ETV Bharat / city

ಸಚಿವ ಆನಂದ್ ಸಿಂಗ್​ಗೆ ವಿಜಯನಗರ ಜಿಲ್ಲಾ ಉಸ್ತುವಾರಿ: ಹೈಕಮಾಂಡ್ ಸೂಚನೆ ಮೀರಿದ ಸಿಎಂ?

author img

By

Published : Jul 30, 2022, 2:23 PM IST

anand singh
ಆನಂದ್ ಸಿಂಗ್​

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಸಚಿವರಾಗಿರುವ ಆನಂದ್ ಸಿಂಗ್ ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಪ್ರವಾಸೋದ್ಯಮ, ಪರಿಸರ, ಜೀವಿಶಾಸ್ತ್ರ ಸಚಿವರಾಗಿರುವ ಆನಂದ್ ಸಿಂಗ್​ಗೆ ವಿಜಯನಗರ ಜಿಲ್ಲಾ ಉಸ್ತವಾರಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ಆನಂದ್ ಸಿಂಗ್ ಒತ್ತಡಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮಣಿದಿದ್ದಾರಾ? ಎಂಬ ಅನುಮಾನ ಮೂಡಿದೆ.

ಸಚಿವ ಆನಂದ್ ಸಿಂಗ್​ಗೆ ಸ್ವಂತ ಜಿಲ್ಲೆ ವಿಜಯನಗರ ಉಸ್ತುವಾರಿ ನೀಡಿದ್ದರೆ, ಶಶಿಕಲಾ ಜೊಲ್ಲೆಗೆ ಕೊಪ್ಪಳ ಜಿಲ್ಲೆಯ ಉಸ್ತುವಾರಿ ನೀಡಿ ಆದೇಶ ಹೊರಡಿಸಲಾಗಿದೆ. ಆನಂದ್ ಸಿಂಗ್ ಹಾಗೂ ಶಶಿಕಲಾ ಜೊಲ್ಲೆಯ ಉಸ್ತುವಾರಿಗಳನ್ನು ಅದಲು-ಬದಲು ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ.

ಸ್ವಂತ ಜಿಲ್ಲೆಗಳ ಉಸ್ತುವಾರಿ ನೀಡುವಂತಿಲ್ಲ ಎಂಬ ಹೈಕಮಾಂಡ್ ಸೂಚನೆ ಇದ್ದರೂ ಸಿಎಂ ಬೊಮ್ಮಾಯಿ‌ ಅವರು ಆನಂದ್ ಸಿಂಗ್​ಗೆ ವಿಜಯನಗರ ಜಿಲ್ಲಾ ಉಸ್ತುವಾರಿ ನೀಡಿರುವುದು ಕುತೂಹಲ ಕೆರಳಿಸಿದೆ‌.

ಇದನ್ನೂ ಓದಿ: ಬೊಮ್ಮಾಯಿ ಮಾಡೆಲ್​ ವಿಫಲವಾಯಿತು ಎಂದು ಒಪ್ಪಿಕೊಂಡಿದ್ದಾರಾ?: ಯುಪಿ ಮಾಡೆಲ್ ಹೇಳಿಕೆಗೆ ಖಾದರ್ ತಿರುಗೇಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.