್ 30ರಂದು ಪ್ರಕರಣದಲ್ಲಿ 9 ಮಂದಿ ದೋಷಿಗಳು ಎಂದು ನ್ಯಾಯಾಧೀಶ ಸಿ.ಎಂ‌.ಜೋಶಿ ತೀರ್ಪು ಪ್ರಕಟಿಸಿದ್ದು, ಇದರಲ್ಲಿ ಎಂಟು ಮಂದಿಗೆ ಶಿಕ್ಷೆಯಾಗಿದೆ.

2013 ಡಿಸೆಂಬರ್ 21 ರಂದು ಉತ್ತರ ಕನ್ನಡ ‌ಜಿಲ್ಲೆಯ ಅಂಕೋಲಾದಲ್ಲಿ ಉದ್ಯಮಿ ಆರ್.ಎನ್.ನಾಯಕ ಅವರನ್ನು ಕೊಲೆ ಮಾಡಲಾಗಿತ್ತು. 3 ಕೋಟಿ ಹಫ್ತಾ ನೀಡದಿರುವುದಕ್ಕೆ ಭೂಗತ ಪಾತಕಿ ಬನ್ನಂಜೆ ರಾಜಾ ಹಾಗೂ ಆತನ ಸಹಚರರು ಹತ್ಯೆಗೆ ಸಂಚು ರೂಪಿಸಿದ್ದರು. ಆರೋಪಿಗಳ ವಿರುದ್ಧ ಪೊಲೀಸರು ಕೋಕಾ ಕೇಸ್ ದಾಖಲಿಸಿ ತನಿಖೆ ನಡೆಸಿದ್ದರು. 9 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆದು ಇದೀಗ 8 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರ ವಿಶೇಷ ಅಭಿಯೋಜಕ ಕೆ.ಜಿ‌.ಪುರಾಣಿಕಮಠ ಪ್ರತಿಕ್ರಿಯೆ

ಪ್ರಕರಣದ ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ,‌ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ., ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12ನೇ ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್‌ಗೆ ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿಗಳು.

ಇದನ್ನೂ ಓದಿ: ಶ್ರೀಲಂಕಾ ಸೆಂಟ್ರಲ್​ ಬ್ಯಾಂಕ್​ ಗವರ್ನರ್​ ರಾಜೀನಾಮೆ

ಪ್ರಕರಣದ‌ ಐದನೇ ‌ಆರೋಪಿ ಕೇರಳದ‌ ಕೆ.ಎಂ‌.‌ಇಸ್ಮಾಯಿಲ್​ಗೆ ಮೂರು ಸೆಕ್ಷನ್ ಅಡಿ ಪ್ರತ್ಯೇಕವಾಗಿ 13 ವರ್ಷಗಳ ಕಾರಾಗೃಹ ಶಿಕ್ಷೆ ಜೊತೆಗೆ 15 ಸಾವಿರ ರೂ ದಂಡ ವಿಧಿಸಲಾಗಿದೆ. ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಆರೋಪಿಗಳಿಗೂ ದಂಡ ವಿಧಿಸಲಾಗಿದೆ. ಆರ್.ಎನ್.ನಾಯಕ ಅವರ ಪತ್ನಿಗೆ 30 ಲಕ್ಷ ರೂ ಪರಿಹಾರ ಒದಗಿಸಬೇಕು.‌ ಪುತ್ರ ಹಾಗೂ ಸಾಕ್ಷಿ ಹೇಳಿದ ಮೈಸೂರು ಮೂಲದ‌ ಮಹಿಳೆಗೆ ಪೊಲೀಸ್ ‌ಭದ್ರತೆ ಒದಗಿಸಬೇಕು ಎಂದು ಉತ್ತರ ‌ಕನ್ನಡ ಎಸ್.ಪಿ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ನ್ಯಾಯಾಲಯ ‌ನಿರ್ದೇಶನ ನೀಡಿದೆ.

ಸರ್ಕಾರದ ಪರ ವಿಶೇಷ ಅಭಿಯೋಜಕ ಕೆ.ಜಿ‌.ಪುರಾಣಿಕಮಠ, ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ವಕಾಲತ್ತು ವಹಿಸಿದ್ದರು. ಬನ್ನಂಜೆ ರಾಜಾ ಪರ ವಕೀಲ ಎಂ.ಶಾಂತಾರಾಮ ಶೆಟ್ಟಿ‌ ವಾದ ಮಂಡಿಸಿದ್ದರು. ಬೆಳಗಾವಿಯಲ್ಲಿ ವಿಶೇಷ ಅಭಿಯೋಜಕ ಕೆ.ಜಿ.ಪುರಾಣಿಕಮಠ ಮಾತನಾಡಿ, ಕೋಕಾ ನ್ಯಾಯಾಲಯದಿಂದ 8 ಜನರಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಮರಣದಂಡನೆ ಶಿಕ್ಷೆ ಆಗಬೇಕಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದರು.

ಇದನ್ನೂ ಓದಿ: ಜಲಶಕ್ತಿ ಸಚಿವರ ಭೇಟಿಗೆ ಸಮಯ ನಿಗದಿ : ನಾಳೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಫಿಕ್ಸ್

Last Updated : Apr 4, 2022, 8:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.