ETV Bharat / city

ವಿಜಯನಗರದಲ್ಲಿ ಬಿರುಗಾಳಿಯ ಅಬ್ಬರ: 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ

author img

By

Published : Jul 8, 2021, 11:28 AM IST

ವಿಜಯನಗರ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಬಿರುಗಾಳಿ ಮಳೆಗೆ 10ಕ್ಕೂ ಮನೆಗಳಿಗೆ ಹಾನಿಯುಂಟಾಗಿದ್ದು, ಈ ಪೈಕಿ ಕೆಲ ಮನೆಗಳು ಭಾಗಶಃ ನೆಲಕಚ್ಚಿವೆ.

vijayanagar
ವಿಜಯನಗರದಲ್ಲಿ ಬಿರುಗಾಳಿಯ ಅಬ್ಬ

ಹೊಸಪೇಟೆ : ವಿಜಯನಗರ ‌ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಕಮಾರನಹಳ್ಳಿ ತಾಂಡದಲ್ಲಿ ಬುಧವಾರ ರಾತ್ರಿ ಸುರಿದ ಬಿರುಗಾಳಿ ಮಳೆಯಿಂದ ಹಲವು ಮನೆಗಳಿಗೆ ಹಾನಿಯುಂಟಾಗಿದೆ. ಜೊತೆಗೆ ಹಲವು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ.

ವಿಜಯನಗರದಲ್ಲಿ ಬಿರುಗಾಳಿಯ ಅಬ್ಬರ: 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಬಿರುಗಾಳಿ ಮಳೆಗೆ 10ಕ್ಕೂ ಮನೆಗಳಿಗೆ ಹಾನಿಯುಂಟಾಗಿದ್ದು, ಈ ಪೈಕಿ ಕೆಲ ಮನೆಗಳು ಭಾಗಶಃ ನೆಲಕಚ್ಚಿವೆ. ಗಾಳಿಯ ವೇಗಕ್ಕೆ ಕೆಲ ಮನೆಗಳ ತಗಡುಗಳು ಹಾರಿಹೋಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ.

ಹಲವು ಮನೆಗಳ ಮೇಲೆ ಮರಗಳು ಉರುಳಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.‌ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಮಾಜಿ ಸಂಸದ ಜಿ. ಮಾದೇಗೌಡರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.